Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಡಗು
  4. “ಕೆಲಸಗಾರರು ಬೇಕಾಗಿದ್ದಾರೆ”: ಕೊಡಗಿನ...

“ಕೆಲಸಗಾರರು ಬೇಕಾಗಿದ್ದಾರೆ”: ಕೊಡಗಿನ ಬೆಳೆಗಾರರ ಅಸಹಾಯಕ ಪರಿಸ್ಥಿತಿಗೆ ಸಾಕ್ಷಿಯಾದ ವೈರಲ್ ಫೋಟೋ

ವಾರ್ತಾಭಾರತಿವಾರ್ತಾಭಾರತಿ4 Jan 2024 11:58 PM IST
share
“ಕೆಲಸಗಾರರು ಬೇಕಾಗಿದ್ದಾರೆ”: ಕೊಡಗಿನ ಬೆಳೆಗಾರರ ಅಸಹಾಯಕ ಪರಿಸ್ಥಿತಿಗೆ ಸಾಕ್ಷಿಯಾದ ವೈರಲ್ ಫೋಟೋ

ಮಡಿಕೇರಿ: ಕಾಫಿ ಕೊಯ್ಲಿನ ಹಂತದಲ್ಲಿನ ಕಾರ್ಮಿಕರ ಕೊರತೆ, ಕಾರ್ಮಿಕರ ವೇತನಗಳಿಂದ ಕಂಗಾಲಾಗಿರುವ ಕೊಡಗಿನ ಬೆಳೆಗಾರ, ತನ್ನ ಆರ್ಥಿಕ ಪರಿಸ್ಥಿತಿಗಳಿಗೆ ತಕ್ಕಂತೆ ಕೆಲಸಗಾರರನ್ನು ಹೊಂದಿಸಿಕೊಳ್ಳಲು ಇನ್ನಿಲ್ಲದ ಹರಸಾಹಸ ಪಡುತ್ತಿದ್ದಾರೆ. ಇಲ್ಲೊಬ್ಬ ಬೆಳೆಗಾರರು ತಾವು ನೀಡಬಹುದಾದ ಕಾರ್ಮಿಕರ ದಿನಗೂಲಿಯ ವಿವರ ಬರೆದು “ಕೆಲಸಗಾರರು ಬೇಕಾಗಿದ್ದಾರೆ” ಎನ್ನುವ ಫಲಕದೊಂದಿಗೆ ರಸ್ತೆಗಿಳಿದು ತಮ್ಮ ಅಸಹಾಯಕ ಸ್ಥಿತಿಯನ್ನು ಸಾಕ್ಷೀಕರಿಸಿದ್ದಾರೆ.

ವರ್ಷಾವಧಿ ತೋಟದ ನಿರ್ವಹಣೆಗಾಗಿ, ಅದರ ಕೆಲಸ ಕಾರ್ಯಗಳಿಗಾಗಿ ಶ್ರಮಿಸಿದ ಬೆಳೆಗಾರ, ತನ್ನ ಶ್ರಮಕ್ಕೆ ಯಶಸ್ಸು ಪಡೆಯುವುದು ಕಾಫಿ ಫಸಲನ್ನು ಜಾಗೃತೆಯಿಂದ ಕೊಯ್ಲು ಮಾಡಿ, ಉತ್ತಮ ಧಾರಣೆಗೆ ಮಾರಾಟ ಮಾಡುವುದರಿಂದ ಮಾತ್ರ.

ಇತ್ತೀಚಿನ ವರ್ಷಗಳಲ್ಲಿ ಕಾಫಿ ಕೊಯ್ಲು ಸಮಯ ಬಂತೆಂದರೆ ಬೆಳೆಗಾರ ಬೆಚ್ಚಿ ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾರ್ಮಿಕರ ವೇತನ ಜಿಲ್ಲೆಯ ಒಂದೊಂದು ಭಾಗದಲ್ಲಿ ಒಂದೊಂದು ರೀತಿ ಇದೆ. ಕಾಫಿ ಹಣ್ಣು ಕೊಯ್ಯುವ ಕಾರ್ಮಿಕನಿಗೆ ಪ್ರತಿ ಕೆ.ಜಿ.ಗೆ ಕಳೆದ ಸಾಲಿನವರೆಗೆ 3.50 ರೂ.ಗಳಿಂದ 7 ರೂ.ಗಳವರೆಗೆ ನೀಡಿರುವ ಉದಾಹರಣೆಗಳು ಇದೆ. ಕಾಫಿ ಫಸಲು ಹೆಚ್ಚಾಗಿರುವ ತೋಟಗಳಲ್ಲಿ ಪ್ರತಿ ಕೆ.ಜಿ. ಕಾಫಿ ಕೊಯ್ಲಿಗೆ 3 ರಿಂದ 4 ರೂ. ಒಳಗೆ ದರವನ್ನು ಸಂದರ್ಭಕ್ಕೆ ತಕ್ಕಂತೆ ಕಾರ್ಮಿಕರನ್ನು ಕರೆ ತರುವ ಮಂದಿ ನಿರ್ಧರಿಸುತ್ತಾರೆ. ಅದೇ ಫಸಲು ಕಡಿಮೆ ಇರುವ ತೋಟಗಳಲ್ಲಿ ಪ್ರತಿ ಕೆ.ಜಿ. ಕೊಯ್ಲಿನ ದರ 5 ರೂ.ಗಳಿಗೂ ಹೆಚ್ಚಿಗೆ ನಿಗದಿ ಪಡಿಸುತ್ತಾರೆ.

ಇಂತಹ ಇಕ್ಕಟ್ಟಿನ ಸಂದರ್ಭಗಳಲ್ಲಿ ಬೆಳೆಗಾರ ಆಕ್ಷರಶಃ ಅಡಕತ್ತರಿಯಲ್ಲಿ ಸಿಲುಕಿಕೊಳ್ಳುತ್ತಾನೆ. ಕಾಫಿ ಕೊಯ್ಲು ಮಾಡದೆ ಇರುವಂತೆಯೂ ಇಲ್ಲ, ಮಾಡುವುದಾದಲ್ಲಿ ದುಪ್ಪಟ್ಟು ದರ ತೆರಬೇಕು. ಇದರಿಂದ ಹೆಚ್ಚಿನ ನಷ್ಟವನ್ನು ಅನುಭವಿಸುವ ಮೂಲಕ, ತೋಟ ನಿರ್ವಹಣೆ ಎನ್ನುವುದು ಸಾಧ್ಯವೇ ಇಲ್ಲ ಎನ್ನುವಂತಾಗಿ ಹೋಗುತ್ತದೆ.

ಕಾಫಿ ಕೊಯ್ಯುವ ಧಾರಣೆಯ ಫಲಕ ಹಿಡಿದು ರಸ್ತೆ ನಡುವೆ ನಿಂತ ಬೆಳೆಗಾರ ಬೀಟೆಕಾಡ್ ಎಸ್ಟೇಟ್ ನವರು. ಇವರು ತಮ್ಮ ಪಟ್ಟಿಯಲ್ಲಿ ಪ್ರತಿ ಕೆ.ಜಿ ಕಾಫಿಗೆ 4.45 ರೂ., ದಿನಕ್ಕೆ ಪುರುಷ ಕೆಲಸಗಾರರಿಗೆ 615 ರೂ., ಮಹಿಳಾ ಕೆಲಸಗಾರರಿಗೆ 415 ರೂ. ನಮೂದಿಸಿ ರಸ್ತೆಯಲ್ಲಿ ನಿಂತಿರುವ ಫೋಟೋ ವ್ಯಾಪಕ ವೈರಲ್ ಆಗಿದೆ.

Despite high wages, workers are not available for coffee picking. There is a severe shortage of manpower this season.

As the situation goes from bad to worse, a coffee grower in Kodagu takes the innovative approach to lure workers by advertising his rates.

PC: @gopalgowda16 pic.twitter.com/59HKlGpF8T

— Kodagu Connect (@KodaguConnect) January 4, 2024

share
ವಾರ್ತಾಭಾರತಿ
ವಾರ್ತಾಭಾರತಿ
Next Story
X