ಕನಕಗಿರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಆಚರಣೆ

ಕನಕಗಿರಿ: ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಪಟ್ಟಣ ಪಂಚಾಯತ್ ಕಾರ್ಯಾಲಯದಲ್ಲಿ ಗುರುವಾರ ಭಕ್ತಿಪೂರ್ವಕವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಲಕ್ಷ್ಮಣ್ ಕಟ್ಟಿಮನಿ ಅವರು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು.
ನಂತರ ಮಾತನಾಡಿದ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರವಾಗಿದೆ. ಶಿಕ್ಷಣ, ನೀರಾವರಿ, ಕೈಗಾರಿಕೆ ಸೇರಿದಂತೆ ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಅವರು ಭದ್ರ ಬುನಾದಿ ಹಾಕಿಕೊಟ್ಟ ಮಹಾನ್ ಆಡಳಿತಗಾರರಾಗಿದ್ದರು ಎಂದು ಸ್ಮರಿಸಿದರು.
ಈ ಸಂದರ್ಭದಲ್ಲಿ ಪ.ಪಂ ಸದಸ್ಯ ಸುರೇಶ ಗುಗ್ಗಳಶೇಟ್ರ, ಕಿರ್ತೀಸೋನಿ,ಕಂದಾಯ ನಿರೀಕ್ಷಕ ಕನಕಪ್ಪ ನಾಯಕ, ಆಂಜೀನಯ್ಯ, ವಿಜಯ ಗಡದ, ಪ್ರಕಾಶ ಮಹಿಪತಿ, ಸಿಬ್ಬಂದಿಗಳಾದ ಪರುಶುರಾಮ, ಹರೀಶ, ಬುಡಾನ್, ಶರಣು ಇದ್ದರು.
Next Story




