Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ...

ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಿಗೆ ಕಿರುಕುಳ : ಕೇಂದ್ರದ ವಿರುದ್ಧ ಉಗ್ರಪ್ಪ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ21 Dec 2025 7:56 PM IST
share
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಿಗೆ ಕಿರುಕುಳ : ಕೇಂದ್ರದ ವಿರುದ್ಧ ಉಗ್ರಪ್ಪ ಆಕ್ರೋಶ

ಕೊಪ್ಪಳ. ಡಿ.21: ನ್ಯಾಷನಲ್ ಹೆರಾಲ್ಡ್ ಪತ್ರಿಕೆಯು ಸ್ವಾತಂತ್ರ್ಯ ಚಳವಳಿಯಲ್ಲಿ ಮಹತ್ವದ ಪಾತ್ರ ವಹಿಸಿದೆ. ರಾಜಕೀಯ ಒತ್ತಡಕ್ಕೆ ಮಣಿದು, ಈಡಿ ಮೂಲಕ ಪ್ರಧಾನಿ ನರೇಂದ್ರ ಮೋದಿ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ವಿರುದ್ಧ ದಾಳಿ ಮಾಡಿಸಿದ್ದಾರೆ. ಇದು ಸ್ವಾತಂತ್ರ್ಯ ಚಳವಳಿಗೆ ಮಾಡುತ್ತಿರುವ ಅಪಚಾರ ಎಂದು ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ಆರೋಪಿಸಿದ್ದಾರೆ.

ನಗರದ ಕಾಂಗ್ರೆಸ್ ಜಿಲ್ಲಾ ಕಾರ್ಯಾಲಯದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿಲ್ಲ. ಕಾನೂನೂ ಪಾಲಿಸದೆ ರಾಜಕೀಯ ಒತ್ತಡಕ್ಕೆ ಮಣಿದು ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮೇಲೆ ಹತಾಶರಾದ ಬಿಜೆಪಿಗರು ಇಡಿ ಮೂಲಕ ದಾಳಿ ಮಾಡಿಸುತ್ತಿದ್ದಾರೆ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಗಾಂಧೀಜಿ, ಜವಾಹರಲಾಲ್ ನೆಹರು 5 ಸಾವಿರ ಹೋರಾಟಗಾರರು ಸೇರಿ ಪ್ರಾರಂಭಿಸಿದ ಪತ್ರಿಕೆಯ ವಿರುದ್ಧ ದಾಳಿ ಮಾಡಿಸಿದ್ದಾರೆ. ಪ್ರಕರಣ ದಾಖಲಿಸದೆ ದಾಳಿ ಮಾಡಿದ್ದಕ್ಕೆ ದಿಲ್ಲಿಯ ವಿಶೇಷ ನ್ಯಾಯಾಲಯವು ಕೇಂದ್ರ ಸರ್ಕಾರಕ್ಕೆ ಕಪಾಳಮೋಕ್ಷ ಮಾಡಿದೆ. ರಾಜಕೀಯ ಸೇಡಿನಿಂದ ಈಡಿ ಪ್ರಕರಣ ದಾಖಲಿಸಿದ್ದೀರಿ ಎಂದು ಪ್ರಶ್ನಿಸಿದ್ದಾರೆ ಎಂದರು.

ಆರೆಸ್ಸೆಸ್‌ ಸಂಘಟನೆಯನ್ನೇಕೆ ನೋಂದಾಯಿಸಿಲ್ಲ?. ಅಲ್ಲಿ ಲಕ್ಷಾಂತರ ಕೋಟಿ ಗುರುದಕ್ಷಿಣಿ ರೂಪದಲ್ಲಿ ಪಡೆಯುತ್ತಿದ್ದು, 3 ಸಾವಿರಕ್ಕೂ ಹೆಚ್ಚು ಪೂರ್ಣಾವಧಿ ಕಾರ್ಯಕರ್ತರಿದ್ದಾರೆ. ಇವರಿಗೆ ಹೇಗೆ ವೇತನ ಪಾವತಿಸುತ್ತೀರಿ. ಇದರ ಸಂಪೂರ್ಣ ಲೆಕ್ಕ ಎಲ್ಲಿದೆ? ಇದನ್ನೇ ದೇಶದ್ರೋಹ ಎನ್ನುತ್ತಾರೆ ಎಂದು ಅವರು ಹೇಳಿದರು.

ಮನರೇಗಾ ಹೆಸರು ಬದಲಾಯಿಸಿದ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ಹಣಕಾಸು ಸಚಿವರು ರಾಜೀನಾಮೆ ಕೊಡುತ್ತಾರೆ ಎಂದು ಭಾವಿಸಿದ್ದೆ. ಆದರೆ ಫೆವಿಕೋಲ್ ಹಾಕಿಕೊಂಡು, ಅಧಿಕಾರಕ್ಕಾಗಿ ಕುರ್ಚಿಗೆ ಅಂಟಿಕೊಂಡಿದ್ದಾರೆ. ಮಹಾತ್ಮ ಗಾಂಧೀಜಿ, ಸಂವಿಧಾನದ ಬಗ್ಗೆ ಬದ್ಧತೆ ಇದ್ದರೆ ರಾಜೀನಾಮೆ ಕೊಟ್ಟು ದೇಶದ ಜನರ ಕ್ಷಮೆ ಕೇಳಬೇಕು. ಇಲ್ಲವಾದರೆ ದೇಶದ ಜನ ಪ್ರಬುದ್ಧರಿದ್ದು, ಮುಂಬರುವ ಚುನಾವಣೆಯಲ್ಲಿ ಕಿತ್ತೊಗೆಯುತ್ತಾರೆ ಎಂದರು.

ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣ ಇಟ್ಟಂಗಿ, ಅಕ್ಬರ್ ಪಾಶಾ ಪಲ್ಟನ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಜ್ಯೋತಿ ಗೊಂಡಬಾಳ, ಕೆಪಿಸಿಸಿ ವಕ್ತಾರೆ ಶೈಲಜಾ ಹಿರೇಮಠ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ, ಜಿ.ಪಂ.ಮಾಜಿ ಸದಸ್ಯ ಪ್ರಸನ್ನ ಗಡಾದ, ಕಿಶೋರಿ ಬೂದನೂರ ಇದ್ದರು.

ರಾಮ ಉತ್ತಮ ಸಮಾಜಕ್ಕಾಗಿ ಕೆಲಸ ಮಾಡಿದ್ದಾನೆ. ರಾಮನ ಆಶಯದಂತೆ ಬಿಜೆಪಿಯವರು ನಡೆದುಕೊಳ್ಳುವುದಿಲ್ಲ. ತನ್ನ ಶ್ರೀಮತಿಯನ್ನೇ ರಕ್ಷಣೆ ಮಾಡದ ಪ್ರಧಾನಿ ನರೇಂದ್ರ ಮೋದಿಗೆ ರಾಮನ ಹೆಸರೇಳಲು ಅರ್ಹತೆ ಇದೆಯಾ?. ರಾಮನು ಜಾತಿರಹಿತ, ವರ್ಗರಹಿತ, ಸಮಪಾಲು, ಸಮ ಬಾಳು, ಸಮಾನ ಅವಕಾಶದ ಸಮಾಜ ಕಟ್ಟಿದ್ದರು ಎಂದು ವಾಲ್ಮೀಕಿ ರಾಮಾಯಣದ ಮೂಲಕ ತಿಳಿಸಿದ್ದಾರೆ. ಮೋದಿ ತಂಡವು ರಾಮನ ವಿಚಾರಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ರಾಮನ ಆಶಯಕ್ಕೆ ಬದ್ಧವಾಗಿರುವ ಪಕ್ಷ ಕಾಂಗ್ರೆಸ್. ಬಿಜೆಪಿಯು ಓಟಿಗಾಗಿ ರಾಮನ ಹೆಸರೇಳುತ್ತಾರೆ. ರಾಮನ ಹೆಸರಲ್ಲಿ ಹೊಸ ಕಾರ್ಯಕ್ರಮ ರೂಪಿಸಬಹುದಿತ್ತು. ಗಾಂಧೀಜಿ ಹೆಸರನ್ನು ಬದಲಿಸಲು ವಿಕಸಿತ ಭಾರತ ವಿ ರಾಮ್ ಜಿ ಬಿಲ್ ತಂದಿದ್ದಾರೆ. ಇದು ಜನರಿಗೆ ಅರ್ಥವೇ ಆಗುವುದಿಲ್ಲ.

-ವಿ.ಎಸ್.ಉಗ್ರಪ್ಪ, ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷ


share
ವಾರ್ತಾಭಾರತಿ
ವಾರ್ತಾಭಾರತಿ
Next Story
X