Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಕೊಡವರ ಹಕ್ಕುಗಳಿಗಾಗಿ ಪಾದಯಾತ್ರೆ ಆರಂಭ :...

ಕೊಡವರ ಹಕ್ಕುಗಳಿಗಾಗಿ ಪಾದಯಾತ್ರೆ ಆರಂಭ : ಸಾವಿರಾರು ಮಂದಿ ಭಾಗಿ

ವಾರ್ತಾಭಾರತಿವಾರ್ತಾಭಾರತಿ2 Feb 2025 11:09 PM IST
share
ಕೊಡವರ ಹಕ್ಕುಗಳಿಗಾಗಿ ಪಾದಯಾತ್ರೆ ಆರಂಭ : ಸಾವಿರಾರು ಮಂದಿ ಭಾಗಿ

ಮಡಿಕೇರಿ : ಕೊಡವ ಹಾಗೂ ಕೊಡವ ಭಾಷಿಕ ಸಮುದಾಯಗಳ ಸಂಸ್ಕೃತಿಯ ಭದ್ರತೆಗಾಗಿ ಮತ್ತು ಹಕ್ಕುಗಳಿಗಾಗಿ ಒತ್ತಾಯಿಸಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕುಟ್ಟದಿಂದ ಮಡಿಕೇರಿಯವರೆಗೆ ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕೊಡವರ ಶಾಂತಿಯುತ ಪಾದಯಾತ್ರೆ ರವಿವಾರ ಆರಂಭಗೊಂಡಿದೆ.

ಅಖಿಲ ಕೊಡವ ಸಮಾಜದ ನೇತೃತ್ವದಲ್ಲಿ ಕುಟ್ಟದಿಂದ ಆರಂಭವಾದ ಪಾದಯಾತ್ರೆಯಲ್ಲಿ ಎಲ್ಲಾ ಕೊಡವ ಸಮಾಜ, ಕೊಡವ ಸಂಘಟನೆಗಳು, ಕೊಡವ ಭಾಷಿಕ ಸಮುದಾಯಗಳ ಸಂಘಟನೆಗಳು ಹಾಗೂ ಕೊಡವ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡರು.

ಎಲ್ಲಾ ಕೊಡವ ಸಮಾಜ, ಭಾಷಿಕ ಸಮುದಾಯಗಳ ಸಮಾಜದ ಮುಖ್ಯಸ್ಥರ ಸಮ್ಮುಖದಲ್ಲಿ ಕುಟ್ಟ ಬಸ್ ನಿಲ್ದಾಣದಲ್ಲಿ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಲಾಯಿತು.

ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಬ್ರಮಣಿ ಕಾವೇರಪ್ಪ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಸದಸ್ಯ ಅರುಣ್ ಮಾಚಯ್ಯ, ವಿವಿಧ ಸಂಘಟನೆಗಳ ಪ್ರಮುಖರಾದ ಚಮ್ಮಟೀರ ಪ್ರವೀಣ್ ಉತ್ತಪ್ಪ, ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ರಾಜೀವ್ ಬೋಪಯ್ಯ, ಮಾಳೇಟಿರ ಶ್ರೀನಿವಾಸ್, ಚಾಮೆರ ದಿನೇಶ್ ಬೆಳ್ಯಪ್ಪ ಮತ್ತಿತರರು ಪಾದಯಾತ್ರೆಯಲ್ಲಿ ಪಾಲ್ಗೊಂಡರು.

85 ಕಿ.ಮೀ. ಪಾದಯಾತ್ರೆ: ಕುಟ್ಟ, ಹುದಿಕೇರಿ, ಪೊನ್ನಂಪೇಟೆ, ಗೋಣಿಕೊಪ್ಪ, ವೀರಾಜಪೇಟೆ, ಮೂರ್ನಾಡು ಮೂಲಕ ನಡೆಯುವ ಈ ಬೃಹತ್ ಪಾದಯಾತ್ರೆ ಅಂತಿಮವಾಗಿ ಫೆ.7ರಂದು ಮೇಕೇರಿಯಿಂದ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತ ತಲುಪಲಿದೆ. ಈ ಪಾದಯಾತ್ರೆ ಸುಮಾರು 85 ಕಿ.ಮೀ. ದೂರವನ್ನು ಕ್ರಮಿಸಲಿದೆ.

ಅಂತಿಮವಾಗಿ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದ ಬಳಿ ಇರುವ ಕೊಡವ ಸಮಾಜ ಮಂದ್‌ನಲ್ಲಿ ಸಮಾವೇಶಗೊಳ್ಳಲಿದೆ. ಮಂದ್‌ನಲ್ಲಿ ಸರಕಾರದ ಪ್ರತಿನಿಧಿಗೆ ನಮ್ಮ ಬೇಡಿಕೆಯ ಮನವಿ ಪತ್ರವನ್ನು ಸಲ್ಲಿಸುತ್ತೇವೆ. ಸಂವಿಧಾನ ಬದ್ಧವಾಗಿರುವ ನಮ್ಮ ಹಕ್ಕನ್ನು ಪ್ರತಿಪಾದಿಸುವ ಮೂಲಕ ಬೇಡಿಗಳ ಈಡೇರಿಕೆಗೆ ಒತ್ತಾಯಿಸಲಾಗುತ್ತದೆ ಎಂದು ಪರದಂಡ ಸುಬ್ರಮಣಿ ಕಾವೇರಪ್ಪ ತಿಳಿಸಿದ್ದಾರೆ.

ಕೊಡವ ಮತ್ತು ಭಾಷಿಕ ಸಮುದಾಯಗಳ ಸಂಸ್ಕೃತಿ, ಭದ್ರತೆ, ಸಂವಿಧಾನಬದ್ಧ ಹಕ್ಕಿಗಾಗಿ ಎಲ್ಲೆಲ್ಲೂ ವ್ಯಾಪಕ ಅಗ್ರಹ ಕೇಳಿ ಬರುತ್ತಿದೆ. ಸುಮಾರು 12ರಿಂದ 15 ಸಾವಿರ ಜನರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಇದಕ್ಕೆ ಪೂರಕ ಎಂಬಂತೆ ಪ್ರತೀ ನಾಡ್, ಊರ್, ಒಕ್ಕಗಳಲ್ಲಿ ಸ್ವಯಂಪ್ರೇರಿತ ತಯಾರಿಯಲ್ಲಿ ಜನರೇ ತೊಡಗಿದ್ದು, ನಮ್ಮ ಹಕ್ಕಿಗಾಗಿ ಹೋರಾಡಲು ಸದಾ ಸಿದ್ಧ ಎಂಬ ಸಂದೇಶವನ್ನು ಸಾರುತ್ತಿರುವುರದು ವಿಶೇಷವೆನಿಸಿದೆ ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X