Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಕೋರ್ಟ್ ಆದೇಶ ಪಾಲನೆ ವಿಳಂಬ:...

ಕೊಪ್ಪಳ | ಕೋರ್ಟ್ ಆದೇಶ ಪಾಲನೆ ವಿಳಂಬ: ತಹಶೀಲ್ದಾರ್ ಕಚೇರಿಗೆ ಜಪ್ತಿ ವಾರೆಂಟ್

ವಾರ್ತಾಭಾರತಿವಾರ್ತಾಭಾರತಿ2 Sept 2026 6:04 PM IST
share
ಕೊಪ್ಪಳ | ಕೋರ್ಟ್ ಆದೇಶ ಪಾಲನೆ ವಿಳಂಬ: ತಹಶೀಲ್ದಾರ್ ಕಚೇರಿಗೆ ಜಪ್ತಿ ವಾರೆಂಟ್

ಕುಕನೂರು: ಖಾಸಗಿ ಜಮೀನಿಗೆ ಸಂಬಂಧಿಸಿದ ಪ್ರಕರಣದಲ್ಲಿ ನ್ಯಾಯಾಲಯದ ಆದೇಶವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸುವಲ್ಲಿ ವಿಳಂಬವಾದ ಹಿನ್ನೆಲೆಯಲ್ಲಿ ಕುಕನೂರು ತಹಶೀಲ್ದಾರ್ ಕಚೇರಿಗೆ ಸ್ಥಳೀಯ ಸಿವಿಲ್ ನ್ಯಾಯಾಲಯವು ಜಪ್ತಿ ವಾರೆಂಟ್ ಜಾರಿಗೊಳಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದ ಕಂದಾಯ ದಾಖಲೆಗಳಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡುವಂತೆ ನ್ಯಾಯಾಲಯ ನಿರ್ದೇಶಿಸಿತ್ತು. ಅದರಂತೆ ಒಂದು ಆರ್‌ಟಿಸಿ ಬದಲಾವಣೆ ಪೂರ್ಣಗೊಂಡಿದ್ದು, ಮತ್ತೊಂದು ಆರ್‌ಟಿಸಿ ಬದಲಾವಣೆ ಸರ್ವೆ ಇಲಾಖೆಯ ಹಂತದಲ್ಲಿ ಬಾಕಿ ಉಳಿದಿತ್ತು ಎಂದು ತಿಳಿದುಬಂದಿದೆ.

ನ್ಯಾಯಾಲಯದ ಆದೇಶ ಸಂಪೂರ್ಣವಾಗಿ ಅನುಷ್ಠಾನಗೊಳ್ಳದ ಹಿನ್ನೆಲೆಯಲ್ಲಿ ಜಪ್ತಿ ವಾರೆಂಟ್ ಜಾರಿಯಾಗಿದ್ದು, ಅದರ ಅನ್ವಯ ತಹಶೀಲ್ದಾರ್ ಕಚೇರಿಯಲ್ಲಿದ್ದ ಕೆಲವು ಪೀಠೋಪಕರಣಗಳು ಹಾಗೂ ತಹಶೀಲ್ದಾರ್ ಮತ್ತು ಉಪತಹಶೀಲ್ದಾರ್ ಬಳಸುವ ಕುರ್ಚಿಗಳನ್ನು ಜಪ್ತಿ ಪ್ರಕ್ರಿಯೆಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಸರ್ವೆ ಇಲಾಖೆಯ ಹಂತದಲ್ಲಿ ಪ್ರಕ್ರಿಯೆ ಬಾಕಿ

ಈ ಕುರಿತು ತಹಶೀಲ್ದಾರ್ ಬಸವರಾಜ ಬೆಣ್ಣೆಶಿರೂರು ಸ್ಪಷ್ಟನೆ ನೀಡಿ, ‘ಖಾಸಗಿ ಜಮೀನಿಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ್ದ ನಿರ್ದೇಶನದಂತೆ ಒಂದು ಆರ್‌ಟಿಸಿ ಬದಲಾವಣೆ ಈಗಾಗಲೇ ಪೂರ್ಣಗೊಳಿಸಲಾಗಿದೆ. ಮತ್ತೊಂದು ಆರ್‌ಟಿಸಿಗೆ ಸಂಬಂಧಿಸಿದ ಪ್ರಕ್ರಿಯೆ ಸರ್ವೆ ಕಚೇರಿ ಹಂತದಲ್ಲಿ ಬಾಕಿ ಉಳಿದಿದ್ದರಿಂದ ವಿಳಂಬವಾಗಿದೆ’ ಎಂದು ತಿಳಿಸಿದ್ದಾರೆ.

‘ನ್ಯಾಯಾಲಯದ ಆದೇಶವನ್ನು ಉದ್ದೇಶಪೂರ್ವಕವಾಗಿ ಪಾಲಿಸದೇ ಇರುವ ಉದ್ದೇಶ ಕಚೇರಿಗೆ ಇರಲಿಲ್ಲ. ಸರ್ವೆ ಇಲಾಖೆಯ ಪ್ರಕ್ರಿಯೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ಉಳಿದ ದಾಖಲೆ ಬದಲಾವಣೆ ಕಾರ್ಯವನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ’ ಎಂದು ಹೇಳಿದ್ದಾರೆ.

ಬಾಕಿ ಇರುವ ಸರ್ವೆ ಕಾರ್ಯ ಪೂರ್ಣಗೊಂಡ ಬಳಿಕ ಸಂಬಂಧಿಸಿದ ಆರ್‌ಟಿಸಿ ಬದಲಾವಣೆ ಸೇರಿದಂತೆ ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಬೇಕಿದೆ. ನ್ಯಾಯಾಲಯದ ಆದೇಶಗಳ ಅನುಷ್ಠಾನದಲ್ಲಿ ಸಂಬಂಧಿಸಿದ ಇಲಾಖೆಗಳ ನಡುವೆ ಸಮನ್ವಯ ಅಗತ್ಯವಾಗಿದ್ದು, ಬಾಕಿ ಇರುವ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಅಗತ್ಯವಿದೆ ಎಂದರು.

Tags

KoppalacourtorderTahsildar office
share
ವಾರ್ತಾಭಾರತಿ
ವಾರ್ತಾಭಾರತಿ
Next Story
X