Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಹಿರಿಯ ಪರಿಸರ ಪ್ರೇಮಿ, ನಿವೃತ್ತ...

ಹಿರಿಯ ಪರಿಸರ ಪ್ರೇಮಿ, ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ

ವಾರ್ತಾಭಾರತಿವಾರ್ತಾಭಾರತಿ26 Feb 2024 7:54 PM IST
share
ಹಿರಿಯ ಪರಿಸರ ಪ್ರೇಮಿ, ನಿವೃತ್ತ ಅರಣ್ಯಾಧಿಕಾರಿ ಕೆ.ಎಂ.ಚಿಣ್ಣಪ್ಪ ನಿಧನ

ಮಡಿಕೇರಿ : ಹಿರಿಯ ಪರಿಸರ ಪ್ರೇಮಿ, ವನ್ಯಜೀವಿ ತಜ್ಞ, ನಿವೃತ್ತ ಅರಣ್ಯಾಧಿಕಾರಿ ಕೊಟ್ರಂಗಡ ಎಂ.ಚಿಣ್ಣಪ್ಪ(84) ಅವರು ಸೋಮವಾರ ನಿಧನರಾಗಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಕಾಕೂರು ಗ್ರಾಮದ ನಿವಾಸಿಯಾಗಿದ್ದ ಚಿಣ್ಣಪ್ಪ, 30 ವರ್ಷಗಳ ಕಾಲ ಅರಣ್ಯ ಇಲಾಖೆಯಲ್ಲಿ ರೇಂಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು.

ತಮ್ಮ ಸೇವಾ ಅವಧಿಯಲ್ಲಿ ರಾಜ್ಯದ ಹಲವು ಅರಣ್ಯ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಕೆ.ಎಂ.ಚಿಣ್ಣಪ್ಪ ಅವರು ವನ್ಯ ಸಂಪತ್ತು ಲೂಟಿ, ವನ್ಯ ಜೀವಿಗಳ ಕಳ್ಳ ಬೇಟೆ, ಮರ ಕಳ್ಳತನ ಮತ್ತಿತ್ತರ ಅಕ್ರಮಗಳಿಗೆ ಶಾಶ್ವತ ಕಡಿವಾಣ ಹಾಕಿದ್ದರು. ಕೆ.ಎಂ.ಚಿಣ್ಣಪ್ಪ ಅವರ ಅಮೋಘ ಸೇವೆಯನ್ನು ಪರಿಗಣಿಸಿ ಸರಕಾರ 1985ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ ನೀಡಿ ಗೌರವಿಸಿತ್ತು. 1990ರ ದಶಕದಲ್ಲಿ ನಾಗರಹೊಳೆ ಅಭಯಾರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದಾಗ ತಮ್ಮ ಜೀವದ ಹಂಗನ್ನೇ ತೊರೆದು ಬೆಂಕಿ ನಂದಿಸಲು ಹರ ಸಾಹಸ ಪಟ್ಟಿದ್ದರು.

ಚಿಣ್ಣಪ್ಪ ಅವರು ವನ್ಯಜೀವಿ ಸಂರಕ್ಷಣಾ ರ್ಯಾಲಿ ಮತ್ತು ಸಂವಾದಗಳೊಂದಿಗೆ 1.50 ಲಕ್ಷಕ್ಕೂ ಹೆಚ್ಚು ಶಾಲಾ ಮಕ್ಕಳು, ಶಿಕ್ಷಕರು, ಗ್ರಾಮೀಣ ಯುವಕರು ಹಾಗೂ ಗ್ರಾಮಸ್ಥರನ್ನು ತಲುಪಿದರು. ನಿವೃತ್ತಿಯ ನಂತರವೂ 2,500 ಕ್ಕೂ ಹೆಚ್ಚು ಅರಣ್ಯ ಸಂರಕ್ಷಣಾ ಸಿಬ್ಬಂದಿಗೆ ಕಳ್ಳಬೇಟೆ ತಡೆ ಕಾರ್ಯಾಚರಣೆ ಮತ್ತು ಅಗ್ನಿಶಾಮಕ ರಕ್ಷಣೆಯಲ್ಲಿ ತರಬೇತಿ ನೀಡಿದರು.

ಕೊಟ್ರಂಗಡ ಚಿಣ್ಣಪ್ಪ ಅವರು ‘ಕೂರ್ಗ್ ವೈಲ್ಡ್‍ಲೈಫ್ ಫಸ್ಟ್’ ಸಂಘಟನೆ ಹುಟ್ಟುಹಾಕಿ ಪರಿಸರ ಸಂರಕ್ಷಣೆಗೆ ತಮ್ಮದೇ ಆದ ಸೇವೆ ಮತ್ತು ಕೊಡುಗೆ ನೀಡಿದ್ದಾರೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಶಾಲಾ ಮಕ್ಕಳಿಂದ ಕಾಡ್ಗಿಚ್ಚು ಜಾಗೃತಿ ಜಾಥಾ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಅರಣ್ಯ ಸಂರಕ್ಷಣೆಯ ಅರಿವು ಮೂಡಿಸುತ್ತಿದ್ದರು.

1941 ರಲ್ಲಿ ಜನಿಸಿದ ಚಿಣ್ಣಪ್ಪ ಅವರು 1967 ರಲ್ಲಿ ಅರಣ್ಯ ಸೇವೆಗೆ ಸೇರಿದರು. 1992 ರಲ್ಲಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ದೊಡ್ಡ ಕಾಡ್ಗಿಚ್ಚು ಸಂಭವಿಸಿದ ನಂತರ ಸ್ವಯಂಪ್ರೇರಿತರಾಗಿ ಸೇವೆಯಿಂದ ನಿವೃತ್ತರಾದರು.

ಇವರ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ 1985 ರಲ್ಲಿ ಮುಖ್ಯಮಂತ್ರಿಗಳ ಚಿನ್ನದ ಪದಕ, 1988 ರಲ್ಲಿ ಡಬ್ಲ್ಯುಸಿಎಸ್ ಪ್ರಶಂಸನಾ ಪತ್ರ ಮತ್ತು 1996 ರಲ್ಲಿ ಟೈಗರ್ ಲಿಂಕ್ ಬಾಗ್ ಸೇವಕ್ ಪ್ರಶಸ್ತಿ ನೀಡಲಾಗಿದೆ.

2000 ಮತ್ತು 2006 ರಲ್ಲಿ ಕ್ರಮವಾಗಿ ಇಎಸ್‍ಎಸ್‍ಒ ಮತ್ತು ಅಭಯಾರಣ್ಯದ ಜೀವಮಾನದ ಸಾಧನೆ ಪ್ರಶಸ್ತಿಗಳನ್ನು ಪಡೆದರು. 2009 ರಲ್ಲಿ ಅವರಿಗೆ ಸಿಎನ್‍ಎನ್- ಐಬಿಎನ್ ರಿಯಲ್ ಹೀರೋಸ್ ಪ್ರಶಸ್ತಿಯನ್ನು ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X