Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕುಷ್ಟಗಿ | ಪಿಎಂ ವಿಶ್ವಕರ್ಮ ಯೋಜನೆ ಕಿಟ್...

ಕುಷ್ಟಗಿ | ಪಿಎಂ ವಿಶ್ವಕರ್ಮ ಯೋಜನೆ ಕಿಟ್ ವಿತರಣೆಯಲ್ಲಿ ಅವ್ಯವಸ್ಥೆ ಆರೋಪ : ಯುವಕರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ12 Jan 2026 6:14 PM IST
share
ಕುಷ್ಟಗಿ | ಪಿಎಂ ವಿಶ್ವಕರ್ಮ ಯೋಜನೆ ಕಿಟ್ ವಿತರಣೆಯಲ್ಲಿ ಅವ್ಯವಸ್ಥೆ ಆರೋಪ : ಯುವಕರಿಂದ ಪ್ರತಿಭಟನೆ

ಕುಷ್ಟಗಿ : ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಅಡಿಯಲ್ಲಿ ವಿತರಿಸಬೇಕಾದ 15,000 ರೂ. ಮೌಲ್ಯದ ಕಟಿಂಗ್ (ಸಲೂನ್) ಕಿಟ್ ವಿತರಣೆಯಲ್ಲಿ ಭಾರೀ ಅವ್ಯವಸ್ಥೆ ನಡೆದಿದೆ ಎಂದು ಆರೋಪಿಸಿ, ಕಟಿಂಗ್ ಸಲೂನ್ ಹಾಗೂ ಹಡಪದ ಸಮುದಾಯದ ಯುವಕರು ಸೋಮವಾರ ಹನುಮಸಾಗರ ಪೋಸ್ಟ್ ಆಫೀಸ್ ಮುಂದೆ ಪ್ರತಿಭಟನೆ ನಡೆಸಿದರು.

ಪಿಎಂ ವಿಶ್ವಕರ್ಮ ಯೋಜನೆಯಡಿ ಆಯ್ಕೆಯಾದ ಲಾಭಾರ್ಥಿಗಳಿಗೆ 15 ದಿನಗಳ ತರಬೇತಿ, ತರಬೇತಿ ಅವಧಿಯಲ್ಲಿ 15,000 ರೂ. ಗೌರವಧನ, ನಂತರ ಸಬ್ಸಿಡಿ ಸಾಲ ಸೌಲಭ್ಯ ಹಾಗೂ 15,000 ರೂ. ಮೌಲ್ಯದ ವೃತ್ತಿ ಸಂಬಂಧಿತ ಕಿಟ್ ವಿತರಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಅದರಂತೆ ಕಟಿಂಗ್ ಕಿಟ್‌ಗಳನ್ನು ಪೋಸ್ಟ್ ಆಫೀಸ್ ಮೂಲಕ ವಿತರಿಸಬೇಕಾಗಿತ್ತು. ಆದರೆ, ಹನುಮಸಾಗರ ಪೋಸ್ಟ್ ಆಫೀಸ್‌ನಲ್ಲಿ ವಿತರಿಸಲಾದ ಕಿಟ್‌ಗಳಲ್ಲಿ ಪೂರ್ಣ ಸಾಮಾನುಗಳೇ ಇಲ್ಲ. ಒಂದು ಕಿಟ್‌ನಲ್ಲಿ ಬರಬೇಕಾದ 15,000 ರೂ. ಮೌಲ್ಯದ ಉಪಕರಣಗಳ ಬದಲು ಕೇವಲ 1,000 ರೂ. ರಿಂದ 1,500 ರೂ. ಮೌಲ್ಯದ ಕೆಲವೇ ಸಾಮಾನುಗಳು ಮಾತ್ರ ದೊರೆತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುರೇಶ ಹಡಪದ, ಭರತ ಹಡಪದ, ರುದ್ರಪ್ಪ ಹೊನ್ನಪ್ಪ ಹಡಪದ, ಮಂಜುನಾಥ ಶಂಕ್ರರಪ್ಪ ಹಡಪದ, ಮಲ್ಲಪ್ಪ ಹಡಪದ, ಶಾಣಪ್ಪ ಹಡಪದ, ವರುಣ ಹಡಪದ ಹಾಗೂ ಯಮನೂರಪ್ಪ ಹಡಪದ ಮಾತನಾಡಿ, ನಿಯಮಾನುಸಾರ ಟ್ರೈನರ್ ಅಥವಾ ಅಧಿಕಾರಿಗಳ ಸಮ್ಮುಖದಲ್ಲೇ ಕಿಟ್‌ನ ಸೀಲ್ ತೆರೆಯಬೇಕು. ಆದರೆ ಇಲ್ಲಿ ನಾವು ಬರುವುದಕ್ಕೂ ಮುಂಚೆಯೇ ಕಿಟ್‌ಗಳನ್ನು ತೆರೆಯಲಾಗಿದ್ದು, ಅಪೂರ್ಣ ಸಾಮಾನುಗಳನ್ನು ವಿತರಿಸಲಾಗಿದೆ. ಕೆಲವರಿಗೆ ಸಂಪೂರ್ಣ ಕಿಟ್ ನೀಡಲಾಗಿದ್ದು, ನಮಗೆ ಮಾತ್ರ ಅಲ್ಪ ಪ್ರಮಾಣದ ಸಾಮಾನುಗಳು ಸಿಕ್ಕಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಪೋಸ್ಟ್ ಆಫೀಸ್ ಅಧಿಕಾರಿಗಳನ್ನು ಪ್ರಶ್ನಿಸಿದಾಗ, “ಮೇಲಿನಿಂದ ಬಂದಿರುವಂತೆ ವಿತರಿಸಲಾಗಿದೆ” ಎಂಬ ಜವಾಬ್ದಾರಿ ತಪ್ಪಿಸುವ ಉತ್ತರ ನೀಡುತ್ತಿದ್ದಾರೆ. ಯಾವುದೇ ಸ್ಪಷ್ಟ ಮಾಹಿತಿ ನೀಡದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.


Tags

KushtagiPM Vishwakarma Yojanaprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X