Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಬಣ್ಣದ ಮಾತು, ಸೂಟು-ಬೂಟು, ಹೆಲಿಕಾಪ್ಟರ್...

ಬಣ್ಣದ ಮಾತು, ಸೂಟು-ಬೂಟು, ಹೆಲಿಕಾಪ್ಟರ್ ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ6 Sept 2026 12:22 PM IST
share
ಬಣ್ಣದ ಮಾತು, ಸೂಟು-ಬೂಟು, ಹೆಲಿಕಾಪ್ಟರ್ ನಲ್ಲಿ ಓಡಾಟದಿಂದ ಪ್ರಜಾಸೇವಕ ಆಗಲು ಸಾಧ್ಯವಿಲ್ಲ: ಬಿ.ವೈ. ವಿಜಯೇಂದ್ರ

ಗಂಗಾವತಿ, ಸೆ. 6: ಬಳ್ಳಾರಿ ಚಲೋ ಪಾದಯಾತ್ರೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಹಲವು ಬಿಜೆಪಿ ನಾಯಕರು ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ನಮ್ಮ ಪಾದಯಾತ್ರೆಯ ಪರಿಣಾಮವಾಗಿಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉತ್ತರ ಕರ್ನಾಟಕದತ್ತ ಮುಖ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.-ವಿಜಯೇಂದ್ರ ಹೇಳಿದರು.

ಗಂಗಾವತಿಯ ಜಂಗಮರ ಕಲ್ಗುಡಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ನಿನ್ನೆ ‘ನಾಡಿನ ದೊರೆ’ ಎಂದು ಕರೆಯಬೇಡಿ, ‘ಪ್ರಜಾಸೇವಕ’ ಎಂದು ಕರೆಯಿರಿ ಎಂದು ಹೇಳಿದ್ದಾರೆ. ಆದರೆ, ಕಳೆದ ಮೂರು ತಿಂಗಳಿಂದ ಬೆಂಗಳೂರಿನಲ್ಲೇ ಇದ್ದ ಮುಖ್ಯಮಂತ್ರಿ, ನಾವು ಪಾದಯಾತ್ರೆ ಆರಂಭಿಸದಿದ್ದರೆ ಉತ್ತರ ಕರ್ನಾಟಕದತ್ತ ಬರುತ್ತಿದ್ದರೇ ಎಂಬುದನ್ನು ಜನರೇ ಪ್ರಶ್ನಿಸುತ್ತಿದ್ದಾರೆ ಎಂದರು.

“ಮುಖ್ಯಮಂತ್ರಿಯ ಜೀವನದ ಬಹುದೊಡ್ಡ ಆಸೆಗಳು ಬಿಡದಿ ಟೌನ್ಶಿಪ್ ಮತ್ತು ಕನಕಪುರ ಏರ್ಪೋರ್ಟ್ ಎಂದು ಕಾಣುತ್ತಿದೆ. ಇವೆರಡೂ ಯೋಜನೆಗಳು ಪೂರ್ಣಗೊಂಡರೆ, ಮುಂದೆ ಮುಖ್ಯಮಂತ್ರಿ ಆಗಿದ್ದರೂ, ಇಲ್ಲದಿದ್ದರೂ ಪರವಾಗಿಲ್ಲ ಎಂಬ ಲೆಕ್ಕಾಚಾರದಲ್ಲಿರುವಂತಿದೆ” ಎಂದು ವಿಜಯೇಂದ್ರ ವ್ಯಂಗ್ಯವಾಡಿದರು.

ಬಡವರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರ ಹೇಗೆ ‘ಪ್ರಜಾಸೇವಕ’ಸರ್ಕಾರ?

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ವಿಜಯೇಂದ್ರ, ಬಡವರ ಬಿಪಿಎಲ್ ಕಾರ್ಡ್ಗಳನ್ನು ಕಡಿತ ಮಾಡಲಾಗುತ್ತಿದೆ, ಬರ ಪರಿಹಾರ ನೀಡಿಲ್ಲ. ಗ್ರಾಮೀಣ ಪ್ರದೇಶಗಳ ಶಾಲೆಗಳಲ್ಲಿ ಶಿಕ್ಷಕರಿಲ್ಲ, ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳನ್ನು ‘ಪ್ರಜಾಸೇವಕ’ ಎಂದು ಹೇಗೆ ಕರೆಯಲು ಸಾಧ್ಯ ಎಂದು ಪ್ರಶ್ನಿಸಿದರು.

“ಜನರಿಗೆ ಮತ್ತು ಬಡವರಿಗೆ ಅನುಕೂಲವಾಗುವ ಯೋಜನೆಗಳನ್ನು ನೀಡಿದಾಗ ಮಾತ್ರ ಜನರು ಅವರನ್ನು ಪ್ರಜಾಸೇವಕ ಎಂದು ಕರೆಯುತ್ತಾರೆ. ಕುರಿ ಕಾಯುವ ಸಮುದಾಯದ ಮಕ್ಕಳಿಗೆ ಸಮರ್ಪಕ ಶಿಕ್ಷಣ ಸಿಗುತ್ತಿಲ್ಲ, ಉಚಿತ ಔಷಧವೂ ಸಿಗುತ್ತಿಲ್ಲ. ಬಡವರ ಪರವಾಗಿ ನೀವು ಏನು ಮಾಡಿದ್ದೀರಿ? ಜನರಿಗೆ ಇದು ಉತ್ತಮ ಸರ್ಕಾರ ಎಂಬ ಭಾವನೆ ಮೂಡಿದರೆ ಮಾತ್ರ ನಿಮ್ಮನ್ನು ಪ್ರಜಾಸೇವಕ ಎಂದು ಕರೆಯುತ್ತಾರೆ” ಎಂದರು.

“ಬಣ್ಣದ ಮಾತುಗಳನ್ನಾಡಿ, ಸೂಟು-ಬೂಟು ಧರಿಸಿ, ಹೆಲಿಕಾಪ್ಟರ್ನಲ್ಲಿ ಓಡಾಡಿದ ಮಾತ್ರಕ್ಕೆ ಯಾರೂ ಪ್ರಜಾಸೇವಕರಾಗುವುದಿಲ್ಲ. ಜನರ ಕಷ್ಟಗಳಿಗೆ ಸ್ಪಂದಿಸಿ, ಅವರ ಬದುಕಿನಲ್ಲಿ ಬದಲಾವಣೆ ತಂದಾಗ ಮಾತ್ರ ನಿಜವಾದ ಪ್ರಜಾಸೇವೆ ಸಾಧ್ಯ” ಎಂದು ವಿಜಯೇಂದ್ರ ಹೇಳಿದರು.

‘ಕ್ಲೀನ್ ಚಿಟ್ಗೂ ಮುನ್ನ 187 ಕೋಟಿ ರೂ. ವಾಪಸ್ ಕೊಡಲಿ’

ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಕ್ಲೀನ್ ಚಿಟ್ ದೊರೆತು ಮತ್ತೆ ಸಚಿವರಾಗುತ್ತಾರೆ ಎಂಬ ಸಚಿವ ಯು.ಟಿ. ಖಾದರ್ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, “ನಾಗೇಂದ್ರ ಅವರಿಗೆ ಕ್ಲೀನ್ ಚಿಟ್ ಸಿಗುವ ಮೊದಲು 187 ಕೋಟಿ ರೂ. ವಾಪಸ್ ತಂದುಕೊಡಲಿ ಎಂದು ಸವಾಲು ಹಾಕಿದರು.

ನಾವು ಸಾಕಷ್ಟು ಕ್ಲೀನ್ ಚಿಟ್ ಗಳನ್ನು ನೋಡಿದ್ದೇವೆ. ಹಿಂದಿನ ಸರ್ಕಾರಗಳಲ್ಲಿ ಎಸಿಬಿ ರಚನೆ ಮಾಡಿಕೊಂಡು ಹೇಗೆ ಕ್ಲೀನ್ ಚಿಟ್ ಪಡೆದುಕೊಂಡರು ಎಂಬುದನ್ನೂ ನೋಡಿದ್ದೇವೆ. ಆದ್ದರಿಂದ ಕ್ಲೀನ್ ಚಿಟ್ ಎಂಬ ಮಾತುಗಳನ್ನು ಜನರು ನಂಬುವ ಪರಿಸ್ಥಿತಿಯಲ್ಲಿ ಇಲ್ಲ ಎಂದು ವಿಜಯೇಂದ್ರ ಟೀಕಿಸಿದರು.

Tags

B.Y. Vijayendrapaadayatre
share
ವಾರ್ತಾಭಾರತಿ
ವಾರ್ತಾಭಾರತಿ
Next Story
X