Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಡ್ಯಾಂ ಗೇಟ್ ಅಳವಡಿಕೆ ಹಿನ್ನೆಲೆ ಎರಡನೇ...

ಡ್ಯಾಂ ಗೇಟ್ ಅಳವಡಿಕೆ ಹಿನ್ನೆಲೆ ಎರಡನೇ ಬೆಳೆಗೆ ನೀರು ನೀಡಲು ಸಾಧ್ಯವಿಲ್ಲ : ಸಚಿವ ಶಿವರಾಜ್ ತಂಗಡಗಿ

ವಾರ್ತಾಭಾರತಿವಾರ್ತಾಭಾರತಿ14 Nov 2025 7:13 PM IST
share
ಡ್ಯಾಂ ಗೇಟ್ ಅಳವಡಿಕೆ ಹಿನ್ನೆಲೆ ಎರಡನೇ ಬೆಳೆಗೆ ನೀರು ನೀಡಲು ಸಾಧ್ಯವಿಲ್ಲ : ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ನ.14: ಕೇಂದ್ರ‌ ಸರಕಾರ ಹಾಗೂ ತುಂಗಭದ್ರಾ ಜಲಾಶಯದ ಮಂಡಳಿಯ ನಿರ್ಧಾರದಂತೆ ಅಣೆಕಟ್ಟಿಗೆ 33 ಗೇಟ್ ಅಳವಡಿಕೆ ಹಿನ್ನೆಲೆಯಲ್ಲಿ ಎರಡನೇ ಬೆಳೆಗೆ ನೀರಿಲ್ಲ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರೂ ಆದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ ಹೇಳಿದ್ದಾರೆ.

ವಿಧಾನಸೌಧದ ಸಭಾಂಗಣದಲ್ಲಿ ಜಲಸಂಪನ್ಮೂಲ‌‌ ಸಚಿವರಾದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ತುಂಗಭದ್ರಾ ಯೋಜನೆ ಹಾಗೂ ವಿಜಯನಗರ ಕಾಲುವೆಗಳ 125ನೇ ನೀರಾವರಿ ಸಲಹಾ ಸಮಿತಿ ಸಭೆಯ ಬಳಿಕ ಅವರು ಸಚಿವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸರಕಾರಕ್ಕೆ ರೈತರ ಹಿತ ಮುಖ್ಯ.‌ ಜೊತೆಗೆ ಅಣೆಕಟ್ಟಿನ ರಕ್ಷಣೆ ಕೂಡ ನಮ್ಮ‌ ಕರ್ತವ್ಯ.‌ ಈ ಹಿನ್ನೆಲೆಯಲ್ಲಿ ಕೊಪ್ಪಳ, ‌ರಾಯಚೂರು, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಎಲ್ಲ ಪಕ್ಷದ ಶಾಸಕರು, ಪರಿಷತ್ ಸದಸ್ಯರು ಹಾಗೂ ರೈತ ಮುಖಂಡರ ಜೊತೆ ಸಭೆ ನಡೆಸಿ ಒಕ್ಕೊರಲಿನಿಂದ‌ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.‌

ಡಿಸೆಂಬರ್ ಎರಡನೇ ವಾರದಿಂದ ಹೊಸ 33 ಗೇಟ್ ಅಳವಡಿಕೆ‌ ಕಾರ್ಯ ನಡೆಯಲಿದ್ದು, ಜೂನ್ ಅಂತ್ಯಕ್ಕೆ ಈ ಕಾರ್ಯ ಪೂರ್ಣಗೊಳ್ಳಲಿದೆ.‌ ಟೆಂಡರ್ ನಲ್ಲಿ‌ ಅರ್ಹತೆ ಪಡೆದಿರುವ ಗುಜರಾತ್ ಮೂಲದ ಕಂಪೆನಿಗೆ ಕಾಮಗಾರಿ ನಡೆಸಲು ಕಾರ್ಯಾದೇಶ ನೀಡಲಾಗಿದೆ. ಇದರ ಜೊತೆಗೆ ಕೆಲ ಕಾಲುವೆಗಳ‌ ದುರಸ್ತಿ ಹಾಗೂ ಇನ್ನಿತರ‌‌ ಅಣೆಕಟ್ಟಿನ ಸಂಪುರ್ಣ ಸಣ್ಣ ದುರಸ್ತಿಗಳನ್ನು ಇದೇ ಸಂದರ್ಭದಲ್ಲಿ‌ ಪೂರ್ಣಗೊಳಿಸಲಾಗುವುದು ಎಂದರು.

ನಮಗೆ ರೈತರ ಹಿತ ಮುಖ್ಯ. ಅದರ ಜೊತೆಗೆ ಭವಿಷ್ಯದ ದೃಷ್ಟಿಯಿಂದ ಅಣೆಕಟ್ಟಿನ ರಕ್ಷಣೆ ಕೂಡ ಬಹಳ ಮುಖ್ಯ. ‌ಕೆಲ ಬಿಜೆಪಿ ನಾಯಕರು ರೈತರನ್ನು ದಿಕ್ಕು ತಪ್ಪಿಸುವ ಕೆಲಸ‌ ಮಾಡುತ್ತಿದ್ದಾರೆ. ನಾಲ್ಕು ಜಿಲ್ಲೆಯ ಎಲ್ಲಾ ಪಕ್ಷಗಳ ಶಾಸಕರ ಒಮ್ಮತದ ಮೇರೆಗೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿಂದೆ ಜಲಾಶಯದ ಕ್ರಸ್ಟ್‌ ಗೇಟ್ ಮುರಿದ ಸಂದರ್ಭದಲ್ಲಿ, ಬೋರ್ಡ್ ನವರು ಅನುದಾನದ ಕೊಡದಿದ್ದರೂ ರಾಜ್ಯ ಸರಕಾರವೇ ಸಂಪೂರ್ಣ ಹಣ ವ್ಯಯಿಸಿ ನೂತನ ಗೇಟ್ ಅಳವಡಿಕೆ ಮಾಡಲಾಗುವುದು ಎಂದು ವಿಧಾನಸಭೆಯಲ್ಲಿ‌ ಜಲಸಂಪನ್ಮೂಲ‌‌ ಸಚಿವರಾದ ಡಿ.ಕೆ.ಶಿವಕುಮಾರ್‌ ಅವರು ಹೇಳಿದ್ದರು. ಆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್‌ ಹಾದಿಯಾಗಿ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದರು.‌ ಇದೀಗ ಗೇಟ್ ಅಳವಡಿಕೆ ಸಂದರ್ಭದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ನೀರಾವರಿ ಸಲಹಾ ಸಮಿತಿ‌ ಅಧ್ಯಕ್ಷ ಶಿವರಾಜ್ ತಂಗಡಗಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪ್ರಸ್ತುತ ಡ್ಯಾಂನಲ್ಲಿ‌‌‌ 75 ಟಿಎಂಸಿ‌ ನೀರು ಲಭ್ಯತೆ ಇದೆ. ನಿಂತ‌ ಬೆಳೆಗಳಿಗೆ ಯಾವುದೇ ತೊಂದರೆಯಾಗದಂತೆ ಜ.10ರವರೆಗೆ ನೀರು ಹರಿಸಲಾಗುವುದು. ಅಲ್ಲದೆ, ಬೇಸಿಗೆ ಸಮಯದಲ್ಲಿ ಕುಡಿಯುವ ನೀರಿಗಾಗಿ‌ ಕೆರೆಕಟ್ಟೆ ತುಂಬಿಸುವುದು ಹಾಗೂ ಇತರೆ ಉಪಯೋಗಕ್ಕಾಗಿ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲಾಗುವುದು ಎಂದು ಹೇಳಿದರು.

ಜಲಾಶಯದಲ್ಲಿನ‌ ನೀರಿನ ಸಂಗ್ರಹ ಲಭ್ಯತೆಯ ಮೇರೆಗೆ ನೀರಿನ ಬಳಕೆ ಮಾಡಲಾಗುತ್ತಿದೆ. ತುಂಗಭದ್ರ ಎಡದಂಡೆ ಮುಖ್ಯ ಕಾಲುವೆಗೆ ಡಿ1ರಿಂದ ಜ.10ರವರೆಗೆ ಬೆಳೆದು ನಿಂತ ಬೆಳೆಗಳಿಗೆ 3000 ಕ್ಯೂಸೆಕ್ ನಂತೆ, ಎಡದಂಡೆ ವಿಜಯನಗರ ಕಾಲುವೆಗೆ ಜ.1ರಿಂದ ಮೇ 10ರವರೆಗೆ 150 ಕ್ಯೂಸೆಕ್ ನಂತೆ ವಿತರಣಾ ಕಾಲುವೆ 1ರಿಂದ 11ಎ ರವರೆಗೆ ನೀರು ಹರಿಸಲಾಗುವುದು ತಿಳಿಸಿದರು.

ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆಗೆ ಡಿ.1ರಿಂದ ಜ.10ರವರೆಗೆ 1300 ಕ್ಯೂಸೆಕ್ ನಂತೆ, ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ಡಿ.1ರಿಂದ ಜ.10ರವರೆಗೆ 750 ಕ್ಯೂಸೆಕ್ ನಂತೆ, ರಾಯ ಬಸವಣ್ಣ ಕಾಲುವೆಗೆ ಜ.1ರಿಂದ ಮೇ 31ರವರೆಗೆ ಸರಾಸರಿ 250 ಕ್ಯೂಸೆಕ್, ಇನ್ನು ತುಂಗಭದ್ರಾ ಎಡದಂಡೆ ಮೇಲ್ಮಟ್ಟದ ಕಾಲುವೆಗೆ ಡಿ.1ರಿಂದ 25 ಕ್ಯೂಸೆಕ್ ನಂತೆ ಅಥವಾ ನೀರಿನ‌ ಮಟ್ಟ 1585 ಅಡಿಗಳವರೆಗೆ ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X