Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಬಾಕಿ ಶುಲ್ಕ ಕಟ್ಟಿಲ್ಲವೆಂದು...

ಕೊಪ್ಪಳ | ಬಾಕಿ ಶುಲ್ಕ ಕಟ್ಟಿಲ್ಲವೆಂದು ತಾಳಿ, ಕಿವಿಯೋಲೆ ಬಿಚ್ಚಿಸಿಕೊಂಡ ಕಾಲೇಜು ಆಡಳಿತ ಮಂಡಳಿ

ವಾರ್ತಾಭಾರತಿವಾರ್ತಾಭಾರತಿ11 Sept 2025 9:26 PM IST
share
ಕೊಪ್ಪಳ | ಬಾಕಿ ಶುಲ್ಕ ಕಟ್ಟಿಲ್ಲವೆಂದು ತಾಳಿ, ಕಿವಿಯೋಲೆ ಬಿಚ್ಚಿಸಿಕೊಂಡ ಕಾಲೇಜು ಆಡಳಿತ ಮಂಡಳಿ
ವಿಷಯ ಹೊರಬರುತ್ತಿದ್ದಂತೆ ವಿದ್ಯಾರ್ಥಿನಿಯ ತಾಯಿಯ ಬಳಿ ಕ್ಷಮೆಯಾಚನೆ

ಕೊಪ್ಪಳ/ಗಂಗಾವತಿ, ಸೆ.11: ವಿದ್ಯಾರ್ಥಿನಿಯು ಬಾಕಿ ಇರುವ ಶುಲ್ಕವನ್ನು ಪಾವತಿಸದಿರುವ ಕಾರಣದಿಂದ ವರ್ಗಾವಣೆ ಪ್ರಮಾಣ ಪತ್ರ(ಟಿಸಿ) ನೀಡಲು ನಿರಾಕರಿಸಿದ ಕಾಲೇಜು ಆಡಳಿತ ಮಂಡಳಿಯವರು ವಿದ್ಯಾರ್ಥಿನಿಯ ತಾಯಿಯ ಬಂಗಾರದ ತಾಳಿ ಹಾಗೂ ಕಿವಿಯ ಓಲೆಗಳನ್ನು ಬಿಚ್ಚಿಸಿಕೊಂಡಿದ್ದ ಅಮಾನವೀಯ ಘಟನೆ ಜಿಲ್ಲೆಯ ಗಂಗಾವತಿ ನಗರದ ಬಿಬಿಸಿ ನರ್ಸಿಂಗ್ ಕಾಲೇಜಿನಲ್ಲಿ ನಡೆದಿತ್ತು. ಆದರೆ ವಿಷಯ ಹೊರಗೆ ಬರುತ್ತಿದಂತೆಯೇ ಕಾಲೇಜು ಆಡಳಿತ ಮಂಡಳಿಯವರು ಪೋಷಕರ ಬಳಿ ಕ್ಷಮೆ ಕೇಳಿ ಅವರ ತಾಳಿ ಮತ್ತು ಕಿವಿಯೋಲೆಗಳನ್ನು ಹಿಂದಿರುಗಿಸಿದ್ದಾರೆ ಎಂದು ತಿಳಿದುಬಂದಿದೆ.

ಕಾವೇರಿ ಎಂಬ ವಿದ್ಯಾರ್ಥಿನಿ ಬಿಬಿಸಿ ನರ್ಸಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ನಂತರ ಬೇರೆ ಕಾಲೇಜಿಗೆ ಸೇರಿಕೊಳ್ಳುತ್ತಿರುವುದರಿಂದ ಟಿಸಿ ನೀಡುವಂತೆ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ. ಆದರೆ ಕಾಲೇಜಿನ ಅಧ್ಯಕ್ಷ ಡಾ.ಸಿ.ಬಿ.ಚಿನಿವಾಲ ಅವರು, ಬಾಕಿ ಇರುವ ಶುಲ್ಕವನ್ನು ಒಂದೇಬಾರಿ ಪಾವತಿಸಿ ಟಿಸಿ ಪಡೆಯುವಂತೆ ಸೂಚಿಸಿದ್ದರು.

ಬಾಕಿ ಶುಲ್ಕ ಪಾವತಿಸಲು ಹಣವಿಲ್ಲ ಎಂದು ಹೇಳಿದಾಗ ಕಾಲೇಜಿನ ಅಧ್ಯಕ್ಷರು ವಿದ್ಯಾರ್ಥಿನಿ ತಾಯಿಯ ತಾಳಿ ಹಾಗೂ ಓಲೆಯನ್ನು ಒತ್ತೆಯಾಗಿ ಇಟ್ಟುಕೊಂಡಿದ್ದರು ಎಂಬ ಆರೋಪ ಕೇಳಿಬಂದಿತ್ತು.

ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು, ಕಾಲೇಜು ಆಡಳಿತ ಮಂಡಳಿ ತಾಳಿ ಮತ್ತು ಕಿವಿಯ ಓಲೆಯನ್ನು ವಾಪಸ್ ನೀಡಿರುವುದಾಗಿ ತಿಳಿದುಬಂದಿದೆ.

ಬಿಬಿಸಿ ನರ್ಸಿಂಗ್ ಕಾಲೇಜಿನಲ್ಲಿ ನಮ್ಮ ಮಗಳು 2ನೇ ವರ್ಷದ ಬಿಎಸ್‌ಸಿ ನರ್ಸಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಅಲ್ಲಿ ಶುಲ್ಕ ಹೆಚ್ಚಿರುವ ಕಾರಣ ನನ್ನ ಮಗಳು ಟಿಸಿ ಪಡೆಯಲು ಹೋಗಿದ್ದಳು. ಎರಡೇ ತಿಂಗಳು ಕಾಲೇಜಿಗೆ ಹೋಗಿರುವುದು 90 ಸಾವಿರ ರೂ. ಕೊಡಬೇಕಾಗಿತ್ತು. ಆದರೆ, ಕಾಲೇಜು ಸಿಬ್ಬಂದಿ ನಾಲ್ಕು ವರ್ಷದ ಹಣ ಕಟ್ಟಿ ಅಂದರು. ನಮ್ಮ ಬಳಿ ಹಣ ಇರಲಿಲ್ಲ. ಕಾಲೇಜಿಗೆ ಹೋಗಿ ನಾವು ಎರಡು ಮೂರು ಬಾರಿ ಕೇಳಿದರೂ ಅವರು ಟಿಸಿ ಕೊಟ್ಟಿರಲಿಲ್ಲ. ಈ ಹಿನ್ನೆಲೆಯಲ್ಲಿ ಕಾಲೇಜು ಚೇರ್‌ಮನ್ ಡಾ.ಚಿನಿವಾಲ ಉಳಿದ ಹಣವನ್ನು ಪಾವತಿಸಲು ಆಗುವುದಿಲ್ಲವೆಂದರೆ ನಿಮ್ಮ ಬಳಿ ಇರುವ ಬಂಗಾರವನ್ನೆಲ್ಲ ಕೊಡಿ ಎಂದು ಒತ್ತಾಯಿಸಿದ್ದರು. ಇದರಿಂದಾಗಿ ಕಾವೇರಿಯ ತಾಯಿ ತಾಳಿಸರ, ಬೆಂಡೋಲೆ ಎಲ್ಲವನ್ನೂ ಬಿಚ್ಚಿಕೊಟ್ಟಿದ್ದು, ಬಳಿಕ ಟಿಸಿ ಪಡೆದಿದ್ದರು. ಈ ಸುದ್ದಿ ಗೊತ್ತಾಗಿ ಕಾಲೇಜು ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿದ್ದಂತೆಯೇ ತಾಳಿ ಮತ್ತು ಓಲೆಯನ್ನು ವಾಪಸ್ ನೀಡಿದ್ದಾರೆ.

- ಹನಮಂತಪ್ಪ ವಾಲಿಕಾರ್, ವಿದ್ಯಾರ್ಥಿನಿಯ ತಂದೆ


share
ವಾರ್ತಾಭಾರತಿ
ವಾರ್ತಾಭಾರತಿ
Next Story
X