Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ...

ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯ : ಸಚಿವ ಶಿವರಾಜ್‌ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ11 Aug 2026 6:09 PM IST
share
ತುಂಗಭದ್ರಾ ಕಾಲುವೆಗಳಿಗೆ 90 ದಿನಗಳವರೆಗೆ ಮಾತ್ರ ನೀರು ಹರಿಸಲು ನಿರ್ಣಯ : ಸಚಿವ ಶಿವರಾಜ್‌ ತಂಗಡಗಿ
ಮುಂಗಾರು ಹಂಗಾಮಿನ 126ನೇ ನೀರಾವರಿ ಸಲಹಾ ಸಮಿತಿ ಸಭೆ

ಕೊಪ್ಪಳ : ಎಲ್ಲರ ಸಲಹೆ ಪಡೆದುಕೊಂಡ ಬಳಿಕ ಸದ್ಯ 90 ದಿನಗಳವರೆಗೆ ಮಾತ್ರ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಶಿವರಾಜ್‌ ತಂಗಡಗಿ ಹೇಳಿದರು.

ಮುನಿರಾಬಾದ್‌ನ ಕಾಡಾ ಟಿಬಿಪಿ ಸಭಾಂಗಣದಲ್ಲಿ ಮಂಗಳವಾರ ನಡೆದ ತುಂಗಭದ್ರಾ ಯೋಜನೆ ಹಾಗೂ ವಿಜಯನಗರ ಕಾಲುವೆಗಳ 126ನೇ ನೀರಾವರಿ ಸಲಹಾ ಸಮಿತಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲುವೆಗಳಿಗೆ ನೀರು ಹರಿಸುವ ಕುರಿತು ರೈತರ ಸಲಹೆ ಪಡೆಯಲಾಗಿದೆ. ಬಳಿಕ ಈ ಭಾಗದ ಎಲ್ಲ ಜನಪ್ರತಿನಿಧಿಗಳ ಸಭೆ ನಡೆಸಿ ಅವರ ಅಭಿಪ್ರಾಯವನ್ನೂ ಪಡೆದುಕೊಳ್ಳಲಾಗಿದೆ ಎಂದರು.

ಸದ್ಯ ತುಂಗಭದ್ರಾ ಜಲಾಶಯದಲ್ಲಿರುವ ನೀರಿನ ಲಭ್ಯತೆ ಆಧರಿಸಿ 90 ದಿನಗಳ ಕಾಲ ಕಾಲುವೆಗಳಿಗೆ ನೀರು ಹರಿಸುವ ಭರವಸೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಮಳೆಯ ಪ್ರಮಾಣ ಹಾಗೂ ಜಲಾಶಯಕ್ಕೆ ಹರಿದುಬರುವ ನೀರಿನ ಪ್ರಮಾಣ ಆಧರಿಸಿ ನೀರು ಹರಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು. ಈ ಕುರಿತು ಚರ್ಚಿಸಲು ಸೆ.11ರಂದು ಮತ್ತೊಮ್ಮೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

82 ಟಿಎಂಸಿ ನೀರು ಸಂಗ್ರಹ :

ತುಂಗಭದ್ರಾ ಜಲಾಶಯದಲ್ಲಿ ಸದ್ಯ 82 ಟಿಎಂಸಿ ನೀರು ಸಂಗ್ರಹವಾಗಿದ್ದು, ಲಭ್ಯ ನೀರಿನ ಆಧಾರದ ಮೇಲೆ 90 ದಿನಗಳವರೆಗೆ ಕಾಲುವೆಗಳಿಗೆ ನೀರು ಹರಿಸಲು ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.

120 ದಿನಗಳವರೆಗೆ ನೀರು ಹರಿಸಲು ಜಲಾಶಯದಲ್ಲಿ ಇನ್ನೂ 16 ಟಿಎಂಸಿ ನೀರಿನ ಕೊರತೆಯಿದೆ. ಮುಂದಿನ ದಿನಗಳಲ್ಲಿ 16 ಟಿಎಂಸಿ ನೀರು ಹರಿದುಬರುವ ನಿರೀಕ್ಷೆಯಿದೆ. ಜತೆಗೆ ಕುಡಿಯುವ ನೀರಿಗಾಗಿ ಜಲಾಶಯದಲ್ಲಿ 10 ಟಿಎಂಸಿ ನೀರನ್ನು ಕಾಯ್ದಿರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

120 ದಿನ ನೀರು ಹರಿಸಲು ಒತ್ತಾಯ :

ರೈತರ ಬೇಡಿಕೆಯಂತೆ ಕನಿಷ್ಠ 120 ದಿನಗಳವರೆಗೆ ಕಾಲುವೆಗಳಿಗೆ ನೀರು ಹರಿಸುವುದು ಅಗತ್ಯವಾಗಿದೆ ಎಂದು ಸಚಿವ ಬಿ.ನಾಗೇಂದ್ರ, ಶಾಸಕ ಜೆ.ಎನ್.ಗಣೇಶ ಹಾಗೂ ಬಿ.ಎಂ.ನಾಗರಾಜ ಅವರು ಸಭೆಯಲ್ಲಿ ಸಲಹೆ ನೀಡಿದರು.

ಸಭೆಯಲ್ಲಿ ಸಚಿವರಾದ ಬಿ.ನಾಗೇಂದ್ರ, ಕಾಡಾ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ, ಜಿಲ್ಲಾಧಿಕಾರಿಗಳಾದ ಡಾ.ಸುರೇಶ ಇಟ್ನಾಳ, ಕವಿತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ದಿ, ಜಾಹ್ನವಿ, ಕರ್ನಾಟಕ ನೀರಾವರಿ ನಿಗಮ ನಿಯಮಿತದ ಎಂಜಿನಿಯರ್ ಮನೋಜಕುಮಾರ ಗಡಬಳ್ಳಿ, ಮುನಿರಾಬಾದನ ತುಂಗಭದ್ರಾ ಯೋಜನೆ ವೃತ್ತ ಅಧೀಕ್ಷಕ ಅಭಿಯಂತರರಾದ ಎಸ್ ಬಿ ಮಲ್ಲಿಗವಾಡ, ಯರಮರಸನ ತುಂಗಭದ್ರಾ ಕಾಲುವೆ ನಿರ್ಮಾಣ ವೃತ್ತದ ಅಧೀಕ್ಷಕ ಅಭಿಯಂತರರಾದ ಸತ್ಯ ನಾರಾಯಾಣ ಶೆಟ್ಟಿ ಹಾಗೂ ಇನ್ನೀತರರು ಇದ್ದರು.

Tags

shivaraj tangadagiTungabhadra canalswater
share
ವಾರ್ತಾಭಾರತಿ
ವಾರ್ತಾಭಾರತಿ
Next Story
X