Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. ದುಬಾರೆ ಪ್ರಕರಣ: ಸ್ವಯಂ ಪ್ರೇರಿತ ದೂರು...

ದುಬಾರೆ ಪ್ರಕರಣ: ಸ್ವಯಂ ಪ್ರೇರಿತ ದೂರು ದಾಖಲು

ವಾರ್ತಾಭಾರತಿವಾರ್ತಾಭಾರತಿ22 May 2026 8:52 PM IST
share
ದುಬಾರೆ ಪ್ರಕರಣ: ಸ್ವಯಂ ಪ್ರೇರಿತ ದೂರು ದಾಖಲು

ಮಡಿಕೇರಿ: ಕೊಡಗಿನ ಪ್ರಸಿದ್ಧ ಪ್ರವಾಸಿತಾಣ ದುಬಾರೆ ಸಾಕಾನೆ ಶಿಬಿರದಲ್ಲಿ ಮೇ 18ರಂದು ನಡೆದ ಸಾಕಾನೆಗಳ ಕಾಳಗದಲ್ಲಿ ತಮಿಳುನಾಡು ಮೂಲದ ಪ್ರವಾಸಿ ಮಹಿಳೆ ಮೃತಪಟ್ಟ ಘಟನೆ ಸಂಬಂಧ ರಾಜ್ಯ ಉಪ ಲೋಕಾಯುಕ್ತ ಕೆ.ಎನ್.ಫಣೀಂದ್ರ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.

ದುಬಾರೆ ಘಟನೆಯಲ್ಲಿ ಮಹಿಳೆ ಮೃತಪಟ್ಟಿರುವುದು ಮತ್ತು ಘರ್ಷಣೆಯಲ್ಲಿ ಗಾಯಗೊಂಡ ‘ಮಾರ್ತಾಂಡ’ ಆನೆಯೂ ಮೃತಪಟ್ಟಿರುವುದು ಅರಣ್ಯ ಇಲಾಖೆ ಅಧಿಕಾರಿಗಳ ನಿಷ್ಕ್ರಿಯತೆ, ವೈಫಲ್ಯವನ್ನು ಸೂಚಿಸುತ್ತದೆ. ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ಸಾರ್ವಜನಿಕರ ಕುಂದುಕೊರತೆ ಪರಿಹಾರಕ್ಕಾಗಿ ಕಲಂ 12(1)ರ ಅಡಿಯಲ್ಲಿ ಲೋಕಾಯುಕ್ತ, ಉಪ ಲೋಕಾಯುಕ್ತರ ಮೇಲೆ ಬಾಧ್ಯತೆಯನ್ನು ವಿಧಿಸುತ್ತದೆ ಮತ್ತು ಕಲಂ2(10)ರ ಅಡಿಯಲ್ಲಿ ಸಾರ್ವಜನಿಕ ಅಧಿಕಾರಿಗಳಿಂದ ಆಗುವ ದುರಾಡಳಿತವನ್ನು ತಡೆ ಹಿಡಿಯಲು ಬಾಧ್ಯತೆಯನ್ನು ನೀಡುತ್ತದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಕಾಯ್ದೆ 1984 ಕಲಂ(7(2) ಮತ್ತು ಕಲಂ 9(3)(ಎ) ಪ್ರಕಾರ ಅಧಿಕಾರ ಚಲಾಯಿಸಿ ಸ್ವಯಂ ಪ್ರೇರಿತ ಪ್ರಕ್ರಿಯೆ ಪ್ರಾರಂಭಿಸಲಾಗುತ್ತದೆ. ಈ ಕ್ರಮವನ್ನು ಸುವೋಮೋಟೋ ಪ್ರಕ್ರಿಯೆಗಳಿಗೆ ನೋಂದಾಯಿಸಲು ಕಚೇರಿಗೆ ನಿರ್ದೇಶಿಸಲಾಗಿದೆ. ಕುಂದುಕೊರತೆ ಪರಿಹಾರ ಉದ್ದೇಶಕ್ಕಾಗಿ ಮತ್ತು ರಾಜ್ಯದ ಸಂಬಂಧಪಟ್ಟ ಅಧಿಕಾರಿಗಳ ಕಡೆಯಿಂದ ಯಾವುದೇ ನಿಷ್ಕ್ರಿಯತೆ ಅಥವಾ ದುರಾಡಳಿತವಿದೆಯೇ ಎಂದು ಪರಿಶೀಲಿಸಲು ಸೋಮವಾರಪೇಟೆ ಉಪ ವಲಯದ ಎಸಿಎಫ್ ಗೋಪಾಲ್ ಎ.ಎ. ಮತ್ತು ಕುಶಾಲನಗರ ವಲಯ ಅರಣ್ಯ ಆರ್‌ಎಫ್‌ಒ ರಕ್ಷಿತ್ ಅವರನ್ನು ಎದುರುದಾರರು ಎಂದು ಉಲ್ಲೇಖಿಸಿ ನೋಟಿಸ್ ನೀಡಲು ಕೆ.ಎನ್.ಫಣೀಂದ್ರ ನಿರ್ದೇಶನ ನೀಡಿದ್ದಾರೆ.

ಮಾತ್ರವಲ್ಲದೆ ನೋಟೀಸ್ ತಲುಪಿದ 4 ವಾರಗಳ ಒಳಗೆ ತಮ್ಮ ಅಭಿಪ್ರಾಯ ಮತ್ತು ಕ್ರಮ ಕೈಗೊಂಡ ವರದಿಯನ್ನು ಸಲ್ಲಿಸಬೇಕು. ನಿಗದಿತ ದಿನಾಂಕದಂದು ತಮ್ಮ ಆಕ್ಷೇಪ ಹಾಗೂ ವರದಿಯೊಂದಿಗೆ ಖುದ್ದು ಹಾಜರಾಗುವಂತೆ ಎಸಿಎಫ್ ಗೋಪಾಲ್ ಮತ್ತು ಆರ್‌ಎಫ್‌ಒ ರಕ್ಷಿತ್ ಅವರಿಗೆ ಸೂಚಿಸಿದ್ದಾರೆ.

ಈ ಆದೇಶದ ಪ್ರತಿಯನ್ನು ಕೊಡಗು ಜಿಲ್ಲಾಧಿಕಾರಿ, ಪ್ರದೇಶಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕೊಡಗು ಜಿಲ್ಲಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರಿಗೆ ಮಾಹಿತಿಗಾಗಿ ಕಳುಹಿಸಿ ಗಮನಿಸಿರುವ ಲೋಪ ದೋಷಗಳು, ಸಮಸ್ಯೆಗಳಿಗೆ ಸಂಬಂಧಿಸಿದಂತೆ ನಿಯಮಾನುಸಾರ ತಮ್ಮ ವತಿಯಿಂದ ಅಗತ್ಯವಿರುವ ಕ್ರಮ ವಹಿಸಿ, ಕೈಗೊಂಡ ಕ್ರಮದ ವರದಿಯನ್ನೂ ಸಲ್ಲಿಸುವಂತೆ ಉಪ ಲೋಕಾಯುಕ್ತರು ನಿರ್ದೇಶನ ನೀಡಿದ್ದಾರೆ.

Tags

Suo Motu CaseDubare
share
ವಾರ್ತಾಭಾರತಿ
ವಾರ್ತಾಭಾರತಿ
Next Story
X