Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಎಂಎಸ್‌ಪಿಎಲ್‌ನಿಂದ ಕೊಪ್ಪಳದಲ್ಲಿ...

ಎಂಎಸ್‌ಪಿಎಲ್‌ನಿಂದ ಕೊಪ್ಪಳದಲ್ಲಿ ಮತ್ತೊಂದು ಬೃಹತ್ ಕಾರ್ಖಾನೆ

ಸರಕಾರದ ಒಪ್ಪಿಗೆಗೆ ಸಾರ್ವಜನಿಕರ ವಿರೋಧ

ವಾರ್ತಾಭಾರತಿವಾರ್ತಾಭಾರತಿ16 Feb 2025 2:46 PM IST
share

ಕೊಪ್ಪಳ : ಕೊಪ್ಪಳ ನಗರಕ್ಕೆ ಹೊಂದಿಕೊಂಡೇ ಇರುವ ಎಂಎಸ್‌ಪಿಎಲ್ ಕಾರ್ಖಾನೆಯಿಂದ ೫೪ ಸಾವಿರ ಕೋಟಿ ರೂ. ವೆಚ್ಚದಲ್ಲಿ ಸುಮಾರು ೧,೦೦೦ ಎಕರೆ ಭೂಮಿಯಲ್ಲಿ ಮತ್ತೊಂದು ಬೃಹತ್ ಕಾರ್ಖಾನೆ ಸ್ಥಾಪನೆಗೆ ಸರಕಾರ ಒಪ್ಪಿಗೆ ನೀಡಿದ್ದು ಇದಕ್ಕೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

ಈಗಾಗಲೇ ಜಿಲ್ಲೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಕಾರ್ಖಾನೆಗಳಿದ್ದು, ನಗರದಿಂದ 10ರಿಂದ 15 ಕಿ.ಮೀ ದೂರದಲ್ಲೇ ಸುಮಾರು 40ಕ್ಕೂ ಹೆಚ್ಚು ಕಾರ್ಖಾನೆಗಳಿವೆ. ಇದರಿಂದ ದೂಳು ಸಹಿತ ವಾಯು ಮಾಲಿನ್ಯ ಉಂಟಾಗುತ್ತಿದ್ದು, ನಗರದ ಜನರು ನಿತ್ಯ ಕೆಮ್ಮು, ನೆಗಡಿ ಮತ್ತು ಅಸ್ತಮಾದಂತಹ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

ಕಾರ್ಖಾನೆಗಳ ದೂಳು ಎಷ್ಟರ ಮಟ್ಟಿಗೆ ಇದೆ ಎಂದರೆ ಇಲ್ಲಿನ ಜಿಲ್ಲಾಡಳಿತ ಭವನವನ್ನು ನೋಡಿದರೆ ಸಾಕು. ಇಡೀ ಜಿಲ್ಲಾಡಳಿತ ಭವನ ದೂಳಿನಿಂದ ಕೂಡಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಹೀಗಿರುವಾಗ ಮತ್ತೊಂದು ಕಾರ್ಖಾನೆ ಸ್ಥಾಪಿಸಿ ಏನು ಸಾಧಿಸಲು ಹೊರಟಿದ್ದಾರೆ ಎಂದು ಸಾರ್ವಜಿನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕೊಪ್ಪಳ ತಾಲೂಕಿನಲ್ಲಿರುವ ಸ್ಪಾಂಜ್ ಐರನ್, ಸಿಮೆಂಟ್, ಕೆಮಿಕಲ್ ಫರ್ಟಿಲೈಸರ್ ಮತ್ತು ಸ್ಟೀಲ್ ತಯಾರಿಕ ಕಾರ್ಖಾನೆಗಳಿದ್ದು, ಇವುಗಳಲ್ಲಿ ಬಹುತೇಕ ಕಾರ್ಖಾನೆಗಳು ಪರಿಸರ ಇಲಾಖೆಯ ನಿಯಮಗಳನ್ನು ಪಾಲಿಸುತಿಲ್ಲ. ಇವುಗಳಲ್ಲಿ 12 ಕಂಪನಿಗಳನ್ನು ಮುಚ್ಚಲು ಆದೇಶಿಸಲಾಗಿದೆ.

ಕಾರ್ಖಾನೆ ಸ್ಥಾಪಿಸುವ ಸಂದರ್ಭದಲ್ಲಿ ಸ್ಥಳೀಯ ಜನರಿಗೆ ಉದ್ಯೋಗ ನೀಡುತ್ತೇವೆ, ಜನರನ್ನು ಆರ್ಥಿಕವಾಗಿ ಸುಧಾರಿಸುತ್ತೇವೆ ಎಂದು ಹೇಳಿ ರೈತರು ಮತ್ತು ಜನರಿಂದ ಜಮೀನುಗಳನ್ನು ಖರೀದಿಸಲಾಯಿತು. ಕಾರ್ಖಾನೆ ಪ್ರಾರಂವಾದ ನಂತರ ಸ್ಥಳೀಯರಿಗೆ ಡಿ-ಗ್ರೂಪ್ ಹುದ್ದೆಗಳನ್ನು ನೀಡಿ ಮೂಗಿಗೆ ತುಪ್ಪ ಹಚ್ಚಲಾಯಿತು. ಉಳಿದ ಉನ್ನತ ಹುದ್ದೆಗಳನ್ನು ಹೊರ ರಾಜ್ಯದವರಿಗೆ ಧಾರೆ ಎರೆಯಲಾಯಿತು.ಈ ಕುರಿತು ಸಾಮಾಜಿಕ ಚಿಂತಕರು ಮತ್ತು ಪ್ರಗತಿಪರರು ಸೇರಿ ಕಾರ್ಖಾನೆ ಸ್ಥಾಪನೆ ವಿರುದ್ಧ ಹೋರಾಟವನ್ನು ಆರಂಭಿಸಲಿದ್ದು, ಹೊರಾಟದ ರೂಪು ರೇಷೆಗನ್ನು ಸಿದ್ಧಪಡಿಸಲಾಗುತ್ತಿದೆ.

ಇದರ ಬಗ್ಗೆ ವಿಪಕ್ಷ ನಾಯಕರು ಮಾತ್ರ ಮಾತನಾಡುತ್ತಿದ್ದು, ಆಡಳಿತಾರೂಢ ಪಕ್ಷದ ಸಂಸದ, ಸಚಿವರು ಮತ್ತು ಶಾಸಕರಿಂದ ಯಾವುದೇ ಹೇಳಿಕೆ ಬಂದಿಲ್ಲ.

ಸರಕಾರ ಕಾರ್ಖಾನೆ ನಿರ್ಮಾಣಕ್ಕೆ ಒಪ್ಪಿಗೆ ನೀಡಿರಹುದು. ಆದರೆ ನಮ್ಮ ಜನರು ಕಾರ್ಖಾನೆ ಬೇಡ ಎನ್ನುತ್ತಿದ್ದಾರೆ. ನಮಗೆ ಕಾರ್ಖಾನೆಗಿಂತ ಜನರ ಆರೋಗ್ಯ ಮುಖ್ಯ.

-ಶ್ರೀನಿವಾಸ ಗುಪ್ತಾ, ಅಧ್ಯಕ್ಷರು ನಗರಾಭಿವೃದ್ಧಿ ಪ್ರಾಧಿಕಾರ-ಕೊಪ್ಪಳ

ಕಾರ್ಖಾನೆ ನಗರದ ಹತ್ತಿರವೇ ಇದೆ. ಇದರಿಂದ ಜನರ ಆರೋಗ್ಯ ಕೆಟ್ಟು ಹೋಗುತ್ತದೆ. ಈಗಾಗಲೇ ಇಲ್ಲಿ ಬಹಳಷ್ಟು ಕಾರ್ಖಾನೆಗಳಿದ್ದು, ಇವುಗಳಿಂದ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದೇವೆ.

-ರಫಿ ಸಾಬ್, ಸ್ಥಳೀಯ

ಈಗಾಗಲೇ ನಗರದಲ್ಲಿ ಸುಮಾರು ಕಾರ್ಖಾನೆಗಳಿದ್ದು, ಇದರಿಂದ ನಗರದಲ್ಲಿ ದೂಳು ಮತ್ತು ಹೊಗೆ ಕವಿದಿದೆ. ಇದರಿಂದ ಜನರು ಕೆಮ್ಮು, ಅಸ್ತಮಾ, ಮತ್ತು ಟಿಬಿಯಂತಹ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಆದ್ದರಿಂದ ನಾವು ಕಾರ್ಖಾನೆ ವಿಸ್ತರಣೆ, ವಿಶ್ವವಿದ್ಯಾನಿಲಯ ಮುಚ್ಚದಂತೆ ಮತ್ತು ಅಣುಸ್ಥಾವರ ನಿರ್ಮಾಣವನ್ನು ವಿರೋಧಿಸಿ ಹೋರಾಟ ನಡೆಸಲಿದ್ದೇವೆ.

-ಅಲ್ಲಮ ಪ್ರಭು ಬೆಟ್ಟದೂರು, ಪ್ರಗತಿ ಪರ ಚಿಂತಕರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X