ಕೊಪ್ಪಳ | ಎರಡು ಬೈಕ್ಗಳು ಮುಖಾಮುಖಿ ಢಿಕ್ಕಿ : ಇಬ್ಬರು ಮೃತ್ಯು

ಕೊಪ್ಪಳ-ಕುಕನೂರು: ಎರಡು ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಕನೂರು ತಾಲೂಕಿನ ಬನಾಪುರ ಕ್ರಾಸ್ ಬಳಿ ನಡೆದಿದೆ.
ಮೃತರನ್ನು ಭಾನಾಪುರ ಗ್ರಾಮದ ಶ್ರೀಶೈಲ್ ಹಿರೇಮಠ (30) ಹಾಗೂ ಕೊಪ್ಪಳ ತಾಲೂಕಿನ ಹ್ಯಾಪಿ ಮುಂಡರಗಿ ಗ್ರಾಮದ ಮಾರುತಿ ಶಿವಪ್ಪನವರ (50) ಎಂದು ಗುರುತಿಸಲಾಗಿದೆ.
ಭಾನಾಪುರದ ಕಾವೇರಿ ಪೆಟ್ರೋಲ್ ಬಂಕ್ ಎದುರು ಈ ಘಟನೆ ಸಂಭವಿಸಿದೆ.
ಘಟನೆಯ ವಿವರ :
ಮಾರುತಿ ಶಿವಪ್ಪನವರ ಅವರು ಕೊಪ್ಪಳದಿಂದ ಕುಕನೂರು ಕಡೆಗೆ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದರೆ, ಶ್ರೀಶೈಲ್ ಹಿರೇಮಠ ಅವರು ಭಾನಾಪುರದಿಂದ ಕಾವೇರಿ ಪೆಟ್ರೋಲ್ ಬಂಕ್ ದಿಕ್ಕಿಗೆ (ರಾಂಗ್ ಸೈಡ್) ಬೈಕ್ ಚಲಾಯಿಸಿಕೊಂಡು ಬಂದಿದ್ದಾರೆ ಎನ್ನಲಾಗಿದೆ. ಈ ವೇಳೆ ಎರಡೂ ಬೈಕ್ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಯಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಅಪಘಾತದಲ್ಲಿ ಹಿಂಬದಿ ಸವಾರರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಕುಕನೂರು ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.





