Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal | ಭೋವಿ ಸಮುದಾಯದ ಅಭಿವೃದ್ಧಿಗೆ...

Koppal | ಭೋವಿ ಸಮುದಾಯದ ಅಭಿವೃದ್ಧಿಗೆ 75.60 ಕೋಟಿ ರೂ. ಅನುದಾನ : ರಾಮಪ್ಪ ಎಂ.

ವಾರ್ತಾಭಾರತಿವಾರ್ತಾಭಾರತಿ9 Sept 2026 6:52 PM IST
share
Koppal | ಭೋವಿ ಸಮುದಾಯದ ಅಭಿವೃದ್ಧಿಗೆ 75.60 ಕೋಟಿ ರೂ. ಅನುದಾನ : ರಾಮಪ್ಪ ಎಂ.

ಕೊಪ್ಪಳ: ಭೋವಿ ಜನಾಂಗದ ಸರ್ವಾಂಗೀಣ ಆರ್ಥಿಕ ಹಾಗೂ ಸಾಮಾಜಿಕ ಪ್ರಗತಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ವಿವಿಧ ಕಲ್ಯಾಣ ಯೋಜನೆಗಳನ್ನು ಸಮುದಾಯದ ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪಿಸಲಾಗುತ್ತಿದೆ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ರಾಮಪ್ಪ ಎಂ. ಹೇಳಿದರು.

ಜಿಲ್ಲಾ ಪಂಚಾಯತ್‌ನ ಜೆ.ಎಚ್. ಪಾಟೇಲ್ ಸಭಾಂಗಣದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2026-27ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಿಗಾಗಿ ರಾಜ್ಯ ಸರ್ಕಾರ ಒಟ್ಟು 75.60 ಕೋಟಿ ರೂ. ಅನುದಾನ ನಿಗದಿಪಡಿಸಿದ್ದು, ಈ ಪೈಕಿ ಈಗಾಗಲೇ 18.90 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಭೋವಿ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಪರಿಶಿಷ್ಟ ಜಾತಿ ವ್ಯಾಪ್ತಿಗೆ ಬರುವ ಭೋವಿ, ಒಡ್, ಒಡ್ಡೆ, ಒಡ್ಡರ್, ವಡ್ಕರ್, ವಡ್ಡರ, ಕಲ್ಲು ಒಡ್ಡರ, ಭೋವಿ (ನಾನ್ ಬೆಸ್ತ) ಹಾಗೂ ಮಣ್ಣುವಡ್ಡರ ಸೇರಿದಂತೆ ಒಟ್ಟು ಒಂಬತ್ತು ಉಪಜಾತಿಗಳನ್ನು ವಿವಿಧ ಯೋಜನೆಗಳ ಫಲಾನುಭವಿಗಳಾಗಿ ಗುರುತಿಸಲಾಗಿದೆ ಎಂದು ಹೇಳಿದರು.

ಕೊಪ್ಪಳ ಜಿಲ್ಲೆಯಲ್ಲಿ 2022-23ರಿಂದ 2025-26ನೇ ಸಾಲಿನವರೆಗೆ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ 124 ಫಲಾನುಭವಿಗಳಿಗೆ 124 ಲಕ್ಷ ರೂ. ವಿತರಿಸಲಾಗಿದೆ. ಉದ್ಯಮಶೀಲತಾ ಯೋಜನೆಯಡಿ ಬ್ಯಾಂಕ್ ಸಹಯೋಗದೊಂದಿಗೆ 1 ಲಕ್ಷ ರೂ. ಸಹಾಯಧನದಡಿ 36 ಫಲಾನುಭವಿಗಳಿಗೆ 36 ಲಕ್ಷ ರೂ., 2 ಲಕ್ಷ ರೂ. ಸಹಾಯಧನದಡಿ 31 ಫಲಾನುಭವಿಗಳಿಗೆ 62 ಲಕ್ಷ ರೂ. ಹಾಗೂ 3.50 ಲಕ್ಷ ರೂ. ಸಹಾಯಧನದಡಿ 9 ಫಲಾನುಭವಿಗಳಿಗೆ 31.50 ಲಕ್ಷ ರೂ. ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನ ಖರೀದಿಗೆ ತಲಾ 4 ಲಕ್ಷ ರೂ. ಸಹಾಯಧನದಂತೆ 35 ಫಲಾನುಭವಿಗಳಿಗೆ ಒಟ್ಟು 140 ಲಕ್ಷ ರೂ. ನೀಡಲಾಗಿದೆ. ಮೈಕ್ರೋಕ್ರೆಡಿಟ್ ಕಿರುಸಾಲ ಯೋಜನೆಯಡಿ 18 ಸಂಘಗಳ 180 ಫಲಾನುಭವಿಗಳಿಗೆ 60 ಲಕ್ಷ ರೂ. ಸಾಲ ಸೌಲಭ್ಯ ಕಲ್ಪಿಸಲಾಗಿದೆ ಎಂದರು.

ಗಂಗಾ ಕಲ್ಯಾಣ ಯೋಜನೆಯಡಿ ಜಿಲ್ಲೆಯಲ್ಲಿ 59 ಕೊಳವೆಬಾವಿಗಳನ್ನು ಕೊರೆಸಲಾಗಿದ್ದು, ಗುತ್ತಿಗೆದಾರ ಕಂಪನಿಗೆ 20.65 ಲಕ್ಷ ರೂ. ಪಾವತಿಸಲಾಗಿದೆ. ಭೂ ಒಡೆತನ ಯೋಜನೆಯಡಿ 34 ಫಲಾನುಭವಿಗಳಿಗೆ ಸುಮಾರು 4.80 ಕೋಟಿ ರೂ. ವೆಚ್ಚದಲ್ಲಿ 38.25 ಎಕರೆ ಖುಷ್ಕಿ ಹಾಗೂ 9 ಎಕರೆ ತರಿ ಭೂಮಿಯನ್ನು ಹಂಚಿಕೆ ಮಾಡಲಾಗಿದೆ. 2023-24ನೇ ಸಾಲಿನಿಂದ ಈ ಯೋಜನೆಯ ಘಟಕ ವೆಚ್ಚವನ್ನು 20 ಲಕ್ಷ ರೂ. ಗೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಶಿವಸ್ವಾಮಿ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಎನ್. ಪುಷ್ಪಲತಾ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Bhovi communityKoppal
share
ವಾರ್ತಾಭಾರತಿ
ವಾರ್ತಾಭಾರತಿ
Next Story
X