Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಕಾರ್ಖಾನೆ ವಿರೋಧಿ ಹೋರಾಟಕ್ಕೆ...

ಕೊಪ್ಪಳ | ಕಾರ್ಖಾನೆ ವಿರೋಧಿ ಹೋರಾಟಕ್ಕೆ 75 ದಿನ: ಧರಣಿ ನಿರತರಿಗೆ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಬೆಂಬಲ

ವಾರ್ತಾಭಾರತಿವಾರ್ತಾಭಾರತಿ13 Jan 2026 8:56 PM IST
share
ಕೊಪ್ಪಳ | ಕಾರ್ಖಾನೆ ವಿರೋಧಿ ಹೋರಾಟಕ್ಕೆ 75 ದಿನ: ಧರಣಿ ನಿರತರಿಗೆ ಸಾಹಿತಿ ಪ್ರೊ.ಕೆ.ಎಸ್.ಭಗವಾನ್ ಬೆಂಬಲ

ಕೊಪ್ಪಳ : ನಾನು ಹಳ್ಳಿಯ ರೈತನಾಗಿ ಬೆಳೆದವನು. ರೈತರು ಬೂದಿ ಮತ್ತು ಹೊಗೆಯ ನಡುವೆ ಬದುಕುವುದು ಅಸಾಧ್ಯದ ಮಾತು. ಈ ಗಂಭೀರ ಸಮಸ್ಯೆಯನ್ನು ಇಡೀ ರಾಜ್ಯಕ್ಕೆ ತಿಳಿಸುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಹಿರಿಯ ಸಾಹಿತಿ ಪ್ರೊ. ಕೆ.ಎಸ್. ಭಗವಾನ್ ಕರೆ ನೀಡಿದರು.

ನಗರಸಭೆಯ ಎದುರು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿರುವ ಪರಿಸರ ಮಾರಕ ಕಾರ್ಖಾನೆಗಳ ವಿರೋಧಿ ಅನಿರ್ದಿಷ್ಟಾವಧಿ ಧರಣಿಯ 75ನೇ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಧರಣಿಯಲ್ಲಿ ಭಾಗವಹಿಸಿದ ನಂತರ ಭಗವಾನ್ ಅವರು ಗಿಣಿಗೇರಿ, ಅಲ್ಲಾನಗರ, ಹಿರೇಬಗನಾಳ ಹಾಗೂ ಹಾಲವರ್ತಿ ಗ್ರಾಮಗಳಿಗೆ ಖುದ್ದಾಗಿ ಭೇಟಿ ನೀಡಿ ರೈತರು, ವಿದ್ಯಾರ್ಥಿಗಳು ಮತ್ತು ಗೃಹಿಣಿಯರೊಂದಿಗೆ ಸಂವಾದ ನಡೆಸಿದರು.

ಇಲ್ಲಿನ ಪರಿಸ್ಥಿತಿ ತೀರಾ ಹದಗೆಟ್ಟಿದೆ. ಈಗಿರುವ ಕಾರ್ಖಾನೆಗಳ ಕಾಟವೇ ತಡೆಯಲಾಗುತ್ತಿಲ್ಲ, ಇನ್ನು ಹೊಸ ಕಾರ್ಖಾನೆಗಳು ಬಂದರೆ ಜನರ ಗತಿಯೇನು? ಮುಖ್ಯಮಂತ್ರಿಗಳು ಜನಪರವಾಗಿದ್ದು, ಈ ಭಾಗಕ್ಕೆ ಭೇಟಿ ನೀಡುವಂತೆ ಹಾಗೂ ವಿಧಾನಸೌಧದಲ್ಲಿ ಈ ಧ್ವನಿ ಕೇಳುವಂತೆ ನಾನು ಅವರ ಮೇಲೆ ಒತ್ತಡ ಹೇರುತ್ತೇನೆ ಎಂದು ಭರವಸೆ ನೀಡಿದರು.

ಕೃಷಿ ಬೆಲೆ ಆಯೋಗದ ಸದಸ್ಯ ಡಿ.ಎಚ್.ಪೂಜಾರ ಮಾತನಾಡಿ, ಮೂರು ತಿಂಗಳಿಂದ ಹೋರಾಟ ನಡೆಯುತ್ತಿದ್ದರೂ ಸ್ಥಳೀಯ ಶಾಸಕರು ಸೌಜನ್ಯಕ್ಕಾದರೂ ಭೇಟಿ ನೀಡದಿರುವುದು ಪಲಾಯನವಾದವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ವಕೀಲ ರಾಜು ಬಾಕಳೆ ಮಾತನಾಡಿ, ಕಾನೂನು ಹೋರಾಟದಲ್ಲಿ ಹಿನ್ನಡೆಯಾದರೂ, ಜನಸಂಗ್ರಾಮದ ಮೂಲಕ ಈ ಹೋರಾಟ ಗೆಲ್ಲುವ ವಿಶ್ವಾಸವಿದೆ ಎಂದರು.

ರೈತ ಮಹಿಳೆ ಗಿರಿಯಮ್ಮ ಹಾಗೂ ಮಾರ್ಕಂಡಯ್ಯ ಹಿರೇಮಠ ಅವರು ಮಾತನಾಡಿ, ವಿಷಪೂರಿತ ಗಾಳಿ ಮತ್ತು ನೀರಿನಿಂದಾಗಿ ಮಕ್ಕಳು ಅಸ್ತಮಾ ಮತ್ತು ಕ್ಯಾನ್ಸರ್‌ನಂತಹ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಮನೆ-ಹೊಲ ಮಾರಿ ಊರು ಬಿಡುವ ಸ್ಥಿತಿ ಬಂದಿದೆ ಎಂದು ಭಾವುಕರಾಗಿ ನುಡಿದರು.

ದದೇಗಲ್ ಸದ್ಗುರು ಸಿದ್ಧಾರೂಢ ಮಠದ ಶ್ರೀ ಆತ್ಮಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಪರಿಸರ ಉಳಿವಿಗೆ ಎಲ್ಲರೂ ಸಂಘಟಿತರಾಗಬೇಕು ಎಂದರು.

ಧರಣಿಯಲ್ಲಿ ಅಲ್ಲಮಪ್ರಭು ಬೆಟ್ಟದೂರು, ಮಲ್ಲಿಕಾರ್ಜುನ ಗೋನಾಳ, ಮಂಜುನಾಥ ಜಿ. ಗೊಂಡಬಾಳ, ಪ್ರಕಾಶಕ ಡಿ.ಎಂ. ಬಡಿಗೇg, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು, ಹಿರಿಯ ಸಾಹಿತಿಗಳಾದ ಎಚ್.ಎಸ್.ಪಾಟೀಲ್, ಎ. ಎಂ.ಮದರಿ, ಕೃಷಿ ಬೆಲೆ ಆಯೋಗದ ಸದಸ್ಯ ಡಿ.ಎಚ್.ಪೂಜಾರ, ರಾಜು ಬಾಕಳೆ, ರಾಜ್ಯ ರೈತ ಸಂಘದ ಮುಖಂಡರಾದ ನಜೀರಸಾಬ್ ಮೂಲಿಮನಿ, ಭೀಮಸೇನ ಕಲಕೇರಿ, ಮಹಿಳಾ ನಾಯಕಿಯರಾದ ಜ್ಯೋತಿ ಎಂ.ಗೊಂಡಬಾಳ, ಸಾವಿತ್ರಿ ಮುಜುಮದಾರ, ಖಾಸಗಿ ಶಾಲಾ ಆಡಳಿತ ಮಂಡಳಿ ಕುಸುಮ ಸಂಘಟನೆಯ ಅಧ್ಯಕ್ಷ ಶಾಯೀದ್ ತಹಶೀಲ್ದಾರ, ದಾನಪ್ಪ ಕವಲೂರು, ಅಲೀಮುದ್ದಿನ್, ಸುರೇಶ ಕುಂಬಾರ, ಮುಖಂಡರಾದ ಶುಕರಾಜ ತಾಳಕೇರಿ, ಮಂಜು ಹಾಲವರ್ತಿ, ರಂಗ ಕಲಾವಿದೆ ಎಚ್. ಬಿ. ಸರೋಜಮ್ಮ, ಎಸ್.ಬಿ. ರಾಜೂರು, ಶಂಭುಲಿಂಗಪ್ಪ ಹರಗೇರಿ, ನಿವೃತ್ತ ಪ್ರಾಚಾರ್ಯ ಎಲ್.ಎಫ್. ಪಾಟೀಲ್, ಮೂಕಪ್ಪ ಮೇಸ್ತ್ರಿ ಬಸಾಪುರ, ಶರಣು ಗಡ್ಡಿ, ರವಿ ಕಾಂತನವರ, ಗವಿಸಿದ್ದಪ್ಪ ಹಲಿಗಿ, ಜಿ. ಎಸ್. ಕಡೇಮನಿ, ಮಹಾದೇವಪ್ಪ ಮಾವಿನಮಡು, ಬಸವರಾಜ ನರೇಗಲ್, ಯಮನೂರಪ್ಪ ಹಾಲಳ್ಳಿ ಬಸಾಪುರ, ಮಂಗಳೇಶ ರಾಠೋಡ, ಮಂಜುನಾಥ ಕವಲೂರು, ಸಿ. ಬಿ. ಪಾಟೀಲ್, ಸುಂಕಪ್ಪ ಮೀಸಿ, ಮಲ್ಲಪ್ಪ ಮಾ. ಪಾ., ಗಣೇಸ ವಿಶ್ವಕರ್ಮ, ಸುರೇಶ ಪೂಜಾರ, ಸದಾಶಿವ ಪಾಟೀಲ್ ಸೇರಿ ನೂರಾರು ಜನರು ಪಾಲ್ಗೊಂಡರು.

Tags

protestKoppala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X