Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Koppal : ಗ್ಯಾಸ್ ಸೋರಿಕೆಯಿಂದ...

Koppal : ಗ್ಯಾಸ್ ಸೋರಿಕೆಯಿಂದ ವಿದ್ಯಾರ್ಥಿ ನಿಲಯದ ಅಡುಗೆ ಕೋಣೆಯಲ್ಲಿ ಬೆಂಕಿ; ತಪ್ಪಿದ ಭಾರೀ ಅನಾಹುತ

150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾರು

ವಾರ್ತಾಭಾರತಿವಾರ್ತಾಭಾರತಿ27 Aug 2026 10:28 AM IST
share
Koppal : ಗ್ಯಾಸ್ ಸೋರಿಕೆಯಿಂದ ವಿದ್ಯಾರ್ಥಿ ನಿಲಯದ ಅಡುಗೆ ಕೋಣೆಯಲ್ಲಿ ಬೆಂಕಿ; ತಪ್ಪಿದ ಭಾರೀ ಅನಾಹುತ

ಯಲಬುರ್ಗಾ: ಪಟ್ಟಣದ ಕುದ್ರಿಕೋಟಗಿ ರಸ್ತೆಯ ಆಶ್ರಯ ಕಾಲೋನಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಅಡುಗೆ ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಘಟನೆ ಸೋಮವಾರ ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅದೃಷ್ಟವಶಾತ್ ವಸತಿ ನಿಲಯದಲ್ಲಿದ್ದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಅಡುಗೆ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಕಿ ಅವಘಡದಿಂದ ಅಡುಗೆ ಕೋಣೆಯಲ್ಲಿದ್ದ ಕೆಲ ವಸ್ತುಗಳು ಸುಟ್ಟುಹೋಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ವಸತಿ ನಿಲಯದಲ್ಲಿ ಗ್ಯಾಸ್ ಸೋರಿಕೆ ಕಂಡುಬಂದಿದ್ದರೂ ತಕ್ಷಣ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ವಿದ್ಯಾರ್ಥಿಗಳ ಪಾಲಕರು ಆರೋಪಿಸಿದ್ದಾರೆ. ವಸತಿ ನಿಲಯಗಳ ನಿರ್ವಹಣೆಗೆ ಸರ್ಕಾರ ಪ್ರತಿವರ್ಷ ಲಕ್ಷಾಂತರ ರೂಪಾಯಿ ಅನುದಾನ ನೀಡುತ್ತಿದ್ದರೂ, ಸುರಕ್ಷತೆ ಹಾಗೂ ಮೂಲಸೌಕರ್ಯಗಳ ಸಮರ್ಪಕ ನಿರ್ವಹಣೆ ನಡೆಯುತ್ತಿಲ್ಲ ಎಂದು ಅವರು ದೂರಿದ್ದಾರೆ.

ವಸತಿ ನಿಲಯದ ನಿಲಯ ಪಾಲಕ ಕರಿಯಪ್ಪ ಅವರನ್ನು ಬೇರೆಡೆ ವರ್ಗಾವಣೆ ಮಾಡಬೇಕು ಎಂದು ಪಾಲಕರು ಆಗ್ರಹಿಸಿದ್ದಾರೆ. ಅಲ್ಲದೆ, ಯಲಬುರ್ಗಾ ತಾಲೂಕಿನ ವಿವಿಧ ವಸತಿ ನಿಲಯಗಳಿಗೆ ಕ್ಷೇತ್ರದ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ಅಗತ್ಯ ಮೂಲಸೌಕರ್ಯ ಹಾಗೂ ಸುರಕ್ಷತಾ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಎಐಡಿಎಸ್ಓ ವಿದ್ಯಾರ್ಥಿ ಸಂಘಟನೆ ಮುಖಂಡ ಗಂಗರಾಜ್ ಅಳ್ಳೊಳ್ಳಿ ಒತ್ತಾಯಿಸಿದ್ದಾರೆ.

“ಅಡುಗೆ ಮಾಡುತ್ತಿದ್ದ ವೇಳೆ ರೆಗ್ಯುಲೇಟರ್ ಮೂಲಕ ಗ್ಯಾಸ್ ಸೋರಿಕೆಯಾಗುತ್ತಿರುವುದು ಅಡುಗೆ ಸಿಬ್ಬಂದಿಯ ಗಮನಕ್ಕೆ ಬಂದಿದೆ. ತಕ್ಷಣ ಈ ಕುರಿತು ನಿಲಯ ಪಾಲಕರಿಗೆ ಮಾಹಿತಿ ನೀಡಲಾಗಿತ್ತು. ರೆಗ್ಯುಲೇಟರ್ ದೋಷಪೂರಿತವಾಗಿರುವುದು ತಿಳಿದು, ಹೊಸ ರೆಗ್ಯುಲೇಟರ್ ತಂದು ಅಳವಡಿಸಲು ಸಿದ್ಧತೆ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಸಿಲಿಂಡರ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.”

-ಶಶಿಧರ್ ಸಕ್ರಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ಯಲಬುರ್ಗಾ

Tags

KoppalFire breaks outstudenthostelkitchengas leak
share
ವಾರ್ತಾಭಾರತಿ
ವಾರ್ತಾಭಾರತಿ
Next Story
X