Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕುಷ್ಟಗಿ | ಹನುಮಸಾಗರದಲ್ಲಿ ಸಂಭ್ರಮದ...

ಕುಷ್ಟಗಿ | ಹನುಮಸಾಗರದಲ್ಲಿ ಸಂಭ್ರಮದ 'ಕಲಿಕಾ ಹಬ್ಬ'ಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ9 Jan 2026 9:48 PM IST
share
ಕುಷ್ಟಗಿ | ಹನುಮಸಾಗರದಲ್ಲಿ ಸಂಭ್ರಮದ ಕಲಿಕಾ ಹಬ್ಬಕ್ಕೆ ಚಾಲನೆ

ಕುಷ್ಟಗಿ : ಮಕ್ಕಳಿಗೆ ಪಠ್ಯಾಭ್ಯಾಸದ ಜೊತೆಗೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಂಡು ಕಲಿಕೆಯಲ್ಲಿ ಆಸಕ್ತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಹನುಮಸಾಗರ ಗ್ರಾಮ ಪಂಚಾಯಿತಿ ಅಧ್ಯಕ್ಷ ರುದ್ರಗೌಡ ಗೌಡಪ್ಪನವರ ಹೇಳಿದರು.

ಪಟ್ಟಣದ ಬಾಲಕಿಯರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಹನುಮಸಾಗರ ಕ್ಲಸ್ಟರ್ ಮಟ್ಟದ ಎಫ್.ಎಲ್.ಎನ್. (ಬುನಾದಿ ಸಾಕ್ಷರತೆ ಮತ್ತು ಸಂಖ್ಯಾ ಜ್ಞಾನ) ಕಲಿಕಾ ಹಬ್ಬವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದಿನ ಸಮಾಜದ ಮನಸ್ಥಿತಿಯ ಕುರಿತು ಆತಂಕ ವ್ಯಕ್ತಪಡಿಸಿದ ಅವರು, ಓದದೇ ಉತ್ತೀರ್ಣರಾಗಬೇಕು, ದುಡಿಯದೇ ಹಣ ಗಳಿಸಬೇಕು ಎಂಬ ತಪ್ಪು ಮನೋಭಾವ ಸಮಾಜದಲ್ಲಿ ಬೆಳೆಯುತ್ತಿದೆ. ಆದರೆ, ಮಕ್ಕಳು ನಿರಂತರ ಅಭ್ಯಾಸ ಮತ್ತು ಕಠಿಣ ಶ್ರಮವನ್ನು ಮೈಗೂಡಿಸಿಕೊಂಡರೆ ಉನ್ನತ ಹುದ್ದೆಗಳು ತಾವಾಗಿಯೇ ಹುಡುಕಿ ಬರುತ್ತವೆ ಎಂದು ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು.

ಸಿಆರ್‌ಪಿ ಲೆಂಕಪ್ಪ ವಾಲಿಕಾರ ಮಾತನಾಡಿ, ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾ ಜ್ಞಾನವನ್ನು ಬಲಪಡಿಸಲು ಈ ಕಲಿಕಾ ಹಬ್ಬ ಪೂರಕವಾಗಿದೆ. ಇಲ್ಲಿ ಕಥೆ ಹೇಳುವುದು, ಗಣಿತ ಚಟುವಟಿಕೆ, ಪರಿಸರ ಜಾಗೃತಿಯ ಛದ್ಮವೇಷ, ಪಾತ್ರಾಭಿನಯ ಸೇರಿದಂತೆ ಏಳು ಪ್ರಮುಖ ವಿಭಾಗಗಳಲ್ಲಿ ಒಟ್ಟು 70 ಚಟುವಟಿಕೆಗಳನ್ನು ನಡೆಸಲಾಗುವುದು. ವಿಜೇತ ಮಕ್ಕಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಗುವುದು ಎಂದು ವಿವರ ನೀಡಿದರು.

ಕಾರ್ಯಕ್ರಮದಲ್ಲಿ ಕೆಪಿಎಸ್ ಉಪಾಧ್ಯಕ್ಷ ಬಸವರಾಜ ದ್ಯಾವಣ್ಣನವರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಗೌರಮ್ಮ ತಳವಾರ ಹಾಗೂ ಉಮಾ ನಾಗೂರ, ತಾಲೂಕು ಉಪಾಧ್ಯಕ್ಷ ಯಲ್ಲನಗೌಡ ಪಾಟೀಲ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ಮಲ್ಲಪ್ಪ ಕುಂಬಾರ, ಗಂಗಾಧರಪ್ಪ, ಬಸಪ್ಪ ಬಂಡಿವಡ್ಡರ, ಭಾರತಿ ದೇಸಾಯಿ, ಮೈಬೂಬ ಬಾಗವಾನ, ಚಂದಪ್ಪ ಹಕ್ಕಿ, ಸದಾಶಿವಯ್ಯ ಹಿರೇಮಠ, ಬಸವರಾಜ ವಡ್ಡರ, ಮೈಬೂಬ ಮೇಣೆದಾಳ, ರಾಜಕುಮಾರ ನಾಯಕ, ಮೈಬೂಬಸಾಬ ಕಂದಗಲ್, ಅಶೋಕ ಕಟ್ಟಿಮನಿ, ಮುಖಂಡ ಮುದಿಯಪ್ಪ ವಾಲ್ಮೀಕಿ ಸೇರಿದಂತೆ ಹನುಮಸಾಗರ ಕ್ಲಸ್ಟರ್ ವ್ಯಾಪ್ತಿಯ 11 ಶಾಲೆಗಳ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.




Tags

HanumasagarfestivalKushtagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X