Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಮಡಿಕೇರಿ | ನಕಲಿ ಚಿನ್ನ ಅಡವಿಟ್ಟು ವಂಚನೆ...

ಮಡಿಕೇರಿ | ನಕಲಿ ಚಿನ್ನ ಅಡವಿಟ್ಟು ವಂಚನೆ ; 12 ಮಂದಿ ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ19 Dec 2024 11:11 PM IST
share
ಮಡಿಕೇರಿ | ನಕಲಿ ಚಿನ್ನ ಅಡವಿಟ್ಟು ವಂಚನೆ ; 12 ಮಂದಿ ಆರೋಪಿಗಳ ಬಂಧನ

ಮಡಿಕೇರಿ : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮತ್ತು ಇದರ ವಿವಿಧ ಶಾಖೆಗಳು ಸೇರಿದಂತೆ ಹಣಕಾಸು ಸಂಸ್ಥೆಗಳಲ್ಲಿ ನಕಲಿ ಚಿನ್ನವನ್ನು ಅಡವಿಟ್ಟು 34,95,016 ರೂ. ವಂಚಿಸಿರುವ ಪ್ರಕರಣದ 12 ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ನಗರದ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮುಖ್ಯ ಶಾಖೆಯಲ್ಲಿ ಮುಹಮ್ಮದ್ ರಿಝ್ವಾನ್ ಕೆ.ಎ. ಎಂಬಾತ ಡಿ.4ರಂದು 8 ಚಿನ್ನದ ಬಳೆಗಳನ್ನು ಅಡಮಾನವಿಟ್ಟು ಸಾಲ ಪಡೆಯುವ ಸಂದರ್ಭ, ಆಭರಣಗಳನ್ನು ಪರಿಶೀಲಿಸಿದಾಗ ಅವುಗಳು ನಕಲಿ ಎನ್ನುವುದು ಕಂಡು ಬಂದಿದೆ. ಇದೇ ರೀತಿ ಎಮ್ಮೆಮಾಡು ನಿವಾಸಿಗಳಾದ ರಿಯಾಝ್, ಖತೀಜಾ, ಮುಹಮ್ಮದ್ ಹನೀಫ್, ಕುಂಜಿಲ ಗ್ರಾಮದ ನಿವಾಸಿಗಳಾದ ಅಬ್ದುಲ್ ನಾಸೀರ್, ಮೂಸಾ ಮತ್ತು ಹಂಝ ಎಂಬವರು ಮಡಿಕೇರಿ, ಭಾಗಮಂಡಲ, ವೀರಾಜಪೇಟೆ, ಕಡಂಗಗಳಲ್ಲಿನ ಕೆಡಿಸಿಸಿ ಬ್ಯಾಂಕ್, ಮಡಿಕೆೇರಿಯ ಮುತ್ತೂಟ್ ಫಿನ್ ಕಾರ್ಪ್ ಮತ್ತು ಭಾಗಮಂಡಲ ವಿಎಸ್‌ಎಸ್‌ಎನ್ ಬ್ಯಾಂಕ್‌ಗಳಲ್ಲಿ ಒಟ್ಟು 625 ಗ್ರಾಂ. ನಕಲಿ ಚಿನ್ನಾಭರಣಗಳನ್ನು ಅಡಮಾನವಿಟ್ಟು ಸಾಲ ಪಡೆದಿದ್ದರೆಂದು ತಿಳಿಸಿದರು.

ವಂಚನೆ ಪ್ರಕರಣದಲ್ಲಿ ಕೇರಳದ ಮಲಪ್ಪುರಂ ನಿವಾಸಿ ನವಾಝ್ ಎಂಬಾತ ನಕಲಿ ಚಿನ್ನ ನೀಡಿರುವುದು ಕಂಡು ಬಂದಿದ್ದು, ಮತ್ತಷ್ಟು ತನಿಖೆ ನಡೆಸಿದ ಸಂದರ್ಭ ಈ ಕೃತ್ಯದ ರೂವಾರಿ ಕೆೇರಳದ ಎರ್ನಾಕುಲಂ ಜಿಲ್ಲೆಯ ಅಕ್ಕಸಾಲಿಗ ಮುಹಮ್ಮದ್ ಕುಂಞ ಎಂಬುದು ಪತ್ತೆಯಾಗಿರುವುದಾಗಿ ಎಸ್ಪಿ ಮಾಹಿತಿ ನೀಡಿದರು.

ಬಂಧಿತ ಆರೋಪಿಗಳು :

ಪ್ರಕರಣದ ಆರೋಪಿಗಳಾದ ಕುಂಜಿಲದ ಮುಹಮ್ಮದ್ ರಿಝ್ವಾನ್, ಎಮ್ಮೆಮಾಡುವಿನ ರಿಯಾಝ್ ಪಿ.ಎಚ್., ಕುಂಜಿಲದ ಅಬ್ದುಲ್ ನಾಸೀರ್, ಮಲಪ್ಪುರಂನ ನವಾಝ್ ಕೆ.ಪಿ., ಎರ್ನಾಕುಲಂನ ನಿಶಾದ್ ಕೆ.ಎ., ಮುಹಮ್ಮದ್ ಕುಂಞ, ಪ್ರದೀಪ್ ಪಿ.ಜೆ., ಎಮ್ಮೆಮಾಡುವಿನ ಮೂಸಾ, ಪಡಿಯಾನಿಯ ಮುಹಮ್ಮದ್ ಹನೀಫ್ ಎಂ.ಎಂ., ಎಮ್ಮೆಮಾಡುವಿನ ಖತೀಜಾ, ಅಯ್ಯಂಗೇರಿಯ ರಫೀಕ್ ಮತ್ತು ಫರಾನ್ ಎಂಬವವರನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿಯ ಬಂಧನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದರು.

ಪ್ರಕರಣದಲ್ಲಿ 223 ಗ್ರಾಂ. ತೂಕದ ಚಿನ್ನ ಲೇಪಿತ 28 ಬಳೆಗಳು, 2 ಲಕ್ಷ ನಗದು, 1.40 ಲಕ್ಷ ರೂ. ಮೌಲ್ಯದ ಒಂದು ಐಫೋನ್ ವಶಪಡಿಸಿಕೊಂಡಿರುವುದಲ್ಲದೆ, ಬ್ಯಾಂಕ್ ಖಾತೆಯ ಫ್ರೀಜ್ ಮೊತ್ತ 2,08,221, ವಿಮೆ ಮೇಲೆ ಹಣ ಹೂಡಿಕೆಯ 1,26,504 ರೂ. ಅನ್ನು ವಶಕ್ಕೆ ಪಡೆದಿರುವುದಾಗಿ ಎಸ್ಪಿ ತಿಳಿಸಿದರು.

ಕಾರ್ಯಾಚರಣೆಯಲ್ಲಿ ಮಡಿಕೇರಿ ಉಪ ವಿಭಾಗದ ಡಿವೈಎಸ್ಪಿ ಮಹೇಶ್ ಕುಮಾರ್, ಸೆನ್ ಡಿವೈಎಸ್ಪಿ ರವಿ, ಸಿಪಿಐ ರಾಜು ಪಿ.ಕೆ., ಸಿಪಿಐ ಅನೂಪ್ ಮಾದಪ್ಪ, ಡಿಸಿಆರ್‌ಬಿ ಪಿಐ ಮೇದಪ್ಪ, ಮಡಿಕೇರಿ ನಗರ ಪಿಎಸ್ಸೈ ಲೋಕೇಶ್, ಭಾಗಮಂಡಲ ಪಿಎಸ್ಸೈ ಶೋಭಾ ಲಾಮಣಿ, ಅಪರಾಧ ಪತ್ತೆ ಸಿಬ್ಬಂದಿ, ಡಿಸಿಆರ್‌ಬಿ ಹಾಗೂ ತಾಂತ್ರಿಕ ಸಿಬ್ಬಂದಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X