Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ: ನೀಟ್‌ನಲ್ಲಿ ಬಡ ವಿದ್ಯಾರ್ಥಿಯ...

ಕೊಪ್ಪಳ: ನೀಟ್‌ನಲ್ಲಿ ಬಡ ವಿದ್ಯಾರ್ಥಿಯ ಸಾಧನೆ

ವಾರ್ತಾಭಾರತಿವಾರ್ತಾಭಾರತಿ24 July 2026 12:36 PM IST
share
ಕೊಪ್ಪಳ: ನೀಟ್‌ನಲ್ಲಿ ಬಡ ವಿದ್ಯಾರ್ಥಿಯ ಸಾಧನೆ

ಕೊಪ್ಪಳ : ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ನಲ್ಲಿ ಕೊಪ್ಪಳ ತಾಲೂಕಿನ ಸಣ್ಣ ಹಳ್ಳಿ ಹನುಮನಳ್ಳಿಯ ಪ್ರತಿಭಾವಂತ ವಿದ್ಯಾರ್ಥಿ ಪುಟ್ಟರಾಜು ಅವರು 720 ಅಂಕಗಳಿಗೆ 511 ಅಂಕಗಳನ್ನು ಗಳಿಸುವ ಮೂಲಕ ಇಡೀ ದೇಶಕ್ಕೆ ಎಸ್‌ಟಿ ವಿಭಾಗದಲ್ಲಿ 694 ರ್ಯಾಂಕ್ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಗ್ರಾಮೀಣ ಹಿನ್ನೆಲೆಯಿಂದ ಬಂದಿರುವ ಪುಟ್ಟರಾಜು ಅವರ ಈ ಸಾಧನೆ ಇಡೀ ಗ್ರಾಮಕ್ಕೆ ಮಾತ್ರವಲ್ಲದೆ ಕೊಪ್ಪಳ ಜಿಲ್ಲೆಯ ಶಿಕ್ಷಣ ಕ್ಷೇತ್ರಕ್ಕೂ ಹೆಮ್ಮೆಯ ವಿಷಯವಾಗಿದೆ. ವೈದ್ಯರಾಗುವ ಕನಸನ್ನು ನನಸಾಗಿಸಿಕೊಳ್ಳುವ ದೃಢ ಸಂಕಲ್ಪದೊಂದಿಗೆ ಶಿಸ್ತು, ನಿರಂತರ ಅಭ್ಯಾಸ ಹಾಗೂ ಕಠಿಣ ಪರಿಶ್ರಮದಿಂದ ಅವರು ಈ ಯಶಸ್ಸು ಸಾಧಿಸಿದ್ದಾರೆ.

ನೀಟ್ ಪರೀಕ್ಷೆಯನ್ನು ದೇಶದ ಅತ್ಯಂತ ಕಠಿಣ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಇಂತಹ ಪರೀಕ್ಷೆಯಲ್ಲಿ 579 ಅಂಕಗಳನ್ನು ಗಳಿಸಿರುವುದು ಪುಟ್ಟರಾಜು ಅವರ ಪ್ರತಿಭೆ, ಪರಿಶ್ರಮ ಹಾಗೂ ಆತ್ಮವಿಶ್ವಾಸಕ್ಕೆ ಸಾಕ್ಷಿಯಾಗಿದೆ. ಈ ಸಾಧನೆಯಿಂದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆಯುವ ಸಾಧ್ಯತೆ ಹೆಚ್ಚಿದ್ದು, ಅವರ ಭವಿಷ್ಯದ ವೈದ್ಯಕೀಯ ಶಿಕ್ಷಣಕ್ಕೆ ಭದ್ರ ಅಡಿಪಾಯವಾಗಿದೆ.

ತಮ್ಮ ಕುಟುಂಬದೊಂದಿಗೆ ಹನುಮನಲ್ಲಿಯ ತೋಟದಮನೆಯಲ್ಲಿ ವಾಸವಿರುವ ಇವರು, ಮುಖ್ಯವಾಗಿ ಕೃಷಿಯನ್ನೇ ತಮ್ಮ ಕಸಬಾಗಿಸಿಕೊಂಡಿದ್ದಾರೆ. ತಮ್ಮ ಕುಟುಂಬದ ಪರಿಸ್ಥಿತಿಯನ್ನು ಅರಿತು ಕಠಿಣ ಪರಿಶ್ರಮ ದಿಂದ ಓದಿ ಈ ಸಾಧನೆ ಮಾಡಿದ್ದಾರೆ.

ಪುಟ್ಟರಾಜು ಬರೇ ಓದುವುದಷ್ಟೇ ಅಲ್ಲದೆ ಬಿಡುವಿನ ಸಮಯದಲ್ಲಿ ಹೊಲದಲ್ಲಿ ಕೆಲಸ ಮಾಡುವುದು, ಕುರಿಗಳಿಗೆ ಮೇವು ಹಾಕುವುದು, ಕಸ ಗುಡಿಸುವುದು, ಹಾಲು ಕರಿಯುವಂತಹ ಕೆಲಸ ಮಾಡುತ್ತಲೇ ಈ ಸಾಧನೆ ಮಾಡಿದ್ದಾರೆ.

ಈ ಸಾಧನೆಯ ಹಿಂದೆ ಪುಟ್ಟರಾಜು ಅವರ ಕುಟುಂಬದ ಸದಸ್ಯರು, ಶಿಕ್ಷಕರು ಹಾಗೂ ಮಾರ್ಗದರ್ಶಕರ ಪ್ರೋತ್ಸಾಹ ಮತ್ತು ಮಾರ್ಗದರ್ಶನ ಪ್ರಮುಖ ಪಾತ್ರ ವಹಿಸಿದೆ.

ನನ್ನ ತಮ್ಮ ಇಷ್ಟು ಅಂಕ ತೆಗೆದುಕೊಂಡಿದ್ದು ನನಗೆ ಬಹಳ ಸಂತೋಷ ತಂದು ಕೊಟ್ಟಿದೆ, ರಜೆಯಲ್ಲಿ ಮನೆಗೆ ಬಂದಾಗ ಹೊಲಕ್ಕೆ ಬಂದು ಎಲ್ಲಾ ಕೆಲಸ ಮಾಡುತ್ತಾನೆ. ಕುರಿ ಕೂಡ ಕಾಯುತ್ತಾನೆ. ವೈದ್ಯನಗುವ ತನ್ನ ಕನಸು ಈಡೇರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ.

-ಮೇಘರಾಜ ಹನುಮನಹಳ್ಳಿ

ಪುಟ್ಟರಾಜನ ಅಣ್ಣಾ

ನನ್ನ ಮಗ ಪರೀಕ್ಷೆಯಲ್ಲಿ ಪಾಸ್ ಆಗಿದ್ದು ನನಗೆ ಸಂತೋಷ ಆಗಿದೆ. ನನ್ನ ಮಗ ಬರೀ ಓದೋದು ಅಷ್ಟೇ ಅಲ್ಲ, ನಮ್ಮ ಜೊತೆ ಕೆಲಸ ಕೂಡ ಮಾಡುತಿದ್ದ. ಕಷ್ಟಕ್ಕೆ ಫಲ ಸಿಕ್ಕಿದೆ, ನನ್ನ ಮಗ ಹೊಸ ಬಟ್ಟೆ ಕೇಳಲಿಲ್ಲ, ಅವನ ಅಣ್ಣ ಉಟ್ಟು ಬಿಟ್ಟ ಬಟ್ಟೆ ಹಾಕಿಕೊಂಡು ಓದಿದ್ದಾನೆ. ನನಗೆ ಬಹಳ ಸಂತೋಷ ಅನಿಸುತ್ತಿದೆ.

-ಸುವರ್ಣ ಮಹಾಬಲೇಶ

ಪುಟ್ಟರಾಜನ ತಾಯಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X