Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಕೊಡಗಿನಲ್ಲಿ ಕೇರಳದ ವ್ಯಕ್ತಿಯ ಹತ್ಯೆ...

ಕೊಡಗಿನಲ್ಲಿ ಕೇರಳದ ವ್ಯಕ್ತಿಯ ಹತ್ಯೆ ಪ್ರಕರಣ : ಐವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ3 May 2025 11:30 PM IST
share
ಕೊಡಗಿನಲ್ಲಿ ಕೇರಳದ ವ್ಯಕ್ತಿಯ ಹತ್ಯೆ ಪ್ರಕರಣ : ಐವರು ಆರೋಪಿಗಳ ಬಂಧನ

ಮಡಿಕೇರಿ : ಗೋಣಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕೊಂಗಣ ಬಿ.ಶೆಟ್ಟಿಗೇರಿ ಗ್ರಾಮದ ಕಾಫಿ ತೋಟದ ಮನೆಯೊಂದರಲ್ಲಿ ಇತ್ತೀಚೆಗೆ ನಡೆದ ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪ್ರದೀಪ್ ಕೊಯ್ಲಿ ಎಂಬವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಪೊನ್ನಂಪೇಟೆ ತಾಲೂಕಿನ ಮುಗುಟಗೇರಿ ಗ್ರಾಮದ ಅನಿಲ್ ಎನ್.ಎಸ್.(25), ಸೋಮವಾರಪೇಟೆ ತಾಲೂಕಿನ ಅಬ್ಬೂರುಕಟ್ಟೆಯ ದೀಪಕ್(21), ನೇರುಗಳಲೆಯ ಸ್ವೀಫನ್ ಡಿಸೋಜ(26), ಹಿತ್ತಲಮಕ್ಕಿಯ ಕಾರ್ತಿಕ್ ಎಚ್.ಎಂ.(27) ಹಾಗೂ ಪೊನ್ನಂಪೇಟೆಯ ನಲ್ಲೂರು ಗ್ರಾಮದ ಹರೀಶ್ ಪಿ.ಎಸ್.(29) ಬಂಧಿತ ಆರೋಪಿಗಳಾಗಿದ್ದಾರೆ.

ಬಂಧಿತರ ಬಳಿಯಿಂದ 13.03 ಲಕ್ಷ ರೂ. ನಗದು, ಕೃತ್ಯಕ್ಕೆ ಬಳಸಿದ ಎರಡು ದ್ವಿಚಕ್ರ ವಾಹನ, 2 ಮೊಬೈಲ್, ಮೃತ ವ್ಯಕ್ತಿಯ ಮೊಬೈಲ್ ಮತ್ತು ಮೃತ ವ್ಯಕ್ತಿಗೆ ಸೇರಿದ ಆಸ್ತಿ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಿ.ಶೆಟ್ಟಿಗೇರಿ ಗ್ರಾಮದ ಕಾಫಿ ತೋಟದ ಮನೆಯಲ್ಲಿ ವಾಸವಿದ್ದ ಕಣ್ಣೂರು ಜಿಲ್ಲೆಯ ಪ್ರದೀಪ್ ಕೊಯ್ಲಿಯವರನ್ನು ಎ.23ರಂದು ಹಗ್ಗದಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಕುರಿತು ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ಆರೋಪಿ ಅನಿಲ್ ಎನ್.ಎಸ್., ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾಗುವ ಪ್ರಯತ್ನದಲ್ಲಿದ್ದಾಗ, ಆಕೆಯ ಮನೆಯ ಕಡೆಯವರು, ನಿನ್ನ ಬಳಿ ಯಾವುದೇ ಆಸ್ತಿ ಮತ್ತು ಹಣವಿಲ್ಲವೆಂದು ನಿರಾಕರಿಸಿದ್ದರು. ಇದೇ ಕಾರಣಕ್ಕೆ ಶೀಘ್ರವಾಗಿ ಆಸ್ತಿ ಮತ್ತು ಹಣ ಗಳಿಸುವ ಉದ್ದೇಶದಿಂದ ಈ ಕೃತ್ಯ ಎಸಗಿರುವುದಾಗಿ ವಿಚಾರಣೆ ವೇಳೆ ಅನಿಲ್ ತಿಳಿಸಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಬಂಧಿತ ಆರೋಪಿ ಅನಿಲ್ ತಾನು ಕೆಲಸ ಮಾಡುವ ಜಾಗಗಳಲ್ಲಿ ಇರುವವರನ್ನು ಪರಿಚಯ ಮಾಡಿಕೊಂಡು ಜಮೀನಿನಲ್ಲಿ ನಿಧಿ ಇರುವುದಾಗಿ ನಂಬಿಸಿ ಬೆಂಗಳೂರು, ಹಾಸನ, ಪೊನ್ನಂಪೇಟೆ ಕಡೆಗಳಲ್ಲಿ ಹಣ ಪಡೆದು ಮೋಸ ಮಾಡಿರುವ ಕುರಿತು ಆರೋಪವಿದೆ.

ಒಂಟಿಯಾಗಿ ವಾಸ ಮಾಡುತ್ತಾ ಹೆಚ್ಚಿನ ಆಸ್ತಿ ಹೊಂದಿರುವವರನ್ನು ಗುರುತಿಸಿ ಆಸ್ತಿ ಖರೀದಿ, ಮಾರಾಟ ಮಾಡುವ ನೆಪದಲ್ಲಿ ಗೋಣಿಕೊಪ್ಪ ಠಾಣಾ ವ್ಯಾಪ್ತಿಯ ತಿತಿಮತಿಯಲ್ಲಿನ ಒಂಟಿ ಮಹಿಳೆಯೊಬ್ಬರನ್ನು ಅನಿಲ್ ಸಂಪರ್ಕಿಸಿದ್ದ. ಸದರಿ ಮಹಿಳೆಗೆ ಸ್ಥಳೀಯವಾಗಿ ಸಂಬಂಧಿಕರು ಇರುವುದು ಕಂಡು ಬಂದ ಹಿನ್ನೆಲೆಯಲ್ಲಿ ಸದರಿ ವ್ಯವಹಾರವನ್ನು ಸ್ಥಗಿತಗೊಳಿಸಿದ್ದ. ಕೋಣನಕಟ್ಟೆ ಎಂಬಲ್ಲಿ 50 ಎಕರೆ ಜಾಗದ ಮಾಲಕರೊಬ್ಬರನ್ನು ಆಸ್ತಿ ಖರೀದಿಸುವ ನೆಪದಲ್ಲಿ ಪರಿಚಯಿಸಿಕೊಂಡು ಮನೆಯಲ್ಲಿ ಮಕ್ಕಳು ಇರುವುದರಿಂದ ವ್ಯವಹಾರವನ್ನು ಸರಿ ಬರುವುದಿಲ್ಲ ಎಂದು ಕೈಬಿಟ್ಟಿರುವ ಕುರಿತು ಎಸ್ಪಿ ರಾಮರಾಜನ್ ಮಾಹಿತಿ ನೀಡಿದರು.

ಮೃತ ಪ್ರದೀಪ್ ಕೊಯ್ಲಿ ಅವಿವಾಹಿತ ಮತ್ತು ಹೆಚ್ಚಿನ ಆಸ್ತಿ ಹೊಂದಿರುವ ಕುರಿತು ಮಾಹಿತಿಯನ್ನು ಖಚಿತ ಪಡಿಸಿಕೊಂಡಿದ್ದ ಅನಿಲ್, ತೋಟ ಖರೀದಿ ವ್ಯವಹಾರದ ಕುರಿತು ಮಧ್ಯವರ್ತಿಗಳ ಮೂಲಕ ಚರ್ಚಿಸಿದ್ದ ಎಂದು ಹೇಳಲಾಗಿದೆ. ಆಸ್ತಿ ಖರೀದಿದಾರರು ವಿದೇಶದಲ್ಲಿರುವುದಾಗಿ ತಿಳಿಸಿ ಅವರ ಪರವಾಗಿ ಮೃತ ಪ್ರದೀಪ್ ಕೊಯ್ಲಿ ಅವರಿಗೆ 1 ಲಕ್ಷ ರೂ.ಯನ್ನು ಮುಂಗಡವಾಗಿ ನೀಡಿದ್ದನೆಂದು ಎಸ್ಪಿ ತಿಳಿಸಿದರು.

ಪ್ರದೀಪ್ ಅವರನ್ನು ಕೊಲೆ ಮಾಡಿದ ನಂತರ ಮನೆಯಲ್ಲಿದ್ದ ಮೃತದೇಹವನ್ನು ಹೂತು ಹಾಕುವ ಕುರಿತು ಉಪಾಯ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ ಎಂದು ವಿವರಿಸಿದರು.

ಪ್ರದೀಪ್ ಕೊಯ್ಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಪತ್ತೆಗಾಗಿ ರಚಿಸಲಾಗಿದ್ದ ಉಪ ವಿಭಾಗ ಮಟ್ಟದ ವಿಶೇಷ ತನಿಖಾ ತಂಡದಲ್ಲಿ ವೀರಾಜಪೇಟೆ ಡಿವೈಎಸ್ಪಿ ಮಹೇಶ್ ಕುಮಾರ್ ಎಸ್., ಗೋಣಿಕೊಪ್ಪಲು ಸಿಪಿಐ ಶಿವರಾಜ್ ಮುದೋಳ್, ವೀರಾಜಪೇಟೆ ಸಿಪಿಐ ಅನೂಪ್ ಮಾದಪ್ಪ ಪಿ., ಕುಟ್ಟ ಸಿಪಿಐ ಶಿವರುದ್ರ ಬಿ.ಎಸ್., ಗೋಣಿಕೊಪ್ಪ ಪಿಎಸ್ಸೈ ಪ್ರದೀಪ್ ಕುಮಾರ್, ವೀರಾಜಪೇಟೆ ಪಿಎಸ್ಸೈ ಪ್ರಮೋದ್ ಕುಮಾರ್, ಪೊನ್ನಂಪೇಟೆ ಪಿಎಸ್ಸೈ ನವೀನ್ ಜಿ., ಶ್ರೀಮಂಗಲ ಪಿಎಸ್ಸೈ ರವೀಂದ್ರ, ಕುಟ್ಟ ಪಿಎಸ್ಸೈ ಮಹದೇವ ಎಚ್.ಕೆ., ವೀರಾಜಪೇಟೆ ಗ್ರಾಮಾಂತರ ಪಿಎಸ್ಸೈ ಲತಾ ಎನ್.ಜೆ. ಹಾಗೂ ಉಪ ವಿಭಾಗ ಮಟ್ಟದ ಅಪರಾಧ ಪತ್ತೆ ದಳದ ಸಿಬ್ಬಂದಿ ಮತ್ತು ಡಿಸಿಆರ್‌ಬಿ ಸಿಬ್ಬಂದಿ, ತಾಂತ್ರಿಕ ಸಿಬ್ಬಂದಿ ಕಾರ್ಯಾಚರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X