ಮಡಿಕೇರಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

ಮಡಿಕೇರಿ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಸಂದರ್ಭ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕುಶಾಲನಗರದ ಬೈಚನಹಳ್ಳಿಯ ರೈತ ಸಹಕಾರ ಭವನದ ಬಳಿ ನಡೆದಿದೆ.
ಸ್ಥಳೀಯ ನಿವಾಸಿ ಬಿ.ಬಿ. ಮೋಹನ್ (63) ಮೃತಪಟ್ಟ ವ್ಯಕ್ತಿ. ರಸ್ತೆಯಲ್ಲಿ ಬಿದ್ದಿದ್ದ 11 ಕೆವಿ ವಿದ್ಯುತ್ ತಂತಿ ತುಳಿದಾಗ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Next Story