ಕನಕಗಿರಿ: ಎತ್ತಿನಬಂಡಿಗೆ ಬೈಕ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

ಕನಕಗಿರಿ: ಬೈಕೊಂದು ಚಾಲಕನ ನಿಯಂತ್ರಣ ತಪ್ಪಿ ಎತ್ತಿನಬಂಡಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನವಲಿ ಗ್ರಾಮದ ಹೊರವಲಯದಲ್ಲಿ ಶನಿವಾ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ.
ಮೃತರನ್ನು ಬಂಕಾಪುರ ನಿವಾಸಿ ದೇವರಾಜ್(26) ಎಂದು ಗುರುತಿಸಲಾಗಿದೆ.
ದೇವರಾಜ್ ಅವರು ಕನಕಗಿರಿ ಮೂಲಕ ಕಾರಟಗಿ ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ದೇವರಾಜ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಎರಡು ತುಂಡಾಗಿದೆ.
ಈ ಬಗ್ಗೆ ಸ್ಥಳೀಯ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





