Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. ಮಾಧ್ಯಮವು ದೇಶ,‌ ಸಮಾಜದ ಕಣ್ಣು ತೆರೆಸುವ...

ಮಾಧ್ಯಮವು ದೇಶ,‌ ಸಮಾಜದ ಕಣ್ಣು ತೆರೆಸುವ ಕೆಲಸ‌ ಮಾಡಬೇಕು‌ : ಪ್ರೊ.ಬಿ.ಡಿ.ಕುಂಬಾರ್

ʼಮಕ್ಕಳ ಹಕ್ಕುಗಳು-ಆರೋಗ್ಯ ಹಾಗೂ ರಕ್ಷಣೆʼ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ18 Dec 2024 12:33 PM IST
share
ಮಾಧ್ಯಮವು ದೇಶ,‌ ಸಮಾಜದ ಕಣ್ಣು ತೆರೆಸುವ ಕೆಲಸ‌ ಮಾಡಬೇಕು‌ : ಪ್ರೊ.ಬಿ.ಡಿ.ಕುಂಬಾರ್

ದಾವಣಗೆರೆ: ʼಬದಲಾವಣೆ ಜಗದ ನಿಯಮ. ಬದಲಾವಣೆ ‌ಮಾಡಿಕೊಳ್ಳದಿದ್ದರೆ ದೇಶ,‌ ಸಮಾಜ ಹಿಂದುಳಿಯುತ್ತದೆ‌. ಮಾಧ್ಯಮವು ದೇಶ,‌ ಸಮಾಜದ ಕಣ್ಣು ತೆರೆಸುವ ಕೆಲಸ‌ ಮಾಡಬೇಕು‌ʼ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಬಿ.ಡಿ.ಕುಂಬಾರ್ ತಿಳಿಸಿದರು.

ಯುನಿಸೆಫ್ ಸಹಯೋಗದಲ್ಲಿ ದಾವಣಗೆರೆ ವಿಶ್ವವಿದ್ಯಾಲಯದ ಹಾಗೂ ಪತ್ರಿಕೋದ್ಯಮ ವಿಭಾಗದ ಆಶ್ರಯದಲ್ಲಿ ವಿಶ್ವವಿದ್ಯಾಲಯದ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ʼಮಕ್ಕಳ ಹಕ್ಕುಗಳು, ಆರೋಗ್ಯ ಹಾಗೂ ರಕ್ಷಣೆʼ ಕುರಿತ ಎರಡು ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

'ವಿಶೇಷವಾಗಿ ಮಕ್ಕಳಿಗಾಗಿ ಇರುವ ಕಾರ್ಯಾಗಾರವಿದು. ಮಕ್ಕಳು ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ. ಮಕ್ಕಳ ಹಕ್ಕು ರಕ್ಷಣೆ ಹಾಗೂ ಆರೋಗ್ಯ ‌ವಿಚಾರಕ್ಕೆ ಒತ್ತು ನೀಡಬೇಕಾದ ಅನಿವಾರ್ಯ ನಿರ್ಮಾಣವಾಗಿದೆ' ಎಂದರು.

'ಮಕ್ಕಳ ಹಕ್ಕುಗಳ ರಕ್ಷಣೆ ಬರೀ ಯುನಿಸೆಫ್ ಜವಾಬ್ದಾರಿ ಅಲ್ಲ.‌ ನಮ್ಮೆಲ್ಲರ ಜಬಾವ್ದಾರಿ‌ ಆಗಿದೆ. ಮಕ್ಕಳ‌ ಮೇಲೆ‌ ಮಾನಸಿಕ‌ ಹಾಗೂ ದೈಹಿಕ ದೌರ್ಜನ್ಯ ಪ್ರಕರಣ‌ ಹೆಚ್ಚುತ್ತಿವೆ. ಹಿಂದೆ ‌ಪತ್ರಿಕೆಗಳಲ್ಲಿ ಮಕ್ಕಳಿಗೆ ಪ್ರತ್ಯೇಕ ಪುಟ ಇರುತಿತ್ತು. ಈಗ ಮಕ್ಕಳು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡಬೇಕಾದ ಪರಿಸ್ಥಿತಿ ಇದೆ. ಪೋಕ್ಸೊ ಪ್ರಕರಣ‌‌ ಹೆಚ್ಚುತ್ತಿವೆ‌‌' ಎಂದು ವಿಷಾದ ವ್ಯಕ್ತಪಡಿಸಿದರು.

'ಬಡ‌ ಮಕ್ಕಳಿಗಾಗಿ ಯುನಿಸೆಫ್ ಉತ್ತಮ ಕೆಲಸ‌ ಮಾಡುತ್ತಿದೆ. ಲಿಂಗ ಸಮಾನತೆ ಕಾಯ್ದುಕೊಳ್ಳಲು‌ ವಿದೇಶಗಳಲ್ಲಿ ಪ್ರಯತ್ನ ನಡೆದಿದೆ. ಆದರೆ ಇಲ್ಲಿ ಹೆಣ್ಣು ಮಕ್ಕಳು ಭೂಷಣ‌ ಅಲ್ಲ ಎಂಬ ‌ಕುಹಕ ನಡೆಯುತ್ತಿದೆ. ಇದರಿಂದ ಲಿಂಗ ‌ಅಸಮಾನತೆ ಹೆಚ್ಚುತ್ತಿದೆ. ರೈತರಿಗೆ ಹೆಣ್ಣು ‌ಸಿಗದ ಪರಿಸ್ಥಿತಿ ನೆಲೆಸಿದೆ. ಅಸ್ವಸ್ಥತೆ ಸಮಾಜ ನಿರ್ಮಾಣ ‌ಮಾಡುತ್ತಿದ್ದೇವೆ' ಎಂದು ‌ನುಡಿದರು.

ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಂವಹನ ವಿಭಾಗದ ಮುಖ್ಯಸ್ಥೆ ಸ್ವಪ್ನಾ ನಾಯ್ಕ್ ಮಾತನಾಡಿ, 'ಕೋವಿಡ್ ಬಳಿಕ ಮಕ್ಕಳನ್ನು ಹೆಚ್ಚಾಗಿ ನಿರ್ಲಕ್ಷಿಲಾಗುತ್ತಿದೆ ಎಂಬುದು ಯುನೆಸ್ಕೋ ವಾದವಾಗಿದೆ. ಇದು ಮೂರನೇ ವಲಯ ‌ಮಟ್ಟದ ಕಾರ್ಯಕ್ರಮ ಆಗಿದೆ. ಪತ್ರಿಕೆಗಳಲ್ಲಿ ಮಕ್ಕಳಿಗೆ ಸಂಬಂಧಿಸಿದಂತೆ ವರದಿಗಾರಿಕೆ ನೆಗೆಟಿವ್ ಆಗಿದೆ. ಮಕ್ಕಳ ಮಾನಸಿಕ ಆರೋಗ್ಯದ ವಿಚಾರದ ಬಗ್ಗೆ ಅಧ್ಯಯನ ನಡೆಯಬೇಕಿದೆ. ಜೊತೆಗೆ ಮಕ್ಕಳು ಡಿಜಿಟಲ್‌ ಸಂಪರ್ಕದ ವಿಚಾರದ ಬಗ್ಗೆಯೂ ಚರ್ಚೆ ಆಗಬೇಕಿದೆ' ಎಂದರು.

'ಮಕ್ಕಳ ವಿಚಾರದಲ್ಲಿ ಪತ್ರಿಕೆಗಳಲ್ಲಿ ಸಂಪಾದಕೀಯ ಕೂಡ ಬರುತ್ತಿದೆ. ಮಕ್ಕಳ ವಿಚಾರವನ್ಜು ಗಂಭೀರವಾಗಿ ಪರಿಗಣಿಸಿದ್ದಾರೆ. ಅದು ಸಾಕಾಗುತ್ತಿಲ್ಲ. ಇನ್ನೂ ಹೆಚ್ಚಿನ ವಿಚಾರ ‌ಬರಬೇಕಿದೆ‌' ಎಂದು ಹೇಳಿದರು.

ಯುನಿಸೆಫ್ ಹೈದರಾಬಾದ್‌ನ ಪ್ರಸುನ್ ಸೇನ್ ಮಾತನಾಡಿ, ʼಸಾಂಕ್ರಾಮಿಕವಲ್ಲದ‌ ರೋಗಗಳು ಹೆಚ್ಚುತ್ತಿವೆ. ಶೇ.30ರಷ್ಟು ಮಕ್ಕಳು, ಯುವಕರು ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಸ್ಪರ್ಧಾತ್ಮಕ ಯುಗದಲ್ಲಿ ಸಮತೋಲನ‌ ಕಾಯ್ದುಕೊಳ್ಳುವುದು ಕಷ್ಟವಾಗಿದೆ‌ʼ ಎಂದರು.

ದಾವಣಗೆರೆಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಶಿವಕುಮಾರ್ ಕಣಸೋಗಿ ಮಾತನಾಡಿ, ʼನಮ್ಮ ವಿಶ್ವವಿದ್ಯಾಲಯಕ್ಕೆ ಲಭಿಸಿದ ಅತ್ಯುತ್ತಮ ಅವಕಾಶ ಇದು. ಕುಲಪತಿ ‌ಅದಕ್ಕೆ ಸ್ಪಂದಿಸಿ ಸಹಕಾರ‌ ನೀಡಿದ್ದಾರೆʼ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X