Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಕೊಡಗು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ...

ಕೊಡಗು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ ಕಟ್ಟೆಮಾಡು ದೇವಾಲಯ ಸಮಿತಿ

ವಾರ್ತಾಭಾರತಿವಾರ್ತಾಭಾರತಿ11 Feb 2025 11:27 PM IST
share
ಕೊಡಗು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ ಕಟ್ಟೆಮಾಡು ದೇವಾಲಯ ಸಮಿತಿ

ಮಡಿಕೇರಿ: ಎರಡು ಸಮುದಾಯಗಳ ನಡುವಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿರುವ ಮಡಿಕೇರಿ ತಾಲೂಕಿನ ಕಟ್ಟೆಮಾಡು ಗ್ರಾಮದ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ದೇವಾಲಯದ ಕಟ್ಟುಪಾಡಿನ ಕುರಿತು ಮರಗೋಡು ಗ್ರಾಮದಲ್ಲಿ ನಡೆಸಿದ ಅಭಿಪ್ರಾಯ ಸಂಗ್ರಹದ ಸಭೆಯ ವರದಿಯನ್ನು ದೇವಾಲಯದ ಆಡಳಿತ ಮಂಡಳಿ ಇಂದು ಜಿಲ್ಲಾಡಳಿಕ್ಕೆ ಸಲ್ಲಿಸಿತು.

ಜಿಲ್ಲಾಧಿಕಾರಿಯವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದೇವಾಲಯ ಸಮಿತಿಯ ಅಧ್ಯಕ್ಷ ಕಟ್ಟೆಮನೆ ಶಶಿ ಜನಾರ್ದನ ಅವರು, ಸಭೆಯಲ್ಲಿ ವ್ಯಕ್ತವಾದ ಪರ, ವಿರೋಧ ಅಭಿಪ್ರಾಯಗಳನ್ನು ಬೈಲಾದೊಂದಿಗೆ ಜಿಲ್ಲಾಧಿಕಾರಿಗೆ ಸಲ್ಲಿಸಿರುವುದಾಗಿ ತಿಳಿಸಿದರು.

ಜಿಲ್ಲಾಧಿಕಾರಿಗೆ ನೀಡಿರುವ ವರದಿಯಲ್ಲಿ ಮುಖ್ಯವಾಗಿ ಹಾಲಿ ಇರುವ ಬೈಲಾವನ್ನು ಯಥಾಸ್ಥಿತಿ ಮುಂದುವರಿಸಿಕೊಂಡು ಹೋಗಬೇಕು ಮತ್ತು ಯಾವುದೇ ಸೇರ್ಪಡೆಯಾಗದಿರಲಿ ಎಂದು ವಿವರಿಸಲಾಗಿದೆ. ಬೈಲಾದಲ್ಲಿ ಯಾವುದೇ ಜನಾಂಗದ ಸಂಪ್ರದಾಯ, ಪದ್ಧತಿಗೆ ಅವಕಾಶ ಇರುವುದಿಲ್ಲ ಎಂಬುವುದನ್ನು ಮಾತ್ರ ನಮೂದಿಸಲಾಗಿದೆ. ದೇವಾಲಯ ಸಮಿತಿ ಹಾಲಿ ಇರುವ ಬೈಲಾಕ್ಕೆ ಬದ್ಧವಾಗಿರಲು ನಿರ್ಧರಿಸಿದ್ದು, ಊರಿನವರ ಅಪೇಕ್ಷೆಯಂತೆ ಜಿಲ್ಲಾಡಳಿತ ಸೂಕ್ತ ಆದೇಶವನ್ನು ನೀಡಲಿದೆ ಎನ್ನುವ ವಿಶ್ವಾಸವಿದೆ. ಜಿಲ್ಲಾಧಿಕಾರಿಯವರು ಹೊರಡಿಸುವ ಆದೇಶಕ್ಕೆ ಸಮಿತಿ ಬದ್ಧವಾಗಿದೆ ಎಂದು ಶಶಿ ಜನಾರ್ದನ ಸ್ಪಷ್ಟಪಡಿಸಿದರು.

ಜಿಲ್ಲಾಡಳಿತದ ಅಂಗಳದಲ್ಲಿ ಚೆಂಡು:

ಕಳೆದ 45 ದಿನಗಳಿಂದ ವಿವಾದದ ಕೇಂದ್ರ ಬಿಂದುವಾಗಿರುವ ಶ್ರೀ ಮಹಾಮೃತ್ಯುಂಜಯ ಮಹದೇಶ್ವರ ದೇವಾಲಯ ವ್ಯಾಪ್ತಿಯಲ್ಲಿ ಮಾ.13 ರವರೆಗೆ ನಿರ್ಬಂಧಕಾಜ್ಞೆ ಜಾರಿಯಲ್ಲಿದೆ. ವಾರ್ಷಿಕ ಜಾತ್ರಾ ಮಹೋತ್ಸವದ ಡಿ.27 ರಂದು ವಸ್ತ್ರ ಸಂಹಿತೆ ಕುರಿತು ಉಂಟಾದ ಭಿನ್ನಾಭಿಪ್ರಾಯದ ನಂತರ ದೇವಾಲಯದಲ್ಲಿ ನಿತ್ಯ ಪೂಜೆ ಮಾತ್ರ ನಡೆಯುತ್ತಿದೆ. ನಿರ್ಬಂಧಕಾಜ್ಞೆ ಹಿನ್ನೆಲೆ ಐದಕ್ಕಿಂತ ಹೆಚ್ಚು ಮಂದಿ ಸೇರಲು ಸಾಧ್ಯವಾಗದ ಕಾರಣ ಯಾವುದೇ ವಿಶೇಷ ಆಚರಣೆಗಳಿಗೆ ಅವಕಾಶ ಇಲ್ಲದಾಗಿದೆ. ಭಿನ್ನಾಭಿಪ್ರಾಯ ಶಮನಗೊಳಿಸಲು ಸೂಕ್ತ ನಿರ್ಧಾರಕ್ಕೆ ಬರುವಂತೆ ಜಿಲ್ಲಾಡಳಿತ ದೇವಾಲಯ ಸಮಿತಿಗೆ ಎರಡು ಬಾರಿ ಕಾಲಾವಕಾಶ ನೀಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X