Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. ಕೋಲಾರ: ಸರಕಾರಿ ಪದವಿ ಕಾಲೇಜಿನ ಪರೀಕ್ಷಾ...

ಕೋಲಾರ: ಸರಕಾರಿ ಪದವಿ ಕಾಲೇಜಿನ ಪರೀಕ್ಷಾ ಕೊಠಡಿ ಗೋಡೆಗಳೇ ವಿದ್ಯಾರ್ಥಿಗಳಿಗೆ 'ನಕಲು ಚೀಟಿ'!

ಪರೀಕ್ಷಾ ಕೊಠಡಿಯ ಗೋಡೆಯಲ್ಲೆಲ್ಲ ಕಾಣಿಸುತ್ತಿವೆ ಸಿದ್ಧ ಉತ್ತರಗಳ ಬರಹ

ವಾರ್ತಾಭಾರತಿವಾರ್ತಾಭಾರತಿ10 Jan 2025 10:54 AM IST
share
ಕೋಲಾರ: ಸರಕಾರಿ ಪದವಿ ಕಾಲೇಜಿನ ಪರೀಕ್ಷಾ ಕೊಠಡಿ ಗೋಡೆಗಳೇ ವಿದ್ಯಾರ್ಥಿಗಳಿಗೆ ನಕಲು ಚೀಟಿ!

ಕೋಲಾರ: ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ (ಬಾಲಕರ ಕಾಲೇಜು) ಗೋಡೆಗಳು ಪದವಿ ಶಿಕ್ಷಣದ ಎಲ್ಲಾ ವಿಭಾಗದ ಸಿಲಬಸ್ ಗೆ ಸೇರಿದ ಪ್ರಶ್ನೆ ಮತ್ತು ಉತ್ತರಗಳಿಂದ ತುಂಬಿ ಹೋಗಿದೆ. ಗೋಡೆಗಳ ಮೇಲೆಲ್ಲ ಗಣಿತ ಮತ್ತು ವಿಜ್ಞಾನದ ಸೂತ್ರ, ಪ್ರಮೇಯಗಳನ್ನು ಶುದ್ಧವಾಗಿ ಕಾಣುವಂತೆ ಬರೆಯಲಾಗಿದೆ!

ಕೋಲಾರ ನಗರದ ಹೃದಯ ಭಾಗದಲ್ಲಿರುವ ಸರಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು ಐತಿಹಾಸಿಕ ಹಿನ್ನೆಲೆ ಇರುವ ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿತ್ತು. ಜಿಲ್ಲಾ ಕೇಂದ್ರದಲ್ಲಿ ದೊಡ್ಡ ಕಟ್ಟಡ ಇರುವ ಏಕೈಕ ಪ್ರಥಮ ದರ್ಜೆ ಕಾಲೇಜು ಇದಾಗಿದ್ದು, ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಗೂ ಪದವಿ ಪರೀಕ್ಷೆಗಳಿಗೆ ಇದು ಪರೀಕ್ಷಾ ಕೇಂದ್ರವಾಗಿದೆ. ಕೆಲವು ಖಾಸಗಿ ಕಾಲೇಜುಗಳಿಗೂ ಸಹ ಇದೇ ಪರೀಕ್ಷಾ ಕೇಂದ್ರವಾಗಿದೆ. ಆದರೆ ಇದೀಗ ಇಲ್ಲಿನ ಪರೀಕ್ಷಾ ಕೊಠಡಿಗಳ ಗೋಡೆಗಳೇ ವಿದ್ಯಾರ್ಥಿಗಳಿಗೆ ನಕಲು ಚೀಟಿಯಾಗಿದೆ ಎಂಬ ಆರೋಪ ಕೇಳಿಬಂದಿದೆ.

ಪರೀಕ್ಷಾ ಕೊಠಡಿಗಳ ನಾಲ್ಕೂ ಗೋಡಗಳೂ ಬರವಣಿಗೆಗಳಿಂದ ಅಲಂಕಾರಗೊಂಡಂತಿದೆ. ಪದವಿ ಶಿಕ್ಷಣದ ಎಲ್ಲಾ ವಿಭಾಗದ ಸಿಲಬಸ್ ಗೆ ಸೇರಿದ ಪ್ರಶ್ನೆ ಮತ್ತು ಉತ್ತರಗಳು ಗೋಡೆಗಳ ಮೇಲೆ ಶುದ್ಧವಾಗಿ ಕಾಣುವಂತೆ ಬರೆಯಲಾಗಿದೆ. ಪರೀಕ್ಷೆಗಳು ಬರೆಯುವ ಯಾವುದೇ ವಿಭಾಗದ ವಿದ್ಯಾರ್ಥಿಗಳಿಗೆ ಉತ್ತರ ಗೊತ್ತಿಲ್ಲದಿದ್ದರೆ ಒಮ್ಮೆ ಗೋಡೆಯ ಮೇಲೆ ಕಣ್ಣಾಡಿಸಿದರೆ ಎಲ್ಲಾ ಉತ್ತರಗಳು ಸಿಗುತ್ತವೆ. ಇದರಿಂದ ಎಲ್ಲಾ ವಿದ್ಯಾರ್ಥಿಗಳು ಅರಾಮವಾಗಿ ಪರೀಕ್ಷೆ ಬರೆಯಲು ಸಾಧ್ಯವಾಗುತ್ತದೆ. ಇದೂ ಒಂದು ರೀತಿಯಲ್ಲಿ ಸಾಮೂಹಿಕ ನಕಲು ಕೇಂದ್ರದಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಮುನ್ನ ಕೊಠಡಿಗಳಿಗೆ ಬಣ್ಣ ಬಳಿಯುವ ಕೆಲಸ ಸಹ ಮಾಡುವುದಿಲ್ಲ. ಇಡೀ ಕಾಲೇಜಿನ ಕಟ್ಟಡಗಳು ಬಣ್ಣ ಕಾಣದೆ ಹಾಳುಕೊಂಪೆಯಂತಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಅತಿಥಿ ಉಪನ್ಯಾಸಕರೇ ತುಂಬಿರುವ ಈ ಕಾಲೇಜಿನಲ್ಲಿ ಗೋಡೆಯ ಮೇಲಿನ ಉತ್ತರಗಳನ್ನು ಮಾಸ್ ಕಾಪಿ ಮಾಡುವ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮರೀಚಿಕೆಯಾಗಿದೆ.

ಪರೀಕ್ಷಾ ಕೊಠಡಿಗಳ ಗೋಡೆಗಳಲ್ಲಿ ಬರೆದಿರುವ ಸಿದ್ಧ ಉತ್ತರಗಳು


ಕಾಲೇಜಿನಲ್ಲಿ ಸಿಬ್ಬಂದಿ ಕೊರತೆ ಇದೆ, ಡಿ ಗ್ರೂಪ್ ನೌಕರರು ಇಬ್ಬರೇ ಇದ್ದು ಅವರಿಗೂ ವಯಸ್ಸಾಗಿದೆ. ಕಸ ಗುಡಿಸುವ ಹಾಗೂ ವಿಲೇವಾರಿಗೆ ಕಷ್ಟವಾಗಿದೆ. ಇನ್ನೂ ಗೋಡೆಯ ಮೇಲಿನ ಬರಹದಲ್ಲಿರುವುದು ಹಳೆಯ ಸಿಲಬಸ್. ಇದರಿಂದ ವಿದ್ಯಾರ್ಥಿಗಳಿಗೆ ಉತ್ತರ ಬರೆಯಲು ಆಗುವುದಿಲ್ಲ. ಶೀಘ್ರದಲ್ಲೇ ಗೋಡೆಗಳಿಗೆ ಬಣ್ಣ ಬಳಿಯಲು ವ್ಯವಸ್ಥೆ ಮಾಡಲಾಗುವುದು.

- ಡಾ.ಎಸ್.ತ್ಯಾಗರಾಜ್, ಪ್ರಾಂಶುಪಾಲರು, ಸರಕಾರಿ ಬಾಲಕರ ಪ್ರಥಮ ದರ್ಜೆ ಕಾಲೇಜು. ಕೋಲಾರ

ಪರೀಕ್ಷೆ ಬರೆಯುವ ಕೊಠಡಿಗಳ ಗೋಡೆಗಳು ಶುದ್ಧವಾಗಿರಬೇಕು, ಪರೀಕ್ಷೆಗೆ ಮುಂಚಿತವಾಗಿ ಗೋಡೆಗಳಿಗೆ ಬಣ್ಣ ಬಳಿಯುವ ಕೆಲಸ ಕಾಲೇಜು ಆಡಳಿತ ಆದ್ಯತೆ ನೀಡಿ ಮಾಡಬೇಕು. ಬಾಲಕರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರೀಕ್ಷೆ ನಡೆಯುವ ಕೊಠಡಿಗಳ ಗೋಡೆಗಳ ಮೇಲೆ ಉತ್ತರಗಳು ಸಿಗುತ್ತವೆ ಎಂದು ಈಗಾಗಲೇ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಕಾಲೇಜು ಪ್ರಾಂಶುಪಾಲರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಎಲ್ಲಾ ಕಾಲೇಜುಗಳು ಪರೀಕ್ಷೆಗೆ ಮುಂಚಿತವಾಗಿ ಗೋಡೆಗಳಿಗೆ ಬಣ್ಣ ಬಳಿಯುವ ಕೆಲಸ ಮಾಡಬೇಕು. ತಪ್ಪಿದರೆ ಆ ಕಾಲೇಜಿನ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸಲಾಗುವುದು.

- ಪ್ರೊ..ತಿಪ್ಪೇಸ್ವಾಮಿ, ರಿಜಿಸ್ಟ್ರಾರ್, ಮೌಲ್ಯ ಮಾಪನ, ಬೆಂಗಳೂರು ಉತ್ತರ ವಿಶ್ವವಿದ್ಯಾನಿಲಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X