Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. ಸರ್ವಾಧಿಕಾರಿಗಳ ಆಯ್ಕೆ ವಿರುದ್ಧ ಜನಪರ...

ಸರ್ವಾಧಿಕಾರಿಗಳ ಆಯ್ಕೆ ವಿರುದ್ಧ ಜನಪರ ಹೋರಾಟ ಅನಿವಾರ್ಯ: ಇಂದೂಧರ ಹೊನ್ನಾಪುರ

ವಾರ್ತಾಭಾರತಿವಾರ್ತಾಭಾರತಿ26 Feb 2025 8:39 PM IST
share
ಸರ್ವಾಧಿಕಾರಿಗಳ ಆಯ್ಕೆ ವಿರುದ್ಧ ಜನಪರ ಹೋರಾಟ ಅನಿವಾರ್ಯ: ಇಂದೂಧರ ಹೊನ್ನಾಪುರ

ಕೋಲಾರ: ಹಿಂದೆ ಸರ್ವಾಧಿಕಾರದ ವಿರುದ್ಧ ಪ್ರಜಾಪ್ರಭುತ್ವದ ಸರಕಾರಗಳು ರೂಪುಗೊಳ್ಳುತ್ತಿದ್ದವು, ಈಗ ಪ್ರಜಾಪ್ರಭುತ್ವದಲ್ಲಿಯೇ ಸರ್ವಾಕಾರಿಗಳು ಆಯ್ಕೆಯಾಗಿ ಬರುತ್ತಿದ್ದು, ಜನಪರ ಹೋರಾಟಗಳು ಹಿಂದೆಂದಿಗಿಂತಲೂ ಈಗ ನೂರು ಪಟ್ಟು ಅನಿವಾರ್ಯ ಎಂದು ದಲಿತ ಚಳವಳಿಯ ಹಿರಿಯ ಮುಖಂಡ ಇಂದೂಧರ ಹೊನ್ನಾಪುರ ವಿಷಾದಿಸಿದರು.

ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಮಂಗಳವಾರ ಜನಪರ ಉತ್ಸವದ ಭಾಗವಾಗಿ ಆಯೋಜಿಸಲಾಗಿದ್ದ ಸಮಕಾಲೀನ ಸಂದರ್ಭಗಳಲ್ಲಿ ದಲಿತ ಸಮುದಾಯದ ಮುಂದಿರುವ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ತಲ್ಲಣಗಳು ರಾಜ್ಯ ಮಟ್ಟದ ವಿಚಾರ ಸಂಕಿರಣದ ಅಧ್ಯಕ್ಷತೆವಹಿಸಿ ಅವರು ಮಾತನಾಡುತ್ತಿದ್ದರು.

ದಲಿತ, ಶೋಷಿತ ಸಮುದಾಯದ ಆಶೋತ್ತರಗಳ ಶಕ್ತಿ ಕೇಂದ್ರವಾಗಿ ದಲಿತ ಚಳವಳಿ ರೂಪುಗೊಂಡಿತು. ಚಳವಳಿಯ ಬಹುತೇಕ ಬೀದಿ ಘೋಷಣೆಗಳು ಸರಕಾರದ ಕಾಯ್ದೆಗಳಾಗಿವೆ. ದಲಿತ ಚಳವಳಿಯ ಮುಂದುವರೆದ ಭಾಗ ರಾಜಕೀಯವಾಗಿರಲಿಲ್ಲ, ಚಳವಳಿಯಿಂದ ಅನೇಕರು ರಾಜಕೀಯವನ್ನು ಪ್ರವೇಶಿಸಿದರು. ಸರಕಾರಗಳಲ್ಲಿ ಎಸ್‌ಸಿಪಿ ಟಿಎಸ್‌ಪಿ ಹಣ ದುರುಪಯೋಗವಾಗುತ್ತಿದ್ದರೂ ಚಳವಳಿಯಿಂದ ಹೋದವರು ಪ್ರಶ್ನಿಸದೆ ರಾಜಕೀಯ ಪಕ್ಷಗಳ ಗುಲಾಮರಾಗಿದ್ದಾರೆ, ಇದನ್ನು ಚಳವಳಿಯೇ ಪ್ರಶ್ನಿಸುತ್ತಿದೆ ಎಂದರು.

ಜಗತ್ತಿನಲ್ಲಿ ಯಾವುದೇ ಚಳವಳಿಗಳು ಐದು ದಶಕಗಳ ನಂತರ ಮುಂದುವರೆದಿಲ್ಲ, ರಾಜಕಾರಣಕ್ಕೂ ಒಂದು ಮಿತಿ ಇದೆ. ಆದರೆ, ಸಾಂಸ್ಕೃತಿಕ, ನೈತಿಕ ಹಾಗೂ ಆಧ್ಯಾತ್ಮಿಕ ರಾಜಕಾರಣವನ್ನು ಹಿಮ್ಮೆಟ್ಟಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದರು.

ದಲಿತ ಚಳವಳಿಗೆ ಸಾಂಸ್ಕೃತಿಕ ಹೋರಾಟವೇ ಉಸಿರಾಗಬೇಕು, ಈ ನಿಟ್ಟಿನಲ್ಲಿ ಅಧ್ಯಯನ, ಬರವಣಿಗೆ, ಚರ್ಚೆ, ಶಿಬಿರಗಳು ನಡೆಯಬೇಕು. ಚಳವಳಿಯ ಮುಖಂಡರು ಸರಿ ಹೋದರೆ ಚಳವಳಿಯೂ ಸರಿಹೋಗುತ್ತದೆ. ಜನಪರ ಚಳವಳಿಯ ಅನಿವಾರ್ಯತೆ 70ರ ದಶಕಕ್ಕಿಂತಲೂ ಈಗ ನೂರು ಪಟ್ಟು ಅನಿವಾರ್ಯವಾಗಿ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಸಲಹೆ ನೀಡಿದರು.

ದಲಿತ ಮುಖಂಡ ಮಾವಳ್ಳಿ ಶಂಕರ್ ಮಾತನಾಡಿ, ಒಳಮೀಸಲಾತಿ ಅನುಷ್ಠಾನಕ್ಕೆ ರಾಜ್ಯ ಸರಕಾರ ಮೀನಾಮೇಷ ಎಣಿಸುತ್ತಿದೆ, ಜಾತಿ ಗಣತಿ ಆಯೋಗ ಕೊಟ್ಟ ವರದಿ ಇದುವರೆವಿಗೂ ಬಿಡುಗಡೆಯಾಗಿಲ್ಲ. ಚಳವಳಿ ಇವೆಲ್ಲವನ್ನು ಪ್ರಶ್ನಿಸುವಂತಾಗಬೇಕು ಎಂದರು.

ಸಾಂಸ್ಕೃತಿಕ ಅಸ್ಮಿತೆ ಕುರಿತು ಸಾಹಿತಿ ಸದಾನಂದ ಮರ್ಜಿ ಮಾತನಾಡಿ, ಅಂಬೇಡ್ಕರ್ ಮೂಲ ಆಶಯಗಳನ್ನು ಅನುಸರಿಸದೆ, ದಲಿತರ ಗಮನವನ್ನು ಅಮೂರ್ತ ಚರ್ಚೆ, ವಿಚಾರಗಳ ಮೂಲಕ ಬೇರೆಡೆಗೆ ಸೆಳೆಯುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿ ಹೋರಾಟ ನಡೆಸಬೇಕೆಂದರು.

ಮಹಿಳಾ ಅಸ್ಮಿತೆ ಕುರಿತು ಮಾತನಾಡಿದ ಡಾ.ನೇತ್ರಾವತಿ, ದಲಿತ ಚಳವಳಿಯಲ್ಲಿ ಮಹಿಳೆಯರು ನೇರವಾಗಿ ಪಾಲ್ಗೊಳ್ಳದಿದ್ದರೂ ತೆರೆ ಮರೆಯಲ್ಲಿ ಚಳವಳಿಯನ್ನು ಪ್ರೋತ್ಸಾಹಿಸುತ್ತಾ ಬೆನ್ನೆಲುಬಾಗಿದ್ದರೆಂದರು.

ಸಾಮಾಜಿಕ ಅಸ್ಮಿತೆ ಕುರಿತು ಡಾ.ಅಪ್ಪುಗೆರೆ ಸೋಮಶೇಖರ್ ಮಾತನಾಡಿದರು. ವಿಚಾರ ಮಂಡನೆ ಕುರಿತಂತೆ ಡಾ.ಎಂ.ಚಂದ್ರಶೇಖರ್, ಡಾ.ವಿವಿವಿಗಿರಿ, ವರದೇನಹಳ್ಳಿ ವೆಂಕಟೇಶ್, ದೊರೈರಾಜ್, ಡಾ.ಮುರಳೀಧರ್ ಬೆಲ್ಲದ ಮಡು, ಕೆ.ಎಸ್.ಗಣೇಶ್, ಹೂವಳ್ಳಿ ಪ್ರಕಾಶ್ ಇತರರು ಸಂವಾದ ನಡೆಸಿದರು.

ವಿಧಾನಪರಿಷತ್ ಮಾಜಿ ಸಭಾಪತಿ ವಿ.ಆರ್.ಸುದರ್ಶನ್, ದಸಂಸ ಹಿರಿಯ ಮುಖಂಡ ಎನ್.ವೆಂಕಟೇಶ್, ಡಿಸಿ ಡಾ.ಎಂ.ಆರ್.ರವಿ, ಕನ್ನಡ ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ಎನ್.ಚಲವಾದಿ, ಉಪ ವಿಭಾಗಾಕಾರಿ ಡಾ.ಮೈತ್ರಿ, ಪತ್ರಕರ್ತ ರವಿಕುಮಾರ್ ಟೆಲೆಕ್ಸ್ ಸೇರಿ ಇತರರು ಹಾಜರಿದ್ದರು. ರೇಣುಕಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X