Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಶುಂಠಿ ಬೆಳೆಯನ್ನು ಬಾಧಿಸುವ ಹೊಸ...

ಶುಂಠಿ ಬೆಳೆಯನ್ನು ಬಾಧಿಸುವ ಹೊಸ ಶಿಲೀಂಧ್ರ ರೋಗ ಕೊಡಗಿನಲ್ಲಿ ಪತ್ತೆ: ಸಂಶೋಧನಾ ಸಂಸ್ಥೆಯಿಂದ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ5 Feb 2025 10:35 PM IST
share
ಶುಂಠಿ ಬೆಳೆಯನ್ನು ಬಾಧಿಸುವ ಹೊಸ ಶಿಲೀಂಧ್ರ ರೋಗ ಕೊಡಗಿನಲ್ಲಿ ಪತ್ತೆ: ಸಂಶೋಧನಾ ಸಂಸ್ಥೆಯಿಂದ ಬಹಿರಂಗ

ಮಡಿಕೇರಿ: ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಶುಂಠಿ ಬೆಳೆಯನ್ನು ತೀವ್ರವಾಗಿ ಭಾದಿಸಿದ ಹೊಸ ಶಿಲೀಂಧ್ರ ರೋಗವನ್ನು ಐ.ಸಿ.ಎ.ಆರ್.ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ, ಕೋಝಿಕೋಡ್ ನ ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ.

ಶುಂಠಿಯಲ್ಲಿ ಕಂಡುಬಂದಿರುವ ಈ ರೋಗವು ಪೈರಿಕ್ಯುಲೇರಿಯಾಠಿ ಎಂಬ ಶಿಲೀಂಧ್ರದಿಂದ ಹರಡುತ್ತದೆ. ಪೈರಿಕ್ಯುಲೇರಿಯಾವು ಭತ್ತ, ಗೋಧಿ ಮತ್ತು ಬಾರ್ಲಿಯಂತಹ ಏಕದಳ ಸಸ್ಯಗಳಲ್ಲಿ ಬ್ಲಾಸ್ಟ್ ರೋಗವನ್ನು ಉಂಟುಮಾಡುತ್ತದೆ. ಶುಂಠಿಯಲ್ಲಿ ಇದು ಮೊದಲ ಬಾರಿಗೆ ವರದಿಯಾಗಿದೆ. ಈ ರೋಗಬಂದ ಶುಂಠಿ ಗಿಡದ ಎಲೆಗಳು ಹಳದಿಯಾಗಿ ಕಾಣಿಸಿಕೊಳ್ಳುತ್ತವೆ. ಆರಂಭಿಕ ಹಂತದಲ್ಲಿ ಕಪ್ಪು ಅಥವಾ ಆಲಿವ್-ಹಸಿರು ಬಣ್ಣದ ಚುಕ್ಕೆಗಳು ಜೊತೆಗೂಡಿರುತ್ತದೆ. ಒಮ್ಮೆ ಸೋಂಕು ತಗುಲಿದರೆ ಅದು ವೇಗವಾಗಿ ಹರಡುತ್ತದೆ ಮತ್ತು ಕೆಲವೇ ಗಂಟೆಗಳಲ್ಲಿ ಇಡೀ ಹೊಲವನ್ನು ಆವರಿಸುತ್ತದೆ. ಇದು ತೀವ್ರವಾದ ಬೆಳೆ ನಷ್ಟ ಮತ್ತು ಶುಂಠಿಯ ಎಲೆ ಮತ್ತು ಕಾಂಡದ ಒಣಗುವಿಕೆಗೆ ಕಾರಣವಾಗುತ್ತದೆ. ರೋಗಪೀಡಿತ ಸಸ್ಯಗಳ ಗೆಡ್ಡೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ತಜ್ಞರು ಖಚಿತಪಡಿಸಿರುತ್ತಾರೆ. ಸಮಸ್ಯೆಯು ಎಲೆಗಳ ಅಕಾಲಿಕ ಹಳದಿ ಮತ್ತು ಒಣಗಿಸುವಿಕೆಯಲ್ಲಿದೆ. ಇದು ಶುಂಠಿ ಗೆಡ್ಡೆಗಳ ಬೆಳವಣಿಗೆಯ ಮೇಲೆ ಪರಿಣಾಮ ಬೀರುತ್ತದೆ. ಈ ರೋಗದಿಂದಾಗಿ, ಕೊಡಗಿನ ರೈತರು ಗೆಡ್ಡೆಗಳ ತೂಕದಲ್ಲಿ ಶೇ.30 ರಷ್ಟು ನಷ್ಟವನ್ನು ಅನುಭವಿಸಿದ್ದಾರೆ.

ರೋಗ ಹರಡುವಿಕೆಗೆ ಕಾರಣೀಭೂತವಾದ ಹವಾಮಾನದ ಅಂಶಗಳು: ಸಂಶೋಧಕರ ಪ್ರಕಾರ, ಕೊಡಗಿನಲ್ಲಿರುವ ನಿರ್ದಿಷ್ಟ ಹವಾಮಾನ ಪರಿಸ್ಥಿತಿಗಳಿಂದ ರೋಗ ಹರಡುವಿಕೆ ಹೆಚ್ಚಾಗಿ ಉಂಟಾಗುತ್ತದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳುಗಳಲ್ಲಿ, ಈ ಪ್ರದೇಶದಲ್ಲಿ ಬೆಳಗ್ಗೆ ಇಬ್ಬನಿ ಬೀಳುತ್ತದೆ. ಇದು ಶಿಲೀಂಧ್ರದ ಅಭಿವೃದ್ಧಿ ಹೊಂದಲು ಮತ್ತು ಹರಡಲು ಸೂಕ್ತವಾದ ವಾತಾವರಣವನ್ನು ಒದಗಿಸುತ್ತದೆ. ಇದು ಕೊಡಗಿನ ಮತ್ತು ಸುತ್ತಮತ್ತಲಿನ ಕೆಲವು ಪ್ರದೇಶದ ಶುಂಠಿ ಹೊಲಗಳಲ್ಲಿ ರೋಗವು ವೇಗವಾಗಿ ಹರಡಲು ಕಾರಣವಾಗಿದೆ. ಆದರೆ ಕರ್ನಾಟಕ ಮತ್ತು ಕೇರಳದ ಇತರ ಭಾಗಗಳಲ್ಲಿನ ವಿಭಿನ್ನ ಹವಾಮಾನದಿಂದ ಬೆಳೆಯು ಹಾನಿಗೊಳಗಾಗಿಲ್ಲ. ಐಸಿಎಆರ್.ಐಐಎಸ್‍ಆರ್, ಕೋಝಿಕೋಡ್ ಮತ್ತು ಅದರ ಪ್ರಾದೇಶಿಕ ಕೇಂದ್ರವಾದ ಅಪ್ಪಂಗಳ ತಂಡವು ನಡೆಸಿದ ಸಂಶೋಧನೆಯು ಕೊಡಗಿನ ಹವಾಮಾನ ಪರಿಸ್ಥಿತಿಗಳು-ವಿಶೇಷವಾಗಿ ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ಇಬ್ಬನಿ ಬೀಳುವಿಕೆ-ರೋಗ ಹರಡಲು ಅನುಕೂಲಕರ ವಾತಾವರಣವನ್ನು ಸೃಷ್ಟಿಸಿದೆ ಎಂದು ಸೂಚಿಸಿದೆ.

ಐ.ಸಿ.ಎ.ಆರ್.ಐಐಎಸ್‍ಆರ್ ನಲ್ಲಿನ ಸಂಶೋಧನಾ ತಂಡವು ರೋಗವನ್ನು ಅಧ್ಯಯನ ಮಾಡುವಾಗ ಗಮನಾರ್ಹ ಸವಾಲುಗಳನ್ನು ಎದುರಿಸಿತು, ಏಕೆಂದರೆ ರೋಗದ ಮಾದರಿಗಳು ಕೋಝಿಕೋಡ್ ನ ಪ್ರಯೋಗಾಲಯವನ್ನು ತಲುಪುವ ವೇಳೆಗೆ ಹೆಚ್ಚಾಗಿ ಒಣಗಿರುತ್ತಿದ್ದವು. ತಿಂಗಳುಗಳ ಸತತ ಸಂಶೋಧನೆಯಿಂದ ರೋಗದ ಹಿಂದಿನ ಕಾರಣವಾದ ಪೈರಿಕ್ಯುಲೇರಿಯಾಠಿ ಅನ್ನು ವಿಜ್ಞಾನಿಗಳು ದೃಢೀಕರಿಸಲು ಸಾಧ್ಯವಾಯಿತು.

ನಿಯಂತ್ರಣ ಕ್ರಮಗಳು: ರೋಗವನ್ನು ನಿರ್ವಹಿಸಲು, ವಿಜ್ಞಾನಿಗಳು ಶಿಲೀಂಧ್ರನಾಶಕಗಳಾದ ಪ್ರೊಪಿಕೊನಜೋಲ್ ಅನ್ನು 1ml/L ಅಥವಾ ಕಾಬೆರ್ಂಡಜಿಮ್ ಮತ್ತು ಮ್ಯಾಂಕೋಜೆಬ್ ಸಂಯೋಜನೆಯನ್ನು 2 ಗ್ರಾಂ/ಲೀ ಅನುಪಾತದಲ್ಲಿ ಶಿಫಾರಸು ಮಾಡುತ್ತಾರೆ. ಬೀಜದ ಗೆಡ್ಡೆಗಳನ್ನು ಶೇಖರಿಸುವ ಮೊದಲು ಈ ಶಿಲೀಂಧ್ರನಾಶಕದಲ್ಲಿ 30 ನಿಮಿಷಗಳ ಕಾಲ ಅದ್ದಿ ಚೆನ್ನಾಗಿ ಗಾಳಿ ಇರುವ ಸ್ಥಳದಲ್ಲಿ ಶೇಖರಿಸುವುದು.ರೋಗನಿರೋಧಕ ಕ್ರಮವಾಗಿ ಪ್ರೊಪಿಕೊನಜೋಲ್ ಅಥವಾ ಟೆಬುಕೊನಜೋಲ್ @ 1ml/L ಅನ್ನು ನಾಟಿ ಮಾಡಿದ ನಾಲ್ಕು ತಿಂಗಳ ನಂತರ ಸಿಂಪಡಿಸುವುದು. ರೋಗಲಕ್ಷಣವಾದ ಎಲೆಗಳ ಮೇಲೆ ಕಪ್ಪು ಅಥವಾ ಆಲಿವ್-ಹಸಿರು ಬಣ್ಣದ ಚುಕ್ಕೆಗಳು ಹಳದಿಭಾಗದಿಂದ ಸುತ್ತುವರಿಯುವುದನ್ನು ಗಮನಿಸಿದರೆ, ರೋಗದ ತ್ವರಿತ ಹರಡುವಿಕೆಯನ್ನು ತಡೆಯಲು ತಕ್ಷಣ ಶಿಲೀಂಧ್ರನಾಶಕವನ್ನು ಸಿಂಪಡಿಸುವುದು. ಪೈರಿಕ್ಯುಲೇರಿಯ ಶಿಲೀಂಧ್ರವು ಅತಿ ವೇಗವಾಗಿ ಹರಡುವುದರಿಂದ ರೈತರು ತ್ವರಿತಗತಿಯಲ್ಲಿ ಕಾರ್ಯನಿರ್ವಹಿಸುವುದು ಅಗತ್ಯ. ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ. ಈ ರೋಗವು ಕೇವಲ 10 ಗಂಟೆಗಳ ಅವಧಿಯಲ್ಲಿ ದೊಡ್ಡ ಪ್ರದೇಶಗಳಲ್ಲಿ ಹರಡಬಹುದು. ಕೆಲವು ರೋಗ ಪೀಡಿತ ತೋಟಗಳು 20 ಕಿಲೋಮೀಟರ್ ಅಂತರದಲ್ಲಿದ್ದರು ಸಹರೋಗ ಹರಡುತ್ತದೆ.

ಬೆಳೆ ಹಾನಿಗೊಳಗಾದ ರೈತರಿಗೆ ಶಿಫಾರಸು: ಈ ರೋಗದಿಂದ ಬೆಳೆ ಹಾನಿಗೊಳಗಾದ ರೈತರು ರೋಗಪೀಡಿತ ಪ್ರದೇಶಗಳಲ್ಲಿ ಶುಂಠಿ ಕೃಷಿ ಮಾಡುವುದನ್ನು ತಾತ್ಕಾಲಿಕವಾಗಿ ನಿಲ್ಲಿಸಲು ಸಲಹೆ ನೀಡಲಾಗಿದೆ.

ರೋಗಕಾರಕ ಶಿಲೀಂಧ್ರದ ವರ್ತನೆ ಮತ್ತು ಪರಿಸರ ಪ್ರಚೋದಕಗಳನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಸಂಶೋಧನಾ ತಂಡವು ಹೆಚ್ಚಿನ ಅಧ್ಯಯನಗಳನ್ನು ನಡೆಸುತ್ತಿದೆ ಎಂದು ಅಪ್ಪಂಗಳ ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆಯ ಮುಖ್ಯಸ್ಥರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X