Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | 61 ದಿನ ಪೂರ್ಣಗೊಳಿಸಿದ...

ಕೊಪ್ಪಳ | 61 ದಿನ ಪೂರ್ಣಗೊಳಿಸಿದ ಕಾರ್ಖಾನೆ ವಿಸ್ತರಣೆ ವಿರೋಧಿ ಧರಣಿ

ವಾರ್ತಾಭಾರತಿವಾರ್ತಾಭಾರತಿ30 Dec 2025 6:26 PM IST
share
ಕೊಪ್ಪಳ | 61 ದಿನ ಪೂರ್ಣಗೊಳಿಸಿದ ಕಾರ್ಖಾನೆ ವಿಸ್ತರಣೆ ವಿರೋಧಿ ಧರಣಿ

ಕೊಪ್ಪಳ : “ಜನರೇ ಇಲ್ಲದ ದೇವರನ್ನು ತೆಗೆದುಕೊಂಡು ಏನು ಮಾಡಬೇಕು. ದೇವರು ಸಮೃದ್ಧಿಯಾಗುವ ಕಾಲದಲ್ಲಿ ಭಕ್ತರು ಸ್ಮಶಾನದ ಕಡೆ ಸಾಗುತ್ತಿದ್ದಾರೆ. ಇಲ್ಲಿನ ಕಾರ್ಖಾನೆಗಳ ಕೊಳವೆಗಳು ಫಿರಂಗಿಗಳಂತೆ ಕಾಣುತ್ತಿವೆ” ಎಂದು ಹಿರಿಯ ಚಿಂತಕ ರಹಮತ್ ತರೀಕೆರೆ ಹೇಳಿದರು.

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆಯ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಖಾನೆ ವಿಸ್ತರಣೆ ವಿರೋಧಿ ಅನಿರ್ದಿಷ್ಟ ಧರಣಿಯ 61ನೇ ದಿನದ ಹೋರಾಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ತುಂಗಭದ್ರಾ ನದಿ ಚರಂಡಿಯಾಗಿ ಪರಿವರ್ತನೆಗೊಳ್ಳುತ್ತಿದ್ದು, ಇಲ್ಲಿಂದ ಜಿಂದಾಲ್ ವರೆಗೆ ಸುಮಾರು 70 ಕಿಲೋಮೀಟರ್ ಪ್ರದೇಶ ಅಪಾಯಕಾರಿ ಮಾಲಿನ್ಯದ ಕಾರಿಡಾರ್ ಆಗಿದೆ. ಇದು ಜಗತ್ತಿನ ಅತ್ಯಂತ ಕೆಟ್ಟ ಪ್ರದೇಶಗಳ ಪೈಕಿ ಒಂದಾಗಿ ರೂಪುಗೊಳ್ಳುತ್ತಿದೆ. ಕಂಪನಿಗಳ ಪರವಾಗಿ ಕೆಲಸ ಮಾಡುವವರು ಜನರ ಮಧ್ಯೆ ಶತ್ರುತ್ವ ಬಿತ್ತುತ್ತಿರುವುದು ನೋವಿನ ಸಂಗತಿ. ಸರ್ಕಾರಗಳೇ ಜನರ ಮೇಲೆ ಯುದ್ಧ ಸಾರಿದಂತ ಪರಿಸ್ಥಿತಿ ಇಲ್ಲಿದೆ. ಆದ್ದರಿಂದ ಇದು ಎಲ್ಲ ಜನರ ಹೋರಾಟವಾಗಬೇಕು ಎಂದು ಹೇಳಿದರು.

ಕೊಪ್ಪಳದ ಗವಿಮಠದ ಜಾತ್ರೆಯೂ ಜನಪರ ನಿಲುವು ತಾಳಬೇಕು. ಇಲ್ಲಿನ ಧೂಳು, ಹೊಗೆ ಹಾಗೂ ವಿಷವಾಯುಗಳ ವಿರುದ್ಧ ಹೋರಾಟ ನಡೆಯಬೇಕು. ಕಾರ್ಖಾನೆಗಳ ಕೊಳವೆಗಳು ಜನರನ್ನು ಕೊಲ್ಲುವ ಫಿರಂಗಿಗಳಂತೆ ಕಾಣುತ್ತಿವೆ. ಇದು ಬದುಕಿನ ಹಕ್ಕಿನ ಹೋರಾಟವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

ಇಲ್ಲಿನ ಕೃಷಿ ಸಂಪೂರ್ಣವಾಗಿ ಹಾಳಾಗಿದೆ. ಹೂವುಗಳು ವಿಷವಾಗಿವೆ, ಪರಾಗಸ್ಪರ್ಶವೇ ಇಲ್ಲದಂತಾಗಿದೆ. ಹಸಿರನ್ನು ಸಂಭ್ರಮಿಸುವ ಲಕ್ಷಣವೇ ಇಲ್ಲದಾಗ, ಕವಿಗಳು ವಿಷಾದದ ಗೀತೆ ಬರೆಯಬೇಕಾದ ಸ್ಥಿತಿ ಉಂಟಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಯುವ ರೈತ ಗವಿಸಿದ್ದಪ್ಪ ಪುಟಗಿ ಮಾತನಾಡಿದರು.

ಧರಣಿಯಲ್ಲಿ ಪುಷ್ಪಲತಾ ಏಳುಭಾವಿ, ಬಿ.ಜಿ.ಕರಿಗಾರ, ಸಾವಿತ್ರಿ ಮುಜುಮದಾರ್, ಸಿ.ವಿ. ಜಡಿಯವರ, ಎಸ್.ಬಿ. ರಾಜೂರು, ಗಂಗಾಧರ ಖಾನಾಪೂರ, ರವಿ ಕಾಂತನವರ, ಕವಿ ಮಹೇಶ ಮನ್ನಾಪುರ, ಎಂ.ಡಿ. ಪಾಟೀಲ್, ಶಂಭುಲಿಂಗಪ್ಪ ಆರ್. ಹರಗೇರಿ, ಮಂಜುನಾಥ ಆಟೋ, ಮಂಜುನಾಥ ಕೊಂಡನಹಳ್ಳಿ, ಶಾಂತಯ್ಯ ಅಂಗಡಿ, ಯಲ್ಲಪ್ಪ ಕೋಳೂರು, ಎಸ್. ಮಹಾದೇವಪ್ಪ ಮಾವಿನಮಡು, ಈರಯ್ಯಸ್ವಾಮಿ ಸಾಲಿಮಠ, ಗೀತಾ ಭೋವಿ, ಸದಾಶಿವ ಪಾಟೀಲ್, ರಮೇಶ ಡಂಬ್ರಳ್ಳಿ ಕುಣಿಕೇರಿ, ರಮೇಶ ಕೋಳೂರು, ಶಿವಪ್ಪ ಜಲ್ಲಿ, ಬಸವರಾಜ ನರೇಗಲ್, ಪಾಮಣ್ಣ ಕೆ. ಮಲ್ಲಾಪುರ, ಮಖ್ಬೂಲ್ ರಾಯಚೂರು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಇದಕ್ಕೂ ಮೊದಲು ಬೆಳಿಗ್ಗೆ ಹಿರಿಯ ವಿಮರ್ಶಕ ಹಾಗೂ ಸಂಶೋಧಕ ರಹಮತ್ ತರೀಕೆರೆ ಅವರು ಜಂಟಿ ಕ್ರಿಯಾ ವೇದಿಕೆಯ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಸಂಚಾಲಕ ಮಲ್ಲಿಕಾರ್ಜುನ ಬಿ.ಗೋನಾಳ, ಪ್ರಕಾಶಕ ಡಿ.ಎಂ. ಬಡಿಗೇರ ಹಾಗೂ ಮಾಲಾ ಬಡಿಗೇರ ಅವರೊಂದಿಗೆ ಕಾರ್ಖಾನೆಗಳಿಂದ ಬಾಧಿತಗೊಂಡ ಗಿಣಿಗೇರಿ, ಅಲ್ಲಾನಗರ, ಹಿರೇಬಗನಾಳ, ಚಿಕ್ಕಬಗನಾಳ, ಕುಣಿಕೇರಿ, ಕುಣಿಕೇರಿ ತಾಂಡಾ ಹಾಗೂ ಹಾಲವರ್ತಿ ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿ ವೀಕ್ಷಿಸಿದರು. ಹಿರೇಬಗನಾಳ ಗ್ರಾಮದ ಕರಿಯಮ್ಮ ದೇವಸ್ಥಾನದಲ್ಲಿ ಸೇರಿದ ರೈತರೊಂದಿಗೆ ಚರ್ಚಿಸಿ ಮಾಹಿತಿ ಸಂಗ್ರಹಿಸಿದರು.

ಕಾರ್ಖಾನೆ ವಿರುದ್ಧದ ಈ ಹೋರಾಟದಲ್ಲಿ ಸಾಹಿತ್ಯ ಕ್ಷೇತ್ರದ ರಾಜ್ಯೋತ್ಸವ ಪ್ರಶಸ್ತಿ ಪಡೆದ ನಾಲ್ವರು ದಿಗ್ಗಜರಾದ ಹೆಚ್.ಎಸ್. ಪಾಟೀಲ್, ಪ್ರೊ.ಅಲ್ಲಮಪ್ರಭು ಬೆಟ್ಟದೂರು, ಎ.ಎಂ.ಮದರಿ ಹಾಗೂ ಅತಿಥಿ ರಹಮತ್ ತರೀಕೆರೆ ಭಾಗವಹಿಸಿರುವುದು ಸರ್ಕಾರ, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕಾದ ವಿಷಯವಾಗಿದೆ.

-ಮಂಜುನಾಥ ಜಿ.ಗೊಂಡಬಾಳ, ಹೋರಾಟದ ಸಂಚಾಲಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X