Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೋಲಾರ
  4. ʼಭೀಮ ಕೋರೆಗಾಂವ್ʼ ಚಿತ್ರ ಬಿಡುಗಡೆ ಮಾಡಿದ...

ʼಭೀಮ ಕೋರೆಗಾಂವ್ʼ ಚಿತ್ರ ಬಿಡುಗಡೆ ಮಾಡಿದ ಎಂಎಲ್‌ಸಿ ಅನಿಲ್‌ ಕುಮಾರ್‌

ವಾರ್ತಾಭಾರತಿವಾರ್ತಾಭಾರತಿ13 May 2026 11:40 PM IST
share
ʼಭೀಮ ಕೋರೆಗಾಂವ್ʼ ಚಿತ್ರ ಬಿಡುಗಡೆ ಮಾಡಿದ ಎಂಎಲ್‌ಸಿ ಅನಿಲ್‌ ಕುಮಾರ್‌

ಕೋಲಾರ: ಮಹಾರ್‌ ಸೈನಿಕರ ಶೌರ್ಯ ಪ್ರಸ್ತುತಪಡಿಸುವ ‘ಭೀಮ ಕೋರೆಗಾಂವ್’ ಎಐ ಚಿತ್ರವನ್ನು ಬುಧವಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌.ಅನಿಲ್‌ ಕುಮಾರ್‌ ಬಿಡುಗಡೆ ಮಾಡಿದರು.

ಭೀಮಾ ನದಿ ತೀರದಲ್ಲಿ ನಡೆದಂಥ ಯುದ್ಧದ ಹಿನ್ನೆಲೆಯ ಮೇಲೆ ನಿರ್ಮಿತವಾದ ಎಐ ಆಧಾರಿತ ಚಿತ್ರ ಇದಾಗಿದೆ. ರುಜಾಕಿ ಸ್ಟುಡಿಯೋಸ್ ಆಶ್ರಯದಲ್ಲಿ ಶೋಭನ್ ಬಾಬು ನಿರ್ದೇಶನ, ಚಿತ್ರಕತೆ,‌ ಸಂಕಲನ ಮಾಡಿದ್ದಾರೆ. ದಲಿತ ಮಹಾ ಸೇನೆಯ ರಾಜ್ಯಾಧ್ಯಕ್ಷ ಖಾದ್ರಿಪುರ ಬಾಬು ನಿರ್ಮಿಸಿದ್ದಾರೆ. ‌ಸುಮಾರು 37 ನಿಮಿಷಗಳ ಈ ಸಿನಿಮಾವನ್ನು ಜನಪ್ರತಿನಿಧಿಗಳು ಹಾಗೂ ದಲಿತ ಮುಖಂಡರು ವೀಕ್ಷಿಸಿದರು.

ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರು ಹಳೆಯ ದಾಖಲೆ‌ ಪತ್ರವೊಂದನ್ನು ವೀಕ್ಷಣೆ ಮಾಡುವುದರೊಂದಿಗೆ ಸಿನಿಮಾ ಆರಂಭವಾಗುತ್ತದೆ. ಮಹಾರ್‌ ಸೈನಿಕರ ಸಾಹಸ ಮೆಚ್ಚಿ ಬ್ರಿಟನ್‌ನ ಫ್ರಾನ್ಸಿಸ್ ಸ್ಟಂಟೌನ್ ಬರೆದಿದ್ದ ಪತ್ರವೊಂದನ್ನು ಅವರು ನೋಡುತ್ತಾರೆ. ಕೊನೆಯಲ್ಲಿ ಅಂಬೇಡ್ಕರ್‌ ಅವರ ಪ್ರೇರಣಾದಾಯಕ ಮಾತಿನೊಂದಿಗೆ ಸಿನಿಮಾ ಮುಗಿಯುತ್ತದೆ.

ಸಿನಿಮಾ ವೀಕ್ಷಣೆ ಬಳಿಕ ಮಾತನಾಡಿದ ಎಂಎಲ್‌ಸಿ ಎಂ.ಎಲ್‌.ಅನಿಲ್ ‌ಕುಮಾರ್, ಮೈನವಿರೇಳಿಸುವ ಸಿನಿಮಾ‌ವಿದು. 37 ನಿಮಿಷಗಳಲ್ಲಿ ‌ಇಡೀ ಭೀಮ ಕೋರೆಗಾಂವ್‌ ಇತಿಹಾಸ ತೋರಿಸಿದ್ದಾರೆ. ಅಂಬೇಡ್ಕರ್ ಅವರನ್ನು‌ ಅದ್ಭುತವಾಗಿ‌ ಚಿತ್ರಿಕರಿಸಿದ್ದಾರೆ. ಸಿದ್ಧನಾಯಕ ಪಾತ್ರವೂ ಚೆನ್ನಾಗಿ ‌ಮೂಡಿಬಂದಿದೆ. ಅದ್ಭುತವಾಗಿ ಕಲ್ಪನೆಯಿಂದ ಕೂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ದೊಡ್ಡ ದೊಡ್ಡ ನಿರ್ದೇಶಕರು ಮಾಡದ ಕೆಲಸವನ್ನು ಶೋಭನ್ ಬಾಬು ಮಾಡಿದ್ದಾರೆ.‌ ಯಾವುದೇ ‌ದೊಡ್ಡ ನಿರ್ದೇಶಕರು, ನಿರ್ಮಾಪಕರಿಗೆ ‌ಕಡಿಮೆ ಇಲ್ಲ. ಮುಂದೆ ಒಳ್ಳೆಯ ಅವಕಾಶಗಳು ಸಿಗಲಿವೆ. ಇದು ಪ್ರೀ ರಿಲೀಸ್ ಇವೆಂಟ್. ಈ ಚಿತ್ರವನ್ನು ಎಲ್ಲರಿಗೂ ತೋರಿಸಬೇಕು ಎಂದರು.

ಪರ್ತಕರ್ತ ಕೆ.ಎಸ್.ಗಣೇಶ್ ಮಾತನಾಡಿ, ಅಂಬೇಡ್ಕರ್ ಅವರ ಆತ್ಮ‌ ಖಂಡಿತ ಸಂತೃಪ್ತಿಗೊಂಡಿರುತ್ತದೆ. ಅದಕ್ಕೆ ಕಾರಣ ನಿರ್ದೇಶಕ ಶೋಭನ್‌ ಬಾಬು ಕಥೆ ಕಟ್ಟಿಕೊಟ್ಟಿರುವ ರೀತಿ. ಇತಿಹಾಸದಲ್ಲಿ ಹೇಳಲಾಗದ ಹಲವಾರು ಕಥೆಗಳಿವೆ. ಅಂಬೇಡ್ಕರ್ ದಾಖಲೆ ಪರಿಶೀಲಿಸುವಾಗ ಅದರಲ್ಲಿ ‌ಈ ಭೀಮ ‌ಕೋರೆಗಾಂವ್‌ ವಿಚಾರ ಗೊತ್ತಾಗುತ್ತದೆ. ಇಂಥ ಸಿನಿಮಾ ‌ಮಾಡಲು ಬಂದವರು ಕಡಿಮೆ. ಈಗ ಅದ್ಭುತವಾಗಿ ಎಐ ಸಿನಿಮಾ ಕಟ್ಟಿ ಕೊಟ್ಟಿದ್ದಾರೆ. ರೋಮಾಂಚನ ಉಂಟು ಮಾಡುತ್ತದೆ. ಎಲ್ಲಾ ವಿದ್ಯಾರ್ಥಿಗಳಿಗೆ ಈ ಸಿನಿಮಾ ತೋರಿಸಬೇಕು ಎಂದು ಹೇಳಿದರು.

ನಿರ್ಮಾಪಕ ಖಾದ್ರಿಪುರ ಬಾಬು ಮಾತನಾಡಿ, ಈಗ ಗಣ್ಯರಿಗೆ ಮಾತ್ರ ಈ ಚಿತ್ರ ತೋರಿಸಲಾಗಿದೆ. ಮುಂದೆ ಎಲ್ಲರಿಗೂ ತೋರಿಸುತ್ತೇವೆ, ಪ್ರಚಾರ ಕೂಡ ಮಾಡುತ್ತೇವೆ. ನಿಜವಾಗಿಯೂ ಇಂಥ ಸಿನಿಮಾ ಮಾಡಲು 300 ಕೋಟಿ‌ ರೂ. ಬೇಕಾಗುತ್ತದೆ. ಆದರೆ, ಎಐ ಮೂಲಕ ಕೇವಲ 37 ನಿಮಿಷಗಳಲ್ಲಿ ಕಥೆ ಕಟ್ಟಿಕೊಡಲಾಗಿದೆ ಎಂದರು.

ನಿರ್ದೇಶಕ ಶೋಭನ್ ಬಾಬು ಮಾತನಾಡಿ, ಅಂಬೇಡ್ಕರ್ ಕುರಿತು ಸಿನಿಮಾ ಮಾಡಬೇಕೆಂದು ತಂದೆ ಹೇಳಿದ್ದರು. ಈ ಸಂಬಂಧ ನಾನು ಆಲೋಚನೆಯಲ್ಲಿ ತೊಡಗಿದ್ದೆ. ಅಂಬೇಡ್ಕರ್‌ ಅವರನ್ನು ಒಳಗೊಂಡ ಭೀಮ ಕೋರೆಗಾಂವ್ ಸಿನಿಮಾ ಮಾಡಿದೆ ಎಂದು ತಿಳಿಸಿದರು.

ಕಾಂಗ್ರೆಸ್‌ ಗ್ರಾಮಾಂತರ ಬ್ಲಾಕ್‌ ಅಧ್ಯಕ್ಷ ಮೈಲಾಂಡಹಳ್ಳಿ‌ ಮುರಳಿ, ನಗರ ಬ್ಲಾಕ್‌ ಅಧ್ಯಕ್ಷ ಸೈಯದ್‌ ಅಫ್ಸರ್, ಕೋಮುಲ್‌ ನಿರ್ದೇಶಕ ರಮೇಶ್‌ ಚಂಜಿಮಲೆ, ಸಿಂಡಿಕೇಟ್‌ ಸದಸ್ಯ ಸೀಸಂದ್ರ ಗೋಪಾಲಗೌಡ,‌ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶನ ಎಂ.ಶ್ರೀನಿವಾಸನ್‌, ಮುಖಂಡರಾದ ಸಂಪಂಗೆರೆ ಮುನಿರಾಜು, ರಾಜಕುಮಾರ್, ಮಾರ್ಜೇನಹಳ್ಳಿ ಬಾಬು, ಬೆಳಗಾನಹಳ್ಳಿ ಮುನಿವೆಂಕಟಪ್ಪ, ಡಿಪಿಎಸ್ ಮುನಿರಾಜು ಪಾಲ್ಗೊಂಡಿದ್ದರು.

Tags

Bhima Koregaon movieAnil Kumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X