Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕೊಪ್ಪಳ | ಮಹಾತ್ಮ ಗಾಂಧಿ ನರೇಗಾ ಯೋಜನೆ...

ಕೊಪ್ಪಳ | ಮಹಾತ್ಮ ಗಾಂಧಿ ನರೇಗಾ ಯೋಜನೆ ಹೆಸರು ಬದಲಾವಣೆ ಖಂಡಿಸಿ ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ28 Jan 2026 6:33 PM IST
share
ಕೊಪ್ಪಳ | ಮಹಾತ್ಮ ಗಾಂಧಿ ನರೇಗಾ ಯೋಜನೆ ಹೆಸರು ಬದಲಾವಣೆ ಖಂಡಿಸಿ ಮಹಿಳಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ಕೊಪ್ಪಳ: ಕೇಂದ್ರ ಬಿಜೆಪಿ ಸರ್ಕಾರದ ಜನವಿರೋಧಿ ಹಾಗೂ ಧ್ವೇಷ ರಾಜಕಾರಣದಿಂದ ನರೇಗಾ ಯೋಜನೆಯಿಂದ ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆದುಹಾಕಿರುವುದನ್ನು ದೇಶವೇ ವಿರೋಧಿಸಬೇಕು ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಎಂ. ಗೊಂಡಬಾಳ ಆಗ್ರಹಿಸಿದರು.

ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನು ಯಥಾಸ್ಥಿತಿ ಉಳಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಬಿಜೆಪಿ ಸರ್ಕಾರವು ಗೋಡ್ಸೆ ಹಾಗೂ ಮನುಸ್ಮೃತಿ ಪಾಲಕರ ಪ್ರಭಾವಕ್ಕೆ ಒಳಗಾಗಿ ಮಹಾತ್ಮ ಗಾಂಧಿ ಅವರ ಹೆಸರನ್ನು ಯೋಜನೆಯಿಂದ ತೆಗೆದುಹಾಕಿ, ಯೋಜನೆಯ ರೂಪವನ್ನೇ ಬದಲಾಯಿಸುವ ಮೂಲಕ ರಾಜ್ಯ ಸರ್ಕಾರಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ಈ ದುಷ್ಟ ಮನಸ್ಥಿತಿಯನ್ನು ಖಂಡಿಸಿ ಕಪ್ಪು ಪಟ್ಟಿ ಧರಿಸಿ ಗಾಂಧಿ ವೃತ್ತದವರೆಗೆ ಪ್ರತಿಭಟನೆ ನಡೆಸಲಾಗಿದೆ ಎಂದರು. ಕೂಡಲೇ ಕೇಂದ್ರ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಇದನ್ನು ಜನಾಂದೋಲನವಾಗಿ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಮಾಜಿ ಸಚಿವ ಹಾಲಪ್ಪಾಚಾರ ಅವರು ನರೇಗಾ ಯೋಜನೆ ಕುರಿತು ಮಾತನಾಡುವ ಮೊದಲು ತಾವು ಶಾಸಕರಾಗಿದ್ದಾಗ ಮತ್ತು ಸಚಿವರಾಗಿದ್ದಾಗ ನಡೆದ ಭ್ರಷ್ಟಾಚಾರದ ವಿವರಗಳನ್ನು ಜನರಿಗೆ ತಿಳಿಸಬೇಕು ಎಂದು ಜ್ಯೋತಿ ಗೊಂಡಬಾಳ ಪ್ರಶ್ನಿಸಿದರು.

ಮಹಾತ್ಮ ಗಾಂಧಿ ಹೆಸರನ್ನು ತೆಗೆದು ‘ವಿಬಿ ಜಿ ರಾಮ್‌ ಜಿ’ ಎಂದು ಕರೆಯುತ್ತಿರುವುದು ಶ್ರೀರಾಮನ ಹೆಸರಲ್ಲ, ಕೇವಲ ಸಂಕ್ಷಿಪ್ತ ರೂಪ ಮಾತ್ರ. ಜನರು ಭ್ರಮೆಗೆ ಒಳಗಾಗಬಾರದು ಎಂದು ಎಚ್ಚರಿಸಿದರು.

ಕೆಪಿಸಿಸಿ ವಕ್ತಾರೆ ಶೈಲಜಾ ಹಿರೇಮಠ ಮಾತನಾಡಿ, ಮಹಾತ್ಮ ಗಾಂಧಿ ಕಂಡ ಕನಸು ನನಸಾಗಲು ಗ್ರಾಮೀಣ ಜನರ ಜೀವನ ಸುಧಾರಿಸಬೇಕು. ನರೇಗಾ ಯೋಜನೆ ಮೊದಲಿನಂತೆಯೇ ಇರಬೇಕು. ಹೊಸ ಯೋಜನೆ ಅಧಿಕಾರ ಕೇಂದ್ರೀಕರಣದ ಮೂಲಕ ಗುತ್ತಿಗೆದಾರರು ಹಾಗೂ ದೊಡ್ಡ ಬಂಡವಾಳಶಾಹಿಗಳಿಗೆ ಲಾಭ ಮಾಡಿಕೊಡುವ ಷಡ್ಯಂತ್ರವಾಗಿದೆ ಎಂದು ಟೀಕಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಬರೆದ ಮನವಿಯನ್ನು ಗ್ರೇಡ್–2 ತಹಶೀಲ್ದಾರ ಗವಿಸಿದ್ದಪ್ಪ ಮಣ್ಣೂರ ಅವರು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಕಿಶೋರಿ ಬೂದನೂರ, ಆಯೆಷಾ ಖಾನಂ, ಮಂಜುನಾಥ ಗೊಂಡಬಾಳ, ಯಾದವ ರವಿ ಕುರಗೋಡ, ಹೊನ್ನೂರಸಾಬ ಭೈರಾಪೂರ, ಸಲೀಂ ಅಳವಂಡಿ, ಪದ್ಮಾವತಿ ಕಂಬಳಿ, ಸುಮಂಗಲಾ ನಾಯಕ, ಮಲ್ಲಿಕಾರ್ಜುನ ಪೂಜಾರ, ಗಂಗಮ್ಮ ಚಿಕೇನಕೊಪ್ಪ, ಯಶೋಧಾ ಮರಡಿ, ಚನ್ನಮ್ಮ, ಶಿಲ್ಪಾ ಗುಡ್ಲಾನೂರ, ಸಾವಿತ್ರಿ ಗೊಲ್ಲರ, ಶರಣಮ್ಮ ಪೂಜಾರ, ಅಂಜಲಿ, ರೇಖಾ, ಶ್ರೀನಿವಾಸ ಪಂಡಿತ, ಸೈಯದ್ ನಾಸಿರುದ್ದೀನ್, ಮೌನೇಶ ವಡ್ಡಟ್ಟಿ, ಹನುಮೇಶ ಬೆಣ್ಣಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags

NREGAMahatma GandhiProtestsCongressKoppala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X