Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೇಂದ್ರದಿಂದ ನಮ್ಮ ಪಾಲಿನ ಹಣ ಬರದಿದ್ದರೂ...

ಕೇಂದ್ರದಿಂದ ನಮ್ಮ ಪಾಲಿನ ಹಣ ಬರದಿದ್ದರೂ ರಾಜ್ಯದ ಆರ್ಥಿಕ ಸ್ಥಿತಿಯನ್ನು ಸುಸ್ಥಿರವಾಗಿ ಇಟ್ಟಿದ್ದೇವೆ : ಜಿ.ಪರಮೇಶ್ವರ್

ವಾರ್ತಾಭಾರತಿವಾರ್ತಾಭಾರತಿ22 Jun 2025 4:30 PM IST
share
ಕೇಂದ್ರದಿಂದ ನಮ್ಮ ಪಾಲಿನ ಹಣ ಬರದಿದ್ದರೂ ರಾಜ್ಯದ ಆರ್ಥಿಕ ಸ್ಥಿತಿಯನ್ನು ಸುಸ್ಥಿರವಾಗಿ ಇಟ್ಟಿದ್ದೇವೆ : ಜಿ.ಪರಮೇಶ್ವರ್

ಕೊಪ್ಪಳ : ಕೇಂದ್ರ ಸರಕಾರದಿಂದ ನಮ್ಮ ಪಾಲಿನ ಹಣ ಸರಿಯಾಗಿ ಬರದಿದ್ದರೂ ನಾವು ನಮ್ಮ ರಾಜ್ಯದ ಆರ್ಥಿಕ ಸ್ಥಿತಿಯನ್ನು ಸುಸ್ಥಿರವಾಗಿ ಇಟ್ಟಿದ್ದೇವೆ. ನಮ್ಮ ರಾಜ್ಯವು ಜಿಎಸ್‌ಟಿ ಸಂಗ್ರಹ ಮಾಡುವುದರಲ್ಲಿ ದೇಶದಲ್ಲೇ 2ನೇ ಸ್ಥಾನದಲ್ಲಿ ಇದೆ. ಜಿಡಿಪಿಯಲ್ಲಿ ಕೂಡ ಮುಂದಿದ್ದೇವೆ. ರಾಜ್ಯ ದಿವಾಳಿಯಾಗಿದ್ದರೆ ಇದೆಲ್ಲ ಆಗಲು ಸಾಧ್ಯವಾಗುತ್ತಿರಲಿಲ್ಲ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಕುಕನೂರು ತಾಲೂಕಿನ ಶಿರೂರು ಗ್ರಾಮದಲ್ಲಿ ಮಾಜಿ ಮಂತ್ರಿ ಕೆಎಚ್ ಪಾಟೀಲ್ ಅವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾವು ಬಡವರಿಗಾಗಿ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೆವು. ನಮ್ಮ ವಿರೋಧಿಗಳಿಂದ ಗ್ಯಾರಂಟಿ ಯೋಜನೆಗಳಿಗೆ ಟೀಕೆಗಳು ಬಂದವು. ಈ ರಾಜ್ಯ ದಿವಾಳಿಯಾಗಲಿದೆ ಎಂದು ಹೇಳಿದರು. ಆದರೆ ಅವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದರು ಎಂದು ಹೇಳಿದರು.

ಈಗಿನ ಕಾಲದ ರಾಜಕಾರಣದಲ್ಲಿ ಬಹುದಿನಗಳ ಕಾಲ ನೆನಪಿನಲ್ಲಿ ಉಳಿಯುವ ವ್ಯಕ್ತಿ ಕೆ.ಎಚ್. ಪಾಟೀಲ್ ಅವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ನನಗೆ ಖುಷಿ ತಂದಿದೆ ಎಂದರು.

ಕೆ.ಹೆಚ್ ಪಾಟೀಲ್ ಅವರು ಒಂದು ವೇಳೆ ಮುಖ್ಯಮಂತ್ರಿ ಆಗಿದ್ದರೆ ಇಡೀ ಕರ್ನಾಟಕದ ಅಭಿವೃದ್ಧಿಯ ಚಿತ್ರಣವೇ ಬದಲಾಗುತ್ತಿತ್ತು. ಕರ್ನಾಟಕ ಎಂಬ ಹೆಸರನ್ನು ಮೊದಲ ಬಾರಿಗೆ ವಿಧಾನ ಪರಿಷತ್ ನಲ್ಲಿ ಪ್ರಸ್ತಾಪ ಮಾಡಿದವರು ಕೆಎಚ್ ಪಾಟೀಲ್ ಅವರು. ಅವರು ಹಾಗೆ ಮಾಡಿದ್ದರಿಂದ ನಾವು ಈ ರಾಜ್ಯ ವನ್ನು ಕರ್ನಾಟಕ ಎಂದು ಕರೆಯುತಿದ್ದೇವೆ ಎಂದು ಹೇಳಿದರು.

ಸಿಎಂ ಆರ್ಥಿಕ ಸಲಹೆಗಾರ ಮತ್ತು ಶಾಸಕ ಬಸವರಾಜ್ ರಾಯರೆಡ್ಡಿ ಮಾತನಾಡಿ, ನಮ್ಮ ಸರಕಾರದಲ್ಲಿ ಹಣದ ಕೊರತೆ ಇಲ್ಲ. ಒಳ್ಳೆಯ ಆಡಳಿತವನ್ನು ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಆಡಳಿತ ನೀಡುತ್ತೇವೆ ಎಂದರು.

ಈ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಸಂಸದ ರಾಜಶೇಖರ್ ಹಿಟ್ನಾಳ, ಆರ್.ವಿ.ದೇಶಪಾಂಡೆ, ಮಾಜಿ ಸಚಿವ ಅಮರೇಗೌಡ ಬಯ್ಯಾಪುರ, ಕಾಡ ಅಧ್ಯಕ್ಷ ಹಸನ್ ಸಾಬ್ ದೋಟಿಹಾಳ, ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ದಿ, ಜಿಪಂ ಸಿಇಒ ವರ್ಣಿತ್ ನೇಗಿ ಮತ್ತಿತರರು ಉಪಸ್ಥಿತರಿದ್ದರು.

‘ರಾಜ್ಯದ ಕಾನೂನು ಸುವ್ಯವಸ್ಥೆ ಸುಸ್ಥಿತಿಯಲ್ಲಿದೆ’

ನಮ್ಮ ರಾಜ್ಯದ ಕಾನೂನು ಸುವ್ಯವಸ್ಥೆ ಸುಸ್ಥಿತಿಯಲ್ಲಿದೆ. ಕರ್ನಾಟಕದ ಪೊಲೀಸ್ ವ್ಯವಸ್ಥೆ ದೇಶದಲ್ಲೇ ಉತ್ತಮ ವ್ಯವಸ್ಥೆ ಎಂದು ಹೈದರಾಬಾದ್‌ನ ವಿವಿದ್ಯಾನಿಲಯ ತನ್ನ ವರದಿಯಲ್ಲಿ ಹೇಳಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ. ನಾವು ರಾಜ್ಯದಲ್ಲಿ ಇಲ್ಲಿಯವರೆಗೆ ಒಳ್ಳೆಯ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ರಾಜ್ಯದ ಅರ್ಥಿಕ ಭದ್ರತೆಯನ್ನು ಕಾಪಾಡಿದ್ದಾರೆ ಎಂದು ಗೃಹಸಚಿವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X