Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಅದ್ಧೂರಿಯಾಗಿ ನಡೆದ ಗವಿ...

ಕೊಪ್ಪಳ | ಅದ್ಧೂರಿಯಾಗಿ ನಡೆದ ಗವಿ ಸಿದ್ದೇಶ್ವರ ಜಾತ್ರಾ ಮಹೋತ್ಸವ : ಎಂಟು ಲಕ್ಷಕ್ಕೂ ಹೆಚ್ಚು ಜನರು ಭಾಗಿ

ರಥಕ್ಕೆ ಉತ್ತುತ್ತಿ ಸಮರ್ಪಿಸಿದ ಭಕ್ತರು

ವಾರ್ತಾಭಾರತಿವಾರ್ತಾಭಾರತಿ15 Jan 2025 10:52 PM IST
share
ಕೊಪ್ಪಳ | ಅದ್ಧೂರಿಯಾಗಿ ನಡೆದ ಗವಿ ಸಿದ್ದೇಶ್ವರ ಜಾತ್ರಾ ಮಹೋತ್ಸವ : ಎಂಟು ಲಕ್ಷಕ್ಕೂ ಹೆಚ್ಚು ಜನರು ಭಾಗಿ

ಕೊಪ್ಪಳ : ದಕ್ಷಿಣ ಭಾರತದ ಕುಂಭಮೇಳ ಎಂದು ಖ್ಯಾತಿ ಪಡೆದ ಗವಿಮಠದ ಗವಿಸಿದ್ದೇಶ್ವರರ ಮಹಾರಥೋತ್ಸವವು ಪ್ರತಿವರ್ಷದಂತೆ ಈ ವರ್ಷವೂ ಗೋಧೂಳಿ ಸಮಯಕ್ಕೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿತು.

ಗವಿಮಠದ ಗದ್ದುಗೆಯಲ್ಲಿದ್ದ ಗವಿಸಿದ್ದೇಶ್ವರ ಮೂರ್ತಿಯನ್ನು ಪಲ್ಲಕ್ಕಿಯ ಮೂಲಕ ಅಭಿನವ ಗವಿಶ್ರೀಗಳ ನೇತೃತ್ವದಲ್ಲಿ ಕಂಸಾಳೆ, ವಾದ್ಯ, ನಂದಿಕೋಲು ನೃತ್ಯದ ಮೆರವಣಿಗೆಯೊಂದಿಗೆ ರಥದೊಳಗೆ ಕೂರಿಸಲಾಯಿತು. ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ರಥಕ್ಕೆ ಪೂಜೆ ಸಲ್ಲಿಸಿದರು.

ಈ ಜಾತ್ರಾ ಮಹೋತ್ಸವದ ಉದ್ಘಾಟಕರಾಗಿ ಆಗಮಿಸಿದ್ದ ದಾರವಾಡದ ಸುಪ್ರಸಿದ್ಧ ಹಿಂದೂಸ್ಥಾನಿ ಗಾಯಕ ಪದ್ಮಶ್ರೀ ಎಮ್ ವೆಂಕಟೇಶ ಕುಮಾರ್ ಮಾತನಾಡಿ, ನಾನು ಕೊಪ್ಪಳದ ಜಾತ್ರೆಯ ಬಗ್ಗೆ ಕೇಳಿದ್ದೆ ಆದರೆ ಎಂದೂ ನೋಡಿರಲಿಲ್ಲ, ಆದರೆ ಇಂದು ನೋಡಿದೆ. ಇಂತಹ ಜಾತ್ರೆಯನ್ನು ಜೀವನದಲ್ಲಿ ಎಂದು ಕೂಡ ನೋಡಿರಲಿಲ್ಲ ಎಂದರು.

ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ್ದ ತುಮಕೂರಿನ ಸಿದ್ದಗಂಗಾಶ್ರೀ ಮಾತನಾಡಿ, ಗವಿಶ್ರೀಗಳು ವಿಧ್ಯಾರ್ಥಿಗಳನ್ನು ವಿದ್ಯಾರ್ಥಿ ದೆವೋ ಭವ ಎಂದು ಭಾವಿಸಿ ಅವರಿಗೆ ಶಿಕ್ಷಣ ನೀಡುತ್ತಿರುವುದು ಸಂತೋಷದಾಯಕ ಎಂದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಕರಿಡಿ ಸಂಗಣ್ಣ, ಶಾಸಕ ರಾಘವೇಂದ್ರ ಹಿಟ್ನಾಳ, ದೊಡ್ಡನಗೌಡ ಪಾಟೀಲ್, ಹೇಮಾಲತ ನಾಯಕ, ಬಸವನಗೌಡ ಬಾದರ್ಲಿ, ಜೆಡಿಎಸ್ ಮುಖಂಡ ಸಿ.ವಿ ಚಂದ್ರಶೇಖರ್, ಮಾಜಿ ಸಚಿವ ಹಾಲಪ್ಪ ಆಚಾರ ಸೇರದಂತೆ ಇತರರು ಇದ್ದರು.

ಎಲ್ಲ ಜಾತಿಯವರು ಭಾವೈಕ್ಯತೆಯಿಂದ ತಮ್ಮ ತಮ್ಮ ಹೊಲಗಳಲ್ಲಿ ಬೆಳೆದ ದವಸ ಧಾನ್ಯಗಳನ್ನು ತರುತ್ತಾರೆ. ಅಲ್ಲದೇ ರಥೋತ್ಸವಕ್ಕೂ ಕೂಡಾ ಎಲ್ಲ ಜಾತಿಯವರೂ ಒಂದಾಗಿ ಸೇರಿ ಸಂಭ್ರಮಾಚರಣೆ ಮಾಡುತ್ತಾರೆ. ಗವಿಮಠದ ಶ್ರೀಗಳು ಅನ್ನ, ಅಕ್ಷರ, ದಾಸೋಹವನ್ನು ಜಾತಿ ತಾರತಮ್ಯ ಮರೆತು ಸರ್ವ ಜನಾಂಗದವರಿಗೆ ಸಮಾನ ರೀತಿಯಲ್ಲಿ ನೋಡುವ ಮುಖಾಂತರ ಸಮಾಜ ಕಟ್ಟುವ ಕೆಲಸ ಮಾಡುತ್ತಾರೆ.

-ಶಿವರಾಜ್‌ ತಂಗಡಗಿ, ಜಿಲ್ಲಾ ಉಸ್ತಾವರಿ ಸಚಿವರು ಕೊಪ್ಪಳ

ಜಾತ್ರೆಗಳೂ ಆಡಂಭರಕ್ಕೆ ಸೀಮಿತವಾಗದೆ ಸಮಾಜಗಳ ಬದಲಾವಣೆಗೆ ಕೊಪ್ಪಳ ಅಜ್ಜನ ಜಾತ್ರೆ ಹೆಸರಾಗಿದೆ ಅಂದ ಮಕ್ಕಳಿಗೆ ವಸತಿ ಶಾಲೆಗಳು ಇನ್ನೂ ಇನ್ನಿತರ ಸೌಲಭ್ಯಗಳು ಗವಿ ಮಠಕ್ಕೆ ದೊರಕಲಿ ರೈತರಿಗೆ ಮುಂದಿನ ದಿನಗಳಲ್ಲಿ ಸರಿಯಾದ ಸಮಯಕ್ಕೆ ಮಳೆಯಾಗಿ ನೆಮ್ಮದಿಯಿಂದ ಜೀವನ ಸಾಗಿಸಲು ಗವಿ ಸಿದ್ದೇಶ್ವರಲ್ಲಿ ಪ್ರಾಥನೆಮಾಡುತ್ತೇನೆ.

-ಬಿ.ವೈ.ವಿಜಯೇಂದ್ರ, ರಾಜ್ಯಧ್ಯಕ್ಷರು ಭಾರತೀಯ ಜನಾತ ಪಾರ್ಟಿ ಕರ್ನಾಟಕ

ಗವಿ ಸಿದ್ದೇಶ್ವರ ಜಾತ್ರೆ ಜಾತ್ರೆಯಲ್ಲ, ಅರಿವು ಮೂಡಿಸುವ ಜನ ಜಾತ್ರೆಯಾಗಿದೆ. ಗವಿ ಮಠ ನೊಂದ ಬಾಳಿಗೆ ಬೇಳಕಾಗಿದೆ ಬಡವರು ಮತ್ತು ಮಧ್ಯಮ ವರ್ಗದ ಮಕ್ಕಳು ಜಾತಿಯನ್ನು ಮರೆದು ವಿಧ್ಯಾಭ್ಯಾಸ ಮಾಡುತ್ತಾರೆ.

-ರಾಜಶೇಖರ ಹಿಟ್ನಾಳ, ಸಂಸದರು ಕೊಪ್ಪಳ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X