Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. ಕೋಲಾರ: ಸಿ.ಎಂ. ಮುನಿಯಪ್ಪ ಆತ್ಮಚರಿತ್ರೆ...

ಕೋಲಾರ: ಸಿ.ಎಂ. ಮುನಿಯಪ್ಪ ಆತ್ಮಚರಿತ್ರೆ ‘ಕಾಲಡಿಯ ಕಣ್ಣು’ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ11 July 2026 2:12 PM IST
share
ಕೋಲಾರ: ಸಿ.ಎಂ. ಮುನಿಯಪ್ಪ ಆತ್ಮಚರಿತ್ರೆ ‘ಕಾಲಡಿಯ ಕಣ್ಣು’ ಲೋಕಾರ್ಪಣೆ

ಕೋಲಾರ: ದಲಿತ ಚಳವಳಿಯ ಕಥನವಾದ ‘ಕಾಲಡಿಯ ಕಣ್ಣು’ ಕೃತಿಯನ್ನು ಕೃತಿಕಾರ ಹಾಗೂ ಹಿರಿಯ ದಲಿತ ಹೋರಾಟಗಾರ, ಪತ್ರಕರ್ತ ಸಿ.ಎಂ. ಮುನಿಯಪ್ಪ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಸರಳವಾಗಿ ಲೋಕಾರ್ಪಣೆ ಮಾಡಿದರು.

ಆತ್ಮಚರಿತ್ರೆಯ ರೂಪದಲ್ಲಿ ಅನುಭವದ ಕಥನವನ್ನು ಬರವಣಿಗೆಯ ಮೂಲಕ ದಾಖಲಿಸಲು ಮುಂದಾದ ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ ಹಾಗೂ ಪತ್ರಕರ್ತ ಸಿ.ಎಂ. ಮುನಿಯಪ್ಪ ಅವರು, ಅಂತಿಮವಾಗಿ ದಲಿತ ಚಳವಳಿಯ ಕಥನವಾಗಿ ಏಳು ಅಧ್ಯಾಯಗಳಲ್ಲಿ ತಮ್ಮ ಜೀವನ ಮತ್ತು ಚಳವಳಿಯ 140 ಅನುಭವದ ಪ್ರಸಂಗಗಳನ್ನು 748 ಪುಟಗಳ ಕೃತಿಯಾಗಿ ಹೊರತಂದಿದ್ದಾರೆ.

ಕಳೆದ 11 ವರ್ಷಗಳಿಂದ ವೈಯಕ್ತಿಕ ಹಾಗೂ ಸಾಂಸ್ಕೃತಿಕವಾದ ಹಲವಾರು ಸಂಕಟ, ಸವಾಲುಗಳ ನಡುವೆಯೂ ಸತತ ಪರಿಶ್ರಮಪಟ್ಟು ದಲಿತ ಲೋಕದ ಅನುಭವ ಕಥನಗಳನ್ನು ಬರೆದಿರುವ ಅವರು, ಕೋಲಾರ ಜಿಲ್ಲೆ ಮಾತ್ರವಲ್ಲದೆ ಕರ್ನಾಟಕದ ಇತರೆ ಜಿಲ್ಲೆಗಳ ದಲಿತ ಹೋರಾಟಗಳನ್ನು ದಾಖಲೀಕರಿಸಬೇಕೆಂಬ ಹಂಬಲದಲ್ಲಿ ಈ ಬೃಹತ್ ಕೃತಿಯನ್ನು ರೂಪಿಸಿದ್ದಾರೆ.

ದೊಡ್ಡ ಕಾರ್ಯಕ್ರಮದ ಮೂಲಕ ಕೃತಿಯನ್ನು ಲೋಕಾರ್ಪಣೆಗೊಳಿಸುವ ಉದ್ದೇಶ ಇತ್ತಾದರೂ, ತಮ್ಮ ಆರೋಗ್ಯದಲ್ಲಿನ ಏರುಪೇರಿನ ಕಾರಣ ಜುಲೈ 10ರಂದು ಸರಳವಾಗಿ ಲೋಕಾರ್ಪಣೆಗೊಳಿಸಿದರು.

ಸಾಹಿತಿಗಳು, ಚಿಂತಕರು, ದಲಿತ ಸಂಘಟನೆಯ ಒಡನಾಡಿಗಳು ಹಾಗೂ ಮಿತ್ರರ ಕೋರಿಕೆ ಮತ್ತು ನಿರೀಕ್ಷೆಯಂತೆ ‘ಕಾಲಡಿಯ ಕಣ್ಣು’ ಕೃತಿಯನ್ನು ಬಿಡುಗಡೆಗೊಳಿಸಲಾಗಿದ್ದು, ರಾಜ್ಯಾದ್ಯಂತ ಪ್ರಮುಖ ಪುಸ್ತಕ ಮಳಿಗೆಗಳಲ್ಲಿ ಶನಿವಾರ (ಜುಲೈ 11) ದಿಂದ ಮಾರಾಟಕ್ಕೆ ಲಭ್ಯವಾಗಲಿದೆ.

ಹೊಸ ತಲೆಮಾರಿನ ಹೋರಾಟಗಾರರು ಹಾಗೂ ಬರಹಗಾರರು ಈ ಕೃತಿಯ ಮೂಲಕ ನಮ್ಮ ನೆಲದ ಗತಚರಿತ್ರೆ ಹಾಗೂ ಸಾಮಾಜಿಕ ವಾಸ್ತವಗಳನ್ನು ಅರಿತುಕೊಂಡು, ತಮ್ಮ ಅರಿವನ್ನು ಇತರರೊಂದಿಗೆ ಹಂಚಿಕೊಳ್ಳುವ ಮೂಲಕ ಸಮಾಜದಲ್ಲಿ ದ್ವೇಷರಹಿತ ಸಾಮರಸ್ಯ ಹಾಗೂ ಸದ್ವಿವೇಕಗಳು ಸದೃಢವಾಗಿ ಬೆಳೆಯುವಂತಾಗಲಿ ಎಂಬ ಆಶಯವನ್ನು ಈ ಕೃತಿ ಹೊಂದಿದೆ.

‘ಕಾಲಡಿಯ ಕಣ್ಣು’ ಕೃತಿಯನ್ನು ಕನ್ನಡ ನಾಡಿನ ಓದುಗರು ಪ್ರೀತಿಯಿಂದ ಸ್ವೀಕರಿಸಿ, ಮುಕ್ತ ಮನಸ್ಸಿನಿಂದ ಓದಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ಜನಪರ ಚಳವಳಿ ಚೇತನಗಳಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ಕೃತಿಕಾರ ಸಿ.ಎಂ. ಮುನಿಯಪ್ಪ ಕೋರಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X