Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಪ್ರವಾದಿ ಮುಹಮ್ಮದರು ಹೇಳಿದ ಸತ್ಯವನ್ನೇ...

ಪ್ರವಾದಿ ಮುಹಮ್ಮದರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು ಹೇಳಿವೆ: ಲಾಲ್ ಹುಸೇನ್ ಕಂದ್ಗಲ್

ವಾರ್ತಾಭಾರತಿವಾರ್ತಾಭಾರತಿ2 Oct 2025 6:40 PM IST
share
ಪ್ರವಾದಿ ಮುಹಮ್ಮದರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು ಹೇಳಿವೆ: ಲಾಲ್ ಹುಸೇನ್ ಕಂದ್ಗಲ್

ಕೊಪ್ಪಳ/ ಗಂಗಾವತಿ: ’ಕುರ್‌ಆನ್ ಬರುವ ಮುಂಚೆ ಪ್ರವಾದಿ ಮುಹಮ್ಮದರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು ಹೇಳಿವೆ ಎಂದು ಕನ್ನಡ ವಾಗ್ಮಿಗಳಾದ ಲಾಲ್ ಹುಸೇನ್ ಕಂದ್ಗಲ್ ಹೇಳಿದರು.

ನಗರದಲ್ಲಿ ಜಮಾಅತೆ ಇಸ್ಲಾಂ ಹಿಂದ್ ಗಂಗಾವತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನ್ಯಾಯದ ಹರಿಕಾರ ಪೈಗಂಬರ್ ಮುಹಮ್ಮದ್ (ಸ) ಸೀರತ್ ಅಭಿಯಾನದ ವಿಚಾರಗೋಷ್ಠಿ ಹಾಗೂ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅದ್ಯಕ್ಷತೆ ವಹಿಸಿ ಮಾತನಾಡಿದರು.

ಸಮಾನತೆ, ಸೌಹಾರ್ದತೆ, ಲೋಕಕಲ್ಯಾಣ, ಅಂಗವಿಕಲರಿಗೆ ಅನುಕಂಪದ ಬಗ್ಗೆ ಹೆಚ್ಚಿನ ಆದ್ಯತೆ ನೀಡಿದ್ದ ಪ್ರವಾದಿಗಳ ಸಂದೇಶಗಳನ್ನು ನಾವೆಲ್ಲರೂ ಪಾಲನೆ ಮಾಡಬೇಕಿದೆ ಎಂದರು.

ಪ್ರವಾದಿ ಮುಹಮ್ಮದ್(ಸ) ಅವರು ಸದಾ “ಶಾಂತಿ ಮತ್ತು ಸಹೋದರತ್ವವೇ ನಿಜವಾದ ಜೀವನದ ಆಧಾರ, ಜನರಿಗೆ ಸೇವೆ ಮಾಡುವುದು ದೇವರ ಸೇವೆಗೆ ಸಮ ಎಂದರು. ಬಡವರಿಗೂ, ಅನಾಥರಿಗೂ ಸಹಾಯ ಮಾಡಲು ಉತ್ತೇಜಿಸಿದರು. ಎಲ್ಲರೊಂದಿಗೆ ಕರುಣೆ, ದಯೆ, ಸಹಾನು ಭೂತಿ ತೋರಬೇಕು. ಧರ್ಮ ಬೇರೆ ಇದ್ದರೂ ಮನುಷ್ಯತ್ವ ಎಲ್ಲರಲ್ಲೂ ಒಂದೇ ಎಂದರು. ಜೀವನದಲ್ಲಿ ಸತ್ಯ, ಪ್ರಾಮಾಣಿಕತೆ ಮತ್ತು ನ್ಯಾಯವನ್ನು ಪಾಲಿಸಬೇಕು, ನೆರೆಹೊರೆಯವರೊಂದಿಗೆ ಒಳ್ಳೆಯ ಸಂಬಂಧ ಹೊಂದುವುದು ಇಸ್ಲಾಂನಲ್ಲಿ ಮಹತ್ವದ್ದೆಂದು ಅವರು ಹೇಳಿದರು. ಎಲ್ಲಾ ಮನುಷ್ಯರೂ ದೇವರ ಮುಂದೆ ಸಮಾನರು ಎಂಬ ಸಂದೇಶವನ್ನು ಅವರು ಬೋಧಿಸಿದರು ಎಂದು ಹೇಳಿದರು.

ಹಿರಿಯ ಸಾಹಿತಿ ಸಿ.ಎಚ್.ನಾರಿನಾಳರವರು ಮಾತನಾಡಿ, ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ ಕೂಡಲ-ಸಂಗಮದೇವಾ, ನಿಮ್ಮ ಮನೆಯ ಮಗನೆಂದೆನಿಸಯ್ಯಾ, ಎಂದು ಬಸವಣ್ಣನವರು 12ನೇ ಶತಮಾನದಲ್ಲಿಯೇ ಸಮಾನತೆಯ ಸಂದೇಶವನ್ನು ತಮ್ಮ ವಚನಗಳಲ್ಲಿ ಸಾರಿದ್ದರೆ. ಇಂತಹ ಸರ್ವಧರ್ಮದ ಸಹೋದರತ್ವದ ಸೌಹಾರ್ದತೆಯ ಕಾರ್ಯಕ್ರಮಗಳು ಸದಾ ನಡಿತಾ ಇರಲಿ ಅದಕ್ಕೆ ನಮ್ಮ ಬೆಂಬಲ ಸದಾ ಇರುತ್ತೆ. ಈ ಹಿಂದೆ ಭಾವೈಕ್ಯನಿಧಿ ಎಂದು ಹೆಸರುವಾಸಿಯಾಗಿದ್ದ ಎಂ.ಎಸ್. ಅನ್ಸಾರಿಯವರು ಸತತ 11 ವರ್ಷಗಳ ಕಾಲ ನಗರದಲ್ಲಿ ಈದ್ ಮಿಲಾಫ್ ಕಾರ್ಯಕ್ರಮವನ್ನು ಆಯೋಜಿಸಿ ಸರ್ವ ಜನಾಂಗದಲ್ಲಿಯೂ ಸೌಹಾರ್ದತೆಯ ವೃದ್ಧಿಸುವ ಮಹತ್ಕಾರ್ಯವನ್ನು ಮಾಡಿದ್ದಾರೆ. ಅದನ್ನು ಮುಂದುವರೆಸುವ ಕೆಲಸ ನಮ್ಮೆಲ್ಲರಿಂದಲೂ ಆಗಬೇಕಿದೆ ಎಂದರು.

ಈ ಸಂದರ್ಭದಲ್ಲಿ ಉಮಾ ಶಿಕ್ಷಣ ಸಂಸ್ಥೆ ಅಧ್ಯಕ್ಷೆ ಶಾಹಿನ್ ಕೌಸರ್, ವಕೀಲರ ಸಂಘದ ಅಧ್ಯಕ್ಷ ಶರಣಪ್ಪ ನಾಯಕ, ಬಂಜಾರ ಸಮಾಜ ಅಧ್ಯಕ್ಷ ಲಕ್ಷ್ಮಣ್ಣ ನಾಯಕ್, ಸುರೇಶ್ ಸಿಂಗನಾಳ್, ದಿಲೀಪ್ ಕುಮಾರ್, ಕೆ ಬಸಮಾಜ ರಾಷ್ಟ್ರೀಯ ಬಸವದಳ, ಡಾ. ಅಮರೇಶ್ ಅರಳಿ, ಡಾ.ಸುನಿಲ್ ಅರಳಿ, ಡಾ.ಜಿ ಎಂ ವಿಜಯಲಕ್ಷ್ಮಿ, ಡಾ. ಮುಲ್ತಾಜ್ ಬೇಗಂ, ಶೇಕ್ ಆಫೀಜುಲ್ಲಾ ಶಂಶುಲ್ಲುದಾ ಅನ್ಸಾರಿ, ಜನಾಬ್ ಹುಸೇನ್ ಸಾಬ್ ತುಂಗಭದ್ರಾ, ಜನಾಬ್ ಮುನೀರ್ ಸಾಬ್, ಜಮಾತೆ ಇಸ್ಲಾಮಿ ಮಾಜಿ ಜಿಲ್ಲಾಧ್ಯಕ್ಷರಾದಂತಹ ದಿಲಾವರ್‌ಬರ್ ಎನ್, ಅಬ್ದುಲ್ ಖುದ್ದೂಸ್, ಸಾಲೇಹ ಬೇಗಂ ಹಾಗೂ ಜಮಾತಿನ ಕಾರ್ಯಕರ್ತರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X