Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಬಿಎಸ್‌ಪಿಎಲ್ ಕಾರ್ಖಾನೆ...

ಕೊಪ್ಪಳ | ಬಿಎಸ್‌ಪಿಎಲ್ ಕಾರ್ಖಾನೆ ವಿರೋಧಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭ

ವಾರ್ತಾಭಾರತಿವಾರ್ತಾಭಾರತಿ31 Oct 2025 8:01 PM IST
share
ಕೊಪ್ಪಳ | ಬಿಎಸ್‌ಪಿಎಲ್ ಕಾರ್ಖಾನೆ ವಿರೋಧಿಸಿ ಅನಿರ್ದಿಷ್ಟಾವಧಿ ಧರಣಿ ಆರಂಭ

ಕೊಪ್ಪಳ: ಉದ್ಯೋಗ ಸೃಷ್ಟಿ ಮಾಡಲು ಕಾರ್ಖಾನೆ ಬೇಕು ಎಂದೇನಿಲ್ಲ, ಅವುಗಳಿಂದ ಎಲ್ಲಾ ಸಮಸ್ಯೆ ಪರಿಹಾರ ಆಗಿದೆ ಎಂಬುದು ಕೇವಲ ಭ್ರಮೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅಭಿಪ್ರಾಯಪಟ್ಟರು.

ಅವರು ಇಲ್ಲಿನ ನಗರಸಭೆ ಸಂಕೀರ್ಣದ ಮುಂದೆ ಜಂಟಿ ಕ್ರಿಯಾ ವೇದಿಕೆ (ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆ) ಮೂಲಕ ಹಮ್ಮಿಕೊಂಡಿರುವ ಬಲ್ಡೋಟಾ, ಕಿರ್ಲೋಸ್ಕರ್, ಕಲ್ಯಾಣಿ, ಮುಕುಂದ ಸುಮಿ, ಎಕ್ಸ್ ಇಂಡಿಯಾ ಸೇರಿ ಎಲ್ಲಾ ಕಾರ್ಖಾನೆಗಳ ವಿಸ್ತೀರ್ಣ ಮತ್ತು ಆರಂಭವನ್ನು ವಿರೋಧಿಸಿ ಅನಿರ್ದಿಷ್ಟವಾದಿ ಧರಣಿ ಸತ್ಯಾಗ್ರಹಕ್ಕೆ ಗಾಂಧೀಜಿ ಮತ್ತು ಬಾಬಾಸಾಹೇಬರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಇಲ್ಲಿ ಹಣ ಹೂಡಿಕೆ ಮಾಡುವುದು ದೊಡ್ಡ ಸಂಗತಿ ಎಂದು ಭಾವಿಸಿರುವುದೇ ಬಹುದೊಡ್ಡ ತಪ್ಪು. ಹಣದ ಲೆಕ್ಕದಲ್ಲಿ ಜನರಿಗೆ ಬದುಕು ಸಿಗಲ್ಲ. ಜಿಂದಾಲ್ ನಂತಹ ಬೃಹತ್ ಕಾರ್ಖಾನೆ ಏನು ಹೇಳಿ ಬಳ್ಳಾರಿಯಲ್ಲಿ ಬಂದಿತ್ತು ಅದ್ಯಾವುದೂ ಆಗದೇ ಅಲ್ಲಿ ಜನ ಕಂಗಾಲಾಗಿದ್ದಾರೆ, ಬಹುತೇಕ ಕಂಪನಿಗಳು ಈಗ ಉದ್ಯೋಗ ಕಡಿತ ಆರಂಭಿಸಿವೆ. ಈಗ ಉದ್ಯೋಗ ಕೊಡ್ತಿವಿ ಅಂದವರು ಮುಂದೆ ಕೊಡಲು ಸಾಧ್ಯವಿಲ್ಲ ಎನ್ನುತ್ತಾರೆ. ಅದು ಏನೇ ಇದ್ದರೂ ಉದ್ಯೋಗಕ್ಕಿಂತ ಮೊದಲು ಆರೋಗ್ಯ ಹಾಗೂ ಬದುಕು ಮುಖ್ಯ ಎಂದರು.

ರೈತ ಚಳುವಳಿಯ ಮುಂಚೂಣಿ ನಾಯಕ ಚಾಮರಸ ಮಾಲಿಪಾಟೀಲ್ ಮಾತನಾಡಿ, ಕಾರ್ಖಾನೆಗಳಿಂದ ಬರುತ್ತಿರುವ ಧೂಳು ಮತ್ತು ಹೊಗೆಯಿಂದ ಪರಿಸರ ವಿನಾಶವಾಗಿದೆ, ಬೆಳೆ ಹೋಗಿದೆ, ಬೆಳೆ ವಿಷಕಾರಿಯಾಗಿವೆ ಜೊತೆಗೆ ಇಲ್ಲಿನ ನದಿಯಿಂದ ನೀರನ್ನು ಹೇರಳವಾಗಿ ಬಳಸಿಕೊಂಡು ರೈತರಿಗೆ ಎರಡನೆ ಬೆಳೆಗೆ ನೀರಿಲ್ಲ, ಕುಡಿಯುವ ನೀರು ಮಲಿನವಾಗಿವೆ ಎಂಬ ಸಾಮಾನ್ಯ ಪ್ರಜ್ಞೆ ಇಟ್ಟುಕೊಳ್ಳದಿರುವದು ವಿಷಾಧಕರ ಸಂಗತಿ ಎಂದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಎಂ.ಗೊಂಡಬಾಳ, ಸಭೆಯ ಅಧ್ಯಕ್ಷತೆ ವಹಿಸಿಕೊಂಡ ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಎ.ಎಂ.ಮದರಿ, ಮಹಿಳಾ ಹೋರಾಟಗಾರ್ತಿ ಶಶಿಕಲಾ, ಜಂಟಿ ಕ್ರಿಯಾ ವೇದಿಕೆ ಹೋರಾಟ ಸಂಚಾಲಕರಾದ ಕೆ.ಬಿ.ಗೋನಾಳ, ಡಿ. ಹೆಚ್.ಪೂಜಾರ, ಮಂಜುನಾಥ ಜಿ.ಗೊಂಡಬಾಳ, ಮಹಾಂತೇಶ ಕೊತಬಾಳ, ನಜೀರಸಾಬ್ ಮೂಲಿಮನಿ, ಶರಣು ಗಡ್ಡಿ, ಎಸ್.ಎ.ಗಫಾರ್, ಬಸವರಾಜ ಶೀಲವಂತರ, ಎಸ್.ಬಿ.ರಾಜೂರ, ರವಿ ಕಾಂತನವರ, ಚಿಟ್ಟಿಬಾಬು ಸಿಂಧನೂರು, ಭೀಮಸೇನ ಕಲಿಕೇರಿ, ಶರಣು ಪಾಟೀಲ್, ಹನುಮಂತಪ್ಪ, ಬಸವರಾಜ ಯರದಿಹಾಳ, ಮೂಕಣ್ಣ ಮೇಸ್ತ್ರಿ, ಮಂಗಳೇಶ ರಾಠೋಡ, ಬಸವರಾಜ ನರೆಗಲ್, ರಮೇಶ ಪಾಟೀಲ್ ಬೇರಿಗಿ, ಗವಿಸಿದ್ದಪ್ಪ ಹಲಿಗಿ, ಯಮನೂರಪ್ಪ ಹಾಲಳ್ಳಿ ಬಸಾಪುರ, ಮಹಾದೇವಪ್ಪ ಮಾವಿನಮಡು, ದುರುಗೇಶ ಹಿರೇಮನಿ ವಟಪರ್ವಿ, ಸುಂಕಮ್ಮ ಗಾಂಧಿನಗರ, ಭೀಮಪ್ಪ ಯಲಬುರ್ಗಾ, ಚನ್ನಬಸಪ್ಪ ಅಪ್ಪಣ್ಣವರ ಅನೇಕರಿದ್ದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X