Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ಮಡಿಕೇರಿ | ಗುತ್ತಿಗೆದಾರನ ಹತ್ಯೆ...

ಮಡಿಕೇರಿ | ಗುತ್ತಿಗೆದಾರನ ಹತ್ಯೆ ಪ್ರಕರಣ: ಮೂವರ ಬಂಧನ

ವಾರ್ತಾಭಾರತಿವಾರ್ತಾಭಾರತಿ18 May 2025 10:50 PM IST
share
ಮಡಿಕೇರಿ | ಗುತ್ತಿಗೆದಾರನ ಹತ್ಯೆ ಪ್ರಕರಣ: ಮೂವರ ಬಂಧನ

ಮಡಿಕೇರಿ : ಸೋಮವಾರಪೇಟೆ ತಾಲೂಕಿನ ಚೌಡ್ಲು ಗ್ರಾಮದ ನಿವಾಸಿ ಗುತ್ತಿಗೆದಾರ ಸಂಪತ್ ಶಂಭು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ.

ಸೋಮವಾರಪೇಟೆಯ ಹಾನಗಲ್ಲು ಗ್ರಾಮದ ಕಿರಣ್ ಬಿ.ಎಂ. (44), ಚೌಡ್ಲು ಗ್ರಾಮದ ಗಣಪತಿ ಪಿ.ಎಂ. (44) ಹಾಗೂ ಹಾನಗಲ್ಲು ಗ್ರಾಮದ ಕಿರಣ್‌ನ ಪತ್ನಿ ಸಂಗೀತಾ ಬಂಧಿತ ಆರೋಪಿಗಳು.

ಕೃತ್ಯಕ್ಕೆ ಬಳಸಿದ ಕೋವಿ, ಕತ್ತಿ, ದೊಣ್ಣೆ ಹಾಗೂ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಕೃತ್ಯ ಎಸಗಲು ಆರೋಪಿಗಳಿಗೆ ಸಹಕರಿಸಿದ ಮತ್ತು ಆರೋಪಿಗಳಾದ ಕಿರಣ್ ಹಾಗೂ ಗಣಪತಿ ತಲೆಮರೆಸಿಕೊಳ್ಳಲು ಸಹಕರಿಸಿದ ಇತರ ಆರೋಪಿಗಳನ್ನು ಆದಷ್ಟು ಶೀಘ್ರ ಪತ್ತೆ ಹಚ್ಚಿ ಬಂಧಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮೇ 9ರಂದು ತಮ್ಮ ಸ್ನೇಹಿತ ಜಾನ್ ಪೌಲ್ ಅವರ ಕಾರನ್ನು ಕೋರಿಕೆಯ ಮೇರೆಗೆ ತೆಗೆದುಕೊಂಡು ಹೋಗಿದ್ದ ಸಂಪತ್ ಅವರು ಮೇ 10ರಂದು ರಾತ್ರಿಯಾದರೂ ಬಾರದೆ ಇದ್ದಾಗ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸಕಲೇಶಪುರ ತಾಲೂಕಿನ ಯಸಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಹಳ್ಳಿ ಗ್ರಾಮದಲ್ಲಿ ಮೇ 10ರಂದು ಕಾರು ಪತ್ತೆಯಾಗಿತ್ತು. ಕಾರಿನಲ್ಲಿ ರಕ್ತದ ಕಲೆ ಕಂಡು ಬಂದಿದ್ದು, ಯಸಳೂರು ಪೊಲೀಸರು ಕಾರು ಮಾಲಕರ ಪತ್ತೆಗೆ ತನಿಖೆ ಕೈಗೊಂಡರು. ಸಂಪತ್ ಅವರು ತೆಗೆದುಕೊಂಡು ಹೋಗಿದ್ದ ಕಾರು ಇದು ಎಂದು ಖಾತ್ರಿಯಾಗಿತ್ತು. ಮೇ 14ರಂದು ಸಕಲೇಶಪುರ ತಾಲೂಕಿನ ವಣಗೂರು ಅರಣ್ಯದಲ್ಲಿ ಸಂಪತ್ ಅವರ ಮೃತದೇಹ ಪತ್ತೆಯಾಗಿತ್ತು.

ಸ್ಥಳಕ್ಕೆ ಕೊಡಗು ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಮೇ 16ರಂದು ಕಿರಣ್ ನನ್ನು ಬೆಂಗಳೂರಿನಲ್ಲಿ, ಮೇ 17 ರಂದು ಗಣಪತಿಯನ್ನು ಬೆಳ್ತಂಗಡಿಯಲ್ಲಿ ಹಾಗೂ ಮೇ 18 ರಂದು ಸಂಗೀತಾಳನ್ನು ಸೋಮವಾರಪೇಟೆಯಲ್ಲಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಯಿತು.

ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಹತ್ಯೆ ಮಾಡುವ ಉದ್ದೇಶದಿಂದ ಸಂಚು ರೂಪಿಸಿ ಆರೋಪಿ ಸಂಗೀತಾ ಸಂಪತ್‌ನನ್ನು ಸೋಮವಾರಪೇಟೆಯ ಹಾನಗಲ್ ಗ್ರಾಮಕ್ಕೆ ಮೇ 9ರಂದು ಬರ ಮಾಡಿಕೊಳ್ಳುತ್ತಾಳೆ. ಇತರ ಆರೋಪಿಗಳಾದ ಗಣಪತಿ ಹಾಗೂ ಕಿರಣ್ ಅವರೊಂದಿಗೆ ಸೇರಿಕೊಂಡು ಕೋವಿಯಿಂದ ಬೆದರಿಸಿ, ದೊಣ್ಣೆಯಿಂದ ಹೊಡೆದು, ಕತ್ತಿಯಿಂದ ಕಡಿದು ಹತ್ಯೆ ಮಾಡುತ್ತಾರೆ. ಸಂಪತ್ ಚಲಾಯಿಸಿಕೊಂಡು ಬಂದಿದ್ದ ಕಾರಿನಲ್ಲಿ ಮೃತದೇಹವನ್ನು ಹಾಕಿಕೊಂಡು ಸಕಲೇಶಪುರ ತಾಲೂಕು ವಣಗೂರು ಅರಣ್ಯದ ಬಳಿ ಬರುತ್ತಾರೆ. ಮೃತದೇಹವನ್ನು ಬಿಸಾಡಿ ಕಾರನ್ನು ಕಲ್ಲಳ್ಳಿ ಗ್ರಾಮದಲ್ಲಿ ನಿಲ್ಲಿಸಿ ತಮ್ಮ ಸಂಚಿನಂತೆ ಮೊದಲೇ ಬೆಂಗಳೂರಿನಿಂದ ಬರಮಾಡಿಕೊಂಡಿದ್ದ ಬೇರೊಂದು ಕಾರಿನಲ್ಲಿ ಯಾರಿಗೂ ತಿಳಿಯದಂತೆ ವಾಪಸ್ ಬಂದಿರುತ್ತಾರೆ ಎಂದು ಎಸ್ಪಿ ವಿವರಿಸಿದರು.

ಕೊಲೆಯಾದ ಸಂಪತ್ ಹಾಗೂ ಮೂವರು ಆರೋಪಿಗಳು ಸ್ನೇಹಿತರಾಗಿದ್ದು, ಲಕ್ಷಾಂತರ ರೂ. ಹಣಕಾಸಿನ ವ್ಯವಹಾರ ಹತ್ಯೆಗೆ ಕಾರಣ ಎಂದು ಆರೋಪಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಸೋಮವಾರಪೇಟೆ ಉಪ ವಿಭಾಗದ ಡಿವೈಎಸ್ಪಿ ಪಿ.ಚಂದ್ರಶೇಖರ್, ವೀರಾಜಪೇಟೆ ಉಪವಿಭಾಗದ ಡಿವೈಎಸ್ಪಿ ಎಸ್.ಮಹೇಶ್ ಕುಮಾರ್, ಕುಶಾಲನಗರ ವೃತ್ತ ಸಿಪಿಐ ದಿನೇಶ್‌ಕುಮಾರ್, ಪಟ್ಟಣ ಠಾಣೆ ಪಿಎಸ್ಸೈ ಎಚ್.ಟಿ.ಗೀತಾ, ಎಎಸ್ಸೈ ಮಂಜುನಾಥ, ಗ್ರಾಮಾಂತರ ಠಾಣೆ ಪಿಎಸ್ಸೈ ಪಿ.ಮೋಹನ್‌ರಾಜ್, ಎಎಸ್ಸೈ ವಿ.ಜಿ.ವೆಂಕಟೇಶ್, ಪಿಐ ಬಿ.ಜಿ.ಪ್ರಕಾಶ್, ಸೋಮವಾರಪೇಟೆ ಪಿಐ ಎಂ.ಮುದ್ದು ಮಾದೇವ, ಪಿಎಸ್ಸೈ ಗೋಪಾಲ್, ಎಎಸ್ಸೈ ಕಾಳಿಯಪ್ಪ, ಗೋಣಿಕೊಪ್ಪ ಸಿಪಿಐ ಶಿವರಾಜ್ ಆರ್. ಮುದೋಳ್, ಜಿಲ್ಲಾ ಗುಪ್ತದಳದ ಪಿಐ ಮೇದಪ್ಪ ಐ.ಪಿ., ಡಿಸಿಆರ್‌ಬಿ ಪಿಐ ಚಂದ್ರಶೇಖರ್, ನಾಪೊಕ್ಲು ಪಿಎಸ್ಸೈ ಮಂಜುನಾಥ್, ಶ್ರೀಮಂಗಲ ಪಿಎಸ್ಸೈ ರವೀಂದ್ರ, ವೀರಾಜಪೇಟೆ ಠಾಣೆ ಎಎಸ್ಸೈ ಮಂಜುನಾಥ್, ಪೊಲೀಸ್ ಸಿಬ್ಬಂದಿಯಾದ ಶನಿವಾರಸಂತೆ ಜಿ.ಆರ್.ಉದಯಕುಮಾರ್, ಸುಂಟಿಕೊಪ್ಪಪ್ರವೀಣ್, ಸೋಮವಾರಪೇಟೆ ಕೆ.ಎಸ್.ಸುದೀಶ್ ಕುಮಾರ್, ಶರತ್, ಕುಶಾಲನಗರ ಸುನೀಲ್ ಕುಮಾರ್ ಎಚ್.ಸಿ., ಗಾಯಿತ್ರಿ, ದಿವ್ಯ, ಶಶಿಕಲಾ, ಸುನಿಲ್, ಮಹೇಂದ್ರ ಕೆ.ಎಸ್., ಬಸಪ್ಪ, ಸ್ವಾಮಿ, ವೀರಾಜಪೇಟೆ ಜೋಶ್ ನಿಶಾಂತ್, ಗಿರೀಶ್, ನಾಪೊಕ್ಲು ಮಧು, ಡಿಸಿಆರ್‌ಬಿ ಯೋಗೇಶ್, ನಿರಂಜನ್, ಶರತ್, ರಾಜೇಶ್ ಸಿ.ಕೆ. ಹಾಗೂ ಪ್ರವೀಣ್ ಬಿ.ಕೆ. ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X