Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಕಟ್ಟೆಮಾಡು ದೇವಾಲಯ ಅಚ೯ಕರ ಮೇಲೆ ಹಲ್ಲೆ...

ಕಟ್ಟೆಮಾಡು ದೇವಾಲಯ ಅಚ೯ಕರ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ 2 ದಿನಗಳ ಗಡುವು ನೀಡಿದ ಬ್ರಾಹ್ಮಣ ಸಮಾಜ

ವಾರ್ತಾಭಾರತಿವಾರ್ತಾಭಾರತಿ28 Jan 2025 11:57 PM IST
share
ಕಟ್ಟೆಮಾಡು ದೇವಾಲಯ ಅಚ೯ಕರ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ 2 ದಿನಗಳ ಗಡುವು ನೀಡಿದ ಬ್ರಾಹ್ಮಣ ಸಮಾಜ

ಮಡಿಕೇರಿ: ಕಟ್ಟೆಮಾಡು ಗ್ರಾಮದ ಶ್ರೀ ಮೖತ್ಯಂಜಯ ದೇವಾಲಯದ ಅಚ೯ಕರ ಮೇಲಿನ ಹಲ್ಲೆಯನ್ನು ಖಂಡಿಸಿರುವ ಕೊಡಗು ಬ್ರಾಹ್ಮಣ ಸಮಾಜ, ಹಲ್ಲೆ ಆರೋಪಿಗಳ ಬಂಧನಕ್ಕೆ ಎರಡು ದಿನಗಳ ಗಡುವನ್ನು ನೀಡಿದೆ. ತಪ್ಪಿದ್ದಲ್ಲಿ ಜ. 31 ರಂದು ಜಿಲ್ಲೆಯಾದ್ಯಂತ ದೇವಾಲಯಗಳಲ್ಲಿ ಬೆಳಗ್ಗಿನ ಪೂಜೆ ಪೂರೈಸಿ ಅನಂತರ ಭಕ್ತರಿಗೆ ದೇವಾಲಯವನ್ನು ಬಂದ್ ಮಾಡಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಲಾಗಿದೆ.

ನಗರದ ಪೊಲೀಸ್ ವರಿಷ್ಟಾಧಿಕಾರಿ ಕಚೇರಿ ಮುಂದೆ ಬ್ರಾಹ್ಣಣ ಸಮಾಜದ ನೂರಾರು ಮಂದಿ ಪ್ರತಿಭಟನೆ ನಡೆಸಿದರು.

ಪೊಲೀಸ್ ವರಿಷ್ಟಾಧಿಕಾರಿ ಕೆ. ರಾಮರಾಜನ್ ಅವರನ್ನು ಭೇಟಿಯಾದ ಬ್ರಾಹ್ಮಣ ವಿದ್ಯಾಭಿವೖದ್ದಿ ನಿಧಿ ಕೊಡಗು ಅಧ್ಯಕ್ಷರಾದ ರಾಮಚಂದ್ರಮೂಗೂರು, ಪ್ರಮುಖರಾದ ಶ್ರೀಧರ್ ನೆಲ್ಲಿತ್ತಾಯ, ಜಿ.ಟಿ. ರಾಘವೇಂದ್ರ ಬಿ.ಜಿ ಅನಂತಶಯನ, ಎಸ್.ಎಸ್. ಸಂಪತ್ ಕುಮಾರ್, ವಕೀಲ ಕೖಷ್ಣಮೂತಿ೯, ಪ್ರಭಾಕರ್ ನೆಲ್ಲಿತ್ತಾಯ, ಡಾ. ರಾಜಾರಾಮ್, ರಾಜಶೇಖರ್, ನಿದೇ೯ಶಕ ಮಂಜುನಾಥ್, ಕೆ.ಕೆ.ವಿಶ್ವನಾಥ್, ಎ.ಗೋಪಾಲಕೖಷ್ಣ , ಅಚ೯ಕರ ಸಂಘದ ಪ್ರಮುಖ ಮಹಾಬಲೇಶ್ವರ ಭಟ್, ರಾಮಕೖಷ್ಣ, ಸುದಶ೯ನ್ , ಪವನ್, ಕೊಡಗು ಬ್ರಾಹ್ಮಣ ಕ್ಷೇಮಾಭಿವೖದ್ದಿ ಸಂಘದ ಅಧ್ಯಕ್ಷ ರಾಘವೇಂದ್ರ ವೈಲಾಯ, ನಿವೖತ್ತ ಮೇಜರ್ ವೆಂಕಟಗಿರಿ, ಹೆಚ್.ಎಸ್. ತಿಮ್ಮಪ್ಪಯ್ಯ, ಹಾ.ತಿ.ಜಯಪ್ರಕಾಶ್, ಡಿ.ಆರ್. ಪ್ರಶಾಂತ್ ಮಹೇಶ್ ಸಗಿ೯ತಾಯ, ಕೆ.ವಿ. ವೆಂಕಟರಮಣ, ವರುಣ್ ಶಮಾ೯, ವೀಣಾ ಪುರುಷೋತ್ತಮ, ನೀರಜ ರಮೇಶ್ ಸೇರಿದಂತೆ ಹಲವರು ಒತ್ತಾಯ ಪತ್ರವನ್ನು ಸಲ್ಲಿಸಿದರು.

ಕಟ್ಟೆಮಾಡು ದೇವಾಲಯದ ಅಚ೯ಕರಾದ ವಿಘ್ನೇಷ್ ಭಟ್ ಅವರ ಮೇಲೆ ಹಲ್ಲೆ ನಡೆಸಿ, ಸ್ಥಳದಲ್ಲಿದ್ದ ಅವರ ತಾಯಿ ಮೇಲೆ ಕೂಡ ಹಲ್ಲೆ ಮಾಡಿರುವುದು ಖಂಡನೀಯ. ಪ್ರಕರಣದ ಪ್ರಮುಖ ಆರೋಪಿ ಮಂಡೇಟಿರ ಅನಿಲ್ ಮತ್ತು ಜತೆಗಿದ್ದವರನ್ನು ಪೊಲೀಸರು ಇನ್ನು 2 ದಿನಗಳೊಳಗೆ ಬಂಧಿಸಬೇಕು. ಬಂಧನ ಆಗದೇ ಹೋದಲ್ಲಿ ಜ. 31 ರಂದು ಶುಕ್ರವಾರ ಬೆಳಗ್ಗೆ ಬ್ರಾಹ್ಮಣ ಸಮಾಜದಿಂದ ತೀವ್ರ ಪ್ರತಿಭಟನೆ ಕೈಗೊಳ್ಳಲಾಗುತ್ತದೆ ಎಚ್ಚರಿಕೆ ನೀಡಲಾಯಿತು.

ಹಲ್ಲೆ ಘಟನೆಯ ಹಿಂದೆ ಯಾರೇ ಪ್ರಭಾವಿಗಳು ಇದ್ದರೂ ಪೊಲೀಸರು ಬಹಿರಂಗಗೊಳಿಸಬೇಕು. ಆರೋಪಿಗಳನ್ನು ಹೆಡೆಮುರಿ ಕಟ್ಟುವ ಸಂದಭ೯ ಯಾರದ್ದೇ ಪ್ರಭಾವಕ್ಕೆ ಮಣಿಯಬಾರದು ಎಂದೂ ಪೊಲೀಸ್ ವರಿಷ್ಟಾಧಿಕಾರಿಗಳನ್ನು ಒತ್ತಾಯಿಸಲಾಯಿತು.

ಈ ಸಂದಭ೯ ಮಾತನಾಡಿದ ಪೊಲೀಸ್ ವರಿಷ್ಟಾಧಿಕಾರಿ ರಾಮರಾಜನ್, ಆರೋಪಿಗಳ ಪತ್ತೆಗೆ ಈಗಾಗಲೇ ಪೊಲೀಸ್ ತಂಡ ಕಾಯ೯ಪ್ರವೃತ್ತವಾಗಿದೆ. ಈವರೆಗೂ ಯಾವುದೇ ಒತ್ತಡ ಬರಲಿಲ್ಲ. ಯಾವುದೇ ಪ್ರಭಾವಕ್ಕೂ ಮಣಿಯದೇ ಪೊಲೀಸರು ಆರೋಪಿಗಳ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಭರವಸೆ ನೀಡಿದರು.

ಜಿಲ್ಲಾಧಿಕಾರಿಗಳ ಭೇಟಿ:

ಜಿಲ್ಲಾಧಿಕಾರಿ ವೆಂಕಟರಾಜಾ ಅವರನ್ನೂ ಭೇಟಿಯಾದ ಬ್ರಾಹ್ಮಣ ವಿಧ್ಯಾಭಿವೖದ್ದಿ ನಿಧಿ ಕೊಡಗು ಪ್ರಮುಖರು, ಅಚ೯ಕರ ಮೇಲೆ ಹಲ್ಲೆ ಮಾಡಿದವರನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿದರು. ಬ್ರಾಹ್ಮಣ ವಿಧ್ಯಾಭಿವೖದ್ದಿ ನಿಧಿ ಕೊಡಗು ಅಧ್ಯಕ್ಷ ರಾಮಚಂದ್ರಮೂಗೂರು ರಾಘವೇಂದ್ರ ವೈಲಾಯ, ಜಿ. ಆರ್. ರವಿಶಂಕರ್ ರಿಸೇರಿದಂತೆ ಪ್ರಮುಖರು ಹಾಜರಿದ್ದರು. ಪೊಲೀಸರು ಈಗಾಗಲೇ ತನಿಖೆ ಕೈಗೊಂಡಿದ್ದು, ಶೀಘ್ರದಲ್ಲಿಯೇ ಆರೋಪಿಗಳ ಬಂಧನದ ಭರವಸೆ ಇದೆ. ಕೊಡಗು ಶಿಕ್ಷಣವಂತರು, ಪ್ರಜ್ಞಾವಂತರ ಜಿಲ್ಲೆ ಎನಿಸಿದ್ದು ಈ ಜಿಲ್ಲೆಯಲ್ಲಿ ಎರಡು ಸಮುದಾಯಗಳ ಜನರು ಶಾಂತಿ ಸುವ್ಯವಸ್ಥೆ ಕಾಪಾಡಲ ಸೌಹಾಧ೯ಯುುತವಾಗಿ ಮುಂದಾಗುವ ನಿಟ್ಟಿನಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮ ಕೈಗೊಳ್ಳುತ್ತಿದೆ ಎಂದೂ ಜಿಲ್ಲಾಧಿಕಾರಿ ವೆಂಕಟರಾಜಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X