ವಿರಾಜಪೇಟೆ | ಗುಂಡು ಹೊಡೆದುಕೊಂಡು ಚಾಲಕ ಆತ್ಮಹತ್ಯೆ

ಮಡಿಕೇರಿ: ಕಾರು ಚಾಲಕರೊಬ್ಬರು ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿರಾಜಪೇಟೆ ತಾಲ್ಲೂಕಿನ ಕದನೂರು ಗ್ರಾ.ಪಂ ವ್ಯಾಪ್ತಿಯ ಅರಮೇರಿ ಗ್ರಾಮದಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಡಾಲು ನಂಜಪ್ಪ (64) ಮೃತಪಟ್ಟವರು.
ಗದ್ದೆಯಲ್ಲಿ ಒಂಟಿ ನಳಿಕೆ ಕೋವಿ ಮತ್ತು ಮೃತದೇಹ ಪತ್ತೆಯಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ, ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ವಿರಾಜಪೇಟೆ ಠಾಣಾಧಿಕಾರಿ ಎನ್.ಜಿ.ಲತಾ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ವಿರಾಜಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಚ್ಛೇದನ ಪಡೆದು ಪತ್ನಿ ಹಾಗೂ ಪುತ್ರಿಯಿಂದ ದೂರವಿದ್ದ ಡಾಲು ನಂಜಪ್ಪ ಅವರು ಒಂಟಿಯಾಗಿ ಜೀವನ ಸಾಗಿಸುತ್ತಿದ್ದರು. ಅನಾರೋಗ್ಯವೂ ಅವರನ್ನು ಕಾಡುತ್ತಿತ್ತು ಎಂದು ಹೇಳಲಾಗಿದೆ.
ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.
Next Story





