Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಧಾರಾಕಾರ...

ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಧಾರಾಕಾರ ಮಳೆ : ವಿದ್ಯುತ್ ಕಂಬ, ಮನೆ, ಕಾರುಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ14 July 2024 6:58 PM IST
share
ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಧಾರಾಕಾರ ಮಳೆ : ವಿದ್ಯುತ್ ಕಂಬ, ಮನೆ, ಕಾರುಗಳಿಗೆ ಹಾನಿ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಗಾಳಿಗೆ ಮರದ ಕೊಂಬೆ ಬಿದ್ದು ಸುಮಾರು ಆರು ಕಾರುಗಳು ಜಖಂಗೊಂಡಿವೆ. ವಿವಿಧೆಡೆ ಮನೆಗಳಿಗೆ ಹಾನಿಯಾಗಿದೆ, ಮರಗಳು, ವಿದ್ಯುತ್ ಕಂಬಗಳು ಬಿದ್ದಿವೆ. ವಿದ್ಯುತ್ ತಂತಿ ಬಿದ್ದು ಹಸುವೊಂದು ಮೃತಪಟ್ಟಿದೆ.

ಕಳೆದೆರಡು ದಿನಗಳಿಂದ ಶಾಂತವಾಗಿದ್ದ ಮಳೆ ರವಿವಾರದಿಂದ ಮತ್ತೆ ತೀವ್ರತೆಯನ್ನು ಪಡೆದುಕೊಂಡಿದೆ. ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗಿದೆ.

ಮಡಿಕೇರಿ ತಾಲ್ಲೂಕಿನಲ್ಲಿ ನಿರಂತರ ಮಳೆಯಾಗುತ್ತಿದ್ದು, ಬೆಟ್ಟಗುಡ್ಡದ ಮೇಲೆ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಮನೆ ಮಾಡಿದೆ. ಮಡಿಕೇರಿ ನಗರದಿಂದ ಗಾಳಿಬೀಡು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಮರಗಳು ಮತ್ತು ವಿದ್ಯುತ್ ಕಂಬಗಳು ಬಿದ್ದಿವೆ. ಚೆಸ್ಕಾಂ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ತೆರವು ಕಾರ್ಯಾಚರಣೆ ನಡೆಸಿದರು.

ಭಾರೀ ಗಾಳಿಗೆ ಮರದ ಕೊಂಬೆ ಬಿದ್ದು ಆರು ಕಾರುಗಳು ಜಖಂಗೊಂಡಿರುವ ಘಟನೆ ಸೋಮವಾರಪೇಟೆಯ ರೆಸಾರ್ಟ್‍ವೊಂದರ ಸಮೀಪ ನಡೆದಿದೆ. ಪ್ರವಾಸಿಗರು ಹಾಗೂ ಟ್ಯಾಕ್ಸಿ ಚಾಲಕರು ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲುಗಡೆಗೊಳಿಸಿದ್ದಾಗ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಸ್ಥಳದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ತುಂಡಾಗಿ ಬಿದ್ದು, ವಿದ್ಯುತ್ ಪ್ರವಹಿಸಿ ಹಸು ಸಾವಿಗೀಡಾಗಿರುವ ಘಟನೆ ಸೋಮವಾರಪೇಟೆ ಸಮೀಪದ ಚೌಡ್ಲು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ಸುರೇಶ್ ಎಂಬುವವರಿಗೆ ಸೇರಿದ ಹಸು ಇದಾಗಿದೆ.

ಶನಿವಾರಸಂತೆ ಹೋಬಳಿಯ ಗೌಡಳ್ಳಿ ಗ್ರಾ.ಪಂ ವ್ಯಾಪ್ತಿಯ ಚನ್ನಾಪುರ ಗ್ರಾಮದ ನಿವಾಸಿ ಲಕ್ಷ್ಮೀ ಎಂಬುವವರಿಗೆ ಸೇರಿದ ಮನೆಗೆ ಮಳೆಯಿಂದ ಭಾಗಶಃ ಹಾನಿಯಾಗಿದೆ.

ಕುಶಾಲನಗರ ತಾಲ್ಲೂಕಿನ ಗುಡ್ಡೆಹೊಸೂರು ಗ್ರಾ.ಪಂ ವ್ಯಾಪ್ತಿಯ ಅತ್ತೂರು ಗ್ರಾಮದಲ್ಲಿ ಜನಾರ್ಧನ್ ಎಂಬುವವರ ಮನೆಯ ಗೋಡೆ ಕುಸಿದು ಬಿದ್ದಿದೆ. ಕುಶಾಲನಗರ ತಾಲ್ಲೂಕು ತಹಶೀಲ್ದಾರ್ ಕಿರಣ್ ಗೌರಯ್ಯ, ಗುಡ್ಡೆಹೊಸೂರು ಗ್ರಾ.ಪಂ ಅಧಿಕಾರಿ ಸುಮೇಶ್, ಕಂದಾಯ ನಿರೀಕ್ಷಕ ಸಂತೋಷ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಗೌತಮ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಸ್ಥಳಾಂತರ :

ಸಂಪಾಜೆ ಹೋಬಳಿಯ ಮೇಕೇರಿ ಗ್ರಾಮದ ಆಯಿಷಾ ಎಂಬುವವರ ಮನೆಯ ಗೋಡೆ ಕುಸಿದು ಬಿದ್ದಿದ್ದು, ಉಳಿದ ಭಾಗ ಬಿರುಕು ಬಿಟ್ಟಿದೆ. ಇಲ್ಲಿ ವಾಸ ಇದ್ದವರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮರಗಳು ಬಿದ್ದು ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ಹಲವು ಗ್ರಾಮಗಳು ವಿದ್ಯುತ್ ಕೊರತೆ ಎದುರಿಸುತ್ತಿವೆ.

ಅತಿಹೆಚ್ಚು ಮಳೆಯಾಗುವ ಕಾವೇರಿಯ ಉಗಮ ಸ್ಥಾನ ತಲಕಾವೇರಿ, ಭಾಗಮಂಡಲ ಮತ್ತು ನಾಪೋಕ್ಲು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಆದರೆ ಯಾವುದೇ ಹಾನಿಗಳು ಸಂಭವಿಸಿಲ್ಲ ಹಾಗೂ ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನಿಧಾನವಾಗಿ ನೀರಿನ ಮಟ್ಟ ಏರಿಕೆಯಾಗುತ್ತಿದೆ.

ಮಡಿಕೇರಿ ನಗರ, ಗಾಳಿಬೀಡು, ಕಾಲೂರು, ಮುಕ್ಕೋಡ್ಲು, ಬೆಟ್ಟಗೇರಿ, ಬಿಳಿಗೇರಿ, ಕರಿಕೆ, ಪೆರಾಜೆ, ಸಂಪಾಜೆ, ಸಿದ್ದಾಪುರ, ಕರಡಿಗೋಡು, ನೆಲ್ಲಿಹುದಿಕೇರಿ, ಸುಂಟಿಕೊಪ್ಪ, ಕುಶಾಲನಗರ, ಹಾರಂಗಿ, ಕೂಡಿಗೆ, ಸೋಮವಾರಪೇಟೆ, ಮಾದಾಪುರ, ಶಾಂತಳ್ಳಿ ಮತ್ತು ಶ್ರೀಮಂಗಲ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ಸೋಮವಾರಪೇಟೆ ತಾಲ್ಲೂಕಿನ ಶಾಂತಳ್ಳಿಯಲ್ಲಿ ಕಳೆದ 24 ಗಂಟೆಗಳಲ್ಲಿ ಅತಿಹೆಚ್ಚು ಮಳೆಯಾಗಿದೆ. ಮಡಿಕೇರಿ ನಗರದಲ್ಲಿ ಮಂಜು ಸಹಿತ ಮೈಕೊರೆಯುವ ಚಳಿ ಇದ್ದು, ನಿರಂತರ ಗಾಳಿ ಮಳೆಯಾಗುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.

ನದಿ, ಬೆಟ್ಟ ಪ್ರದೇಶದಲ್ಲಿ ಆತಂಕ :

ಜಿಲ್ಲೆಯಲ್ಲಿ ನಿರತಂತರವಾಗಿ ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಬೆಟ್ಟಗುಡ್ಡ, ತಗ್ಗು ಪ್ರದೇಶ ಮತ್ತು ನದಿಯ ಆಸುಪಾಸಿನಲ್ಲಿರುವ ನಿವಾಸಿಗಳು ಆತಂಕಗೊಂಡಿದ್ದಾರೆ. ಸ್ಥಳೀಯ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಈಗಾಗಲೇ ಜಿಲ್ಲಾಡಳಿತ ಸೂಚನೆ ನೀಡಿದೆ. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಎನ್‍ಡಿಆರ್ ಎಫ್, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಆಡಳಿತ ಸನ್ನದ್ಧವಾಗಿರಬೇಕೆಂದು ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದ್ದಾರೆ.

Delete Edit
share
ವಾರ್ತಾಭಾರತಿ
ವಾರ್ತಾಭಾರತಿ
Next Story
X