Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ| ಕೃಷಿಗೆ ನಿಗದಿತ ವಿದ್ಯುತ್...

ಕೊಪ್ಪಳ| ಕೃಷಿಗೆ ನಿಗದಿತ ವಿದ್ಯುತ್ ನೀಡುವಂತೆ ಆಗ್ರಹಿಸಿ ರೈತರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ14 Jan 2026 7:26 PM IST
share
ಕೊಪ್ಪಳ| ಕೃಷಿಗೆ ನಿಗದಿತ ವಿದ್ಯುತ್ ನೀಡುವಂತೆ ಆಗ್ರಹಿಸಿ ರೈತರಿಂದ ಧರಣಿ

ಕುಷ್ಟಗಿ: ಕೃಷಿ ಪಂಪ್‌ಸೆಟ್‌ಗಳಿಗೆ ದಿನಕ್ಕೆ ಕನಿಷ್ಠ ಏಳು ಗಂಟೆ ವಿದ್ಯುತ್ ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ಜನದರ್ಶನ ವೇದಿಕೆಯ ರಾಜ್ಯಾಧ್ಯಕ್ಷ ದೇವಪ್ಪ ಮೆಣಸಗಿ ಅವರ ನೇತೃತ್ವದಲ್ಲಿ ರೈತರು ಸಮೀಪದ ಹನಮನಾಳ ಜೆಸ್ಕಾಂ ಕಚೇರಿ ಮುಂದೆ ಧರಣಿ ನಡೆಸಿದರು.

ಹನಮನಾಳ ಹೋಬಳಿ ವ್ಯಾಪ್ತಿಗೆ ಒಳಪಡುವ ವಾರಿಕಲ್, ಯರಗೇರ, ಗೊರೆಬಿಹಾಳ, ಕುಂಬಾಳವತಿ, ನರಸಾಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಸುಮಾರು 28 ವಿದ್ಯುತ್ ಪರಿವರ್ತಕಗಳಿಗೆ ಸಂಬಂಧಿಸಿದ ರೈತರು ಮತ್ತು ಗ್ರಾಮಸ್ಥರಿಗೆ ನಿಗದಿತ ವೇಳಾಪಟ್ಟಿ ಇಲ್ಲದೆ ಮನಬಂದಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಮಧ್ಯರಾತ್ರಿ 2 ಗಂಟೆಯಿಂದ ಬೆಳಗ್ಗೆ 9 ಗಂಟೆಯವರೆಗೆ ಮಾತ್ರ ವಿದ್ಯುತ್ ನೀಡಲಾಗುತ್ತಿದ್ದು, ರೈತರು ನಿದ್ರೆಯನ್ನು ತ್ಯಜಿಸಿ ಹೊಲಗಳಲ್ಲಿ ಕಾದು ನೀರಾವರಿ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅಷ್ಟಾದರೂ ರಾತ್ರಿಯ ಸಮಯದಲ್ಲಿಯೂ ಸಮರ್ಪಕ ವಿದ್ಯುತ್ ದೊರೆಯುತ್ತಿಲ್ಲ. ಆದ್ದರಿಂದ ರಾತ್ರಿ ಬದಲು ಹಗಲು ವೇಳೆಯಲ್ಲಿ ವಿದ್ಯುತ್ ಸರಬರಾಜು ಮಾಡಬೇಕೆಂದು ಅವರು ಒತ್ತಾಯಿಸಿದರು.

ಸರಕಾರದ ಮಾರ್ಗಸೂಚಿಯಂತೆ ಕೃಷಿಗೆ ಏಳು ಗಂಟೆ ವಿದ್ಯುತ್ ನೀಡಲೇಬೇಕು ಎಂದು ಪಟ್ಟು ಹಿಡಿದ ರೈತರು, ಬೇಸಿಗೆ ಆರಂಭಕ್ಕೂ ಮುನ್ನವೇ ಅಕ್ರಮ ಲೋಡ್ ಶೆಡ್ಡಿಂಗ್ ಜಾರಿಯಲ್ಲಿರುವುದು ಆತಂಕಕಾರಿ ಎಂದು ಹೇಳಿದರು. ವಿದ್ಯುತ್ ಯಾವ ಸಮಯದಲ್ಲಿ ಬರುತ್ತದೆ ಎಂಬ ಸ್ಪಷ್ಟತೆ ಇಲ್ಲದ ಕಾರಣ ಜಮೀನಿಗೆ ನೀರು ಪೂರೈಸಲು ತೀವ್ರ ತೊಂದರೆ ಎದುರಾಗುತ್ತಿದೆ. ಈ ಬಗ್ಗೆ ಮಾಹಿತಿ ಪಡೆಯಲು ದೂರವಾಣಿ ಮೂಲಕ ಸಂಪರ್ಕಿಸಿದರೆ ಸಿಬ್ಬಂದಿಯಿಂದ ಸಮರ್ಪಕ ಪ್ರತಿಕ್ರಿಯೆ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿದ್ಯುತ್ ಪರಿವರ್ತಕ ಬದಲಾವಣೆ ಹಾಗೂ ಮಾರ್ಗ ದುರಸ್ತಿ ಸಂಬಂಧ ಸಕಾಲ ಯೋಜನೆಯಡಿ ನಿಗದಿತ ಅವಧಿ ಇದ್ದರೂ ಜೆಸ್ಕಾಂ ಅದನ್ನು ಪಾಲಿಸುತ್ತಿಲ್ಲ. 72 ಗಂಟೆಗಳೊಳಗೆ ಪರಿವರ್ತಕ ಬದಲಾವಣೆ ಮಾಡಬೇಕೆಂಬ ನಿಯಮವಿದ್ದರೂ ತಿಂಗಳುವರೆಗೂ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರ ಪರಿಣಾಮವಾಗಿ ಬೆಳೆಗಳಿಗೆ ನೀರು ಒದಗಿಸಲಾಗದೆ ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ದೇವಪ್ಪ ಮೆಣಸಗಿ ಆಕ್ರೋಶ ವ್ಯಕ್ತಪಡಿಸಿದರು. ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡದಿದ್ದರೆ ತೀವ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಅಶೋಕ ಉಪ್ಪಾರ, ಶರಣಪ್ಪ ಉಪ್ಪಾರ, ಶ್ರೀಕಾಂತ್, ಹನುಮಪ್ಪ ಪೂಜಾರ, ಶೇಖಪ್ಪ ಗುಡಿ, ಹೇಮಂತ್ ನರಿ, ಕನಕಪ್ಪ ಲಕ್ಕಲಕಟ್ಟಿ, ಹನುಮಂತ, ಅಂದಪ್ಪ, ಬಸವರಾಜ, ಈರಪ್ಪ, ಫಕ್ಕೀರಪ್ಪ, ಯಂಕಪ್ಪ, ರಾಮಣ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

KoppalFarmers
share
ವಾರ್ತಾಭಾರತಿ
ವಾರ್ತಾಭಾರತಿ
Next Story
X