Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. Kuknoor | ಚಾಲಕನ ನಿಯಂತ್ರಣ ತಪ್ಪಿ...

Kuknoor | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಸಾರಿಗೆ ಬಸ್ : ಆರು ಪ್ರಯಾಣಿಕರಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ19 Aug 2026 6:40 PM IST
share
Kuknoor | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಸಾರಿಗೆ ಬಸ್ : ಆರು ಪ್ರಯಾಣಿಕರಿಗೆ ಗಾಯ
ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ರವಾನೆ

ಕುಕನೂರು: ಚಾಲಕನ ನಿಯಂತ್ರಣ ತಪ್ಪಿದ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ವೊಂದು ರಸ್ತೆ ಬದಿಯ ಹಳ್ಳಕ್ಕೆ ಇಳಿದ ಪರಿಣಾಮ ಆರು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಮಂಡಲಗಿರಿ ಗ್ರಾಮದ ಸಮೀಪ ಬುಧವಾರ ಮಧ್ಯಾಹ್ನ ನಡೆದಿದೆ.

ಗದಗದಿಂದ ಕುಕನೂರಿಗೆ ಬರುತ್ತಿದ್ದ ಬಸ್‌ ಬಟಪ್ಪನಹಳ್ಳಿ–ಮಂಡಲಗಿರಿ ಮಾರ್ಗದಲ್ಲಿ ಸಂಚರಿಸುತ್ತಿತ್ತು. ಮಂಡಲಗಿರಿ ಗ್ರಾಮದ ಕೆರೆ ಸಮೀಪದ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಬಸ್‌ ರಸ್ತೆ ಬದಿಯ ಹಳ್ಳಕ್ಕೆ ಇಳಿದಿದೆ.

ಬಸ್‌ನಲ್ಲಿ ಸುಮಾರು 40ರಿಂದ 50 ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಘಟನೆಯ ರಭಸಕ್ಕೆ ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆರು ಮಂದಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಾಗಿದ್ದು, ಗಾಯಾಳುಗಳನ್ನು ಕುಕನೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಬಳಿಕ ಆರು ಮಂದಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಯಿತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಅಪಘಾತದ ಸುದ್ದಿ ತಿಳಿದು ಕುಕನೂರು ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಪಿ. ನಾಯಕ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳ ಆರೋಗ್ಯ ವಿಚಾರಿಸಿ, ಪ್ರಯಾಣಿಕರಿಂದ ಮಾಹಿತಿ ಪಡೆದರು. ಅಪಘಾತಕ್ಕೆ ನಿಖರ ಕಾರಣ ತಿಳಿಯಲು ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.

ಬಸ್‌ಗಳ ತಾಂತ್ರಿಕ ಪರಿಶೀಲನೆಗೆ ಆಗ್ರಹ :

ಘಟನೆಯ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ಬಸ್‌ಗಳ ತಾಂತ್ರಿಕ ಸ್ಥಿತಿಯನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಹಳೆಯ ಅಥವಾ ದೋಷಪೂರಿತ ಬಸ್‌ಗಳನ್ನು ಸಂಚಾರಕ್ಕೆ ಬಿಡುವುದರಿಂದ ಪ್ರಯಾಣಿಕರ ಜೀವಕ್ಕೆ ಅಪಾಯ ಎದುರಾಗಬಹುದು. ಸ್ಟೇರಿಂಗ್, ಬ್ರೇಕ್, ಟೈರ್ ಸೇರಿದಂತೆ ಪ್ರಮುಖ ತಾಂತ್ರಿಕ ವ್ಯವಸ್ಥೆಗಳನ್ನು ಪರಿಶೀಲಿಸಿದ ಬಳಿಕವೇ ಬಸ್‌ಗಳನ್ನು ಮಾರ್ಗಕ್ಕೆ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ಘಟನಾ ಸ್ಥಳ ಪರಿಶೀಲಿಸಿದಾಗ ಚಾಲಕನ ನಿರ್ಲಕ್ಷ್ಯ ಮೇಲ್ನೋಟಕ್ಕೆ ಕಂಡುಬಂದಿದೆ. ಮುಂದಿನ ಹಂತದ ವಿಚಾರಣೆ ಹಾಗೂ ತನಿಖೆಯಿಂದ ಅಪಘಾತದ ನಿಖರ ಕಾರಣ ತಿಳಿಯಲಿದೆ.

-ಮಂಜುನಾಥ, ಕುಕನೂರು ಸಾರಿಗೆ ಘಟಕದ ಅಧಿಕಾರಿ

ಬಟಪ್ಪನಹಳ್ಳಿಯಿಂದ ಕುಕನೂರು ಕಡೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದೆ. ಸೀಟಿನಲ್ಲಿ ಕುಳಿತಿದ್ದ ನಮಗೆ ಏನಾಗುತ್ತಿದೆ ಎನ್ನುವಷ್ಟರಲ್ಲಿ ಬಸ್‌ ಹಳ್ಳಕ್ಕೆ ಇಳಿಯಿತು. ನನಗೂ ತಲೆಗೆ ಗಾಯವಾಗಿದೆ. ಬಸ್‌ ಏಕಾಏಕಿ ರಭಸವಾಗಿ ಚಲಿಸಿದಂತಾಯಿತು. ಬಳಿಕ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿಯಿತು. ಚಾಲಕನ ನಿರ್ಲಕ್ಷ್ಯವೋ ಅಥವಾ ಬಸ್‌ನ ತಾಂತ್ರಿಕ ದೋಷವೋ ಎಂಬುದು ತನಿಖೆಯಿಂದ ತಿಳಿಯಬೇಕು.

-ಶರಣಬಸಪ್ಪ ದಾನಕೈ, ಪ್ರಯಾಣಿಕ

Tags

BusKuknoor
share
ವಾರ್ತಾಭಾರತಿ
ವಾರ್ತಾಭಾರತಿ
Next Story
X