Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ನರೇಗಾ ನೌಕರರಿಗೆ ಸೇವಾ ಭದ್ರತೆ ಒದಗಿಸಿ:...

ನರೇಗಾ ನೌಕರರಿಗೆ ಸೇವಾ ಭದ್ರತೆ ಒದಗಿಸಿ: ಶಾಸಕ ಬಸವರಾಜ ರಾಯರೆಡ್ಡಿಗೆ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ ಮನವಿ

ವಾರ್ತಾಭಾರತಿವಾರ್ತಾಭಾರತಿ20 Jan 2026 7:44 PM IST
share
ನರೇಗಾ ನೌಕರರಿಗೆ ಸೇವಾ ಭದ್ರತೆ ಒದಗಿಸಿ: ಶಾಸಕ ಬಸವರಾಜ ರಾಯರೆಡ್ಡಿಗೆ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘ ಮನವಿ

ಯಲಬುರ್ಗಾ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಸೇವಾ ಭದ್ರತೆ ಕಲ್ಪಿಸುವ ಕುರಿತು ವಿಧಾನಸಭೆಯಲ್ಲಿ ಚರ್ಚೆ ನಡೆಸಬೇಕೆಂದು ಮಹಾತ್ಮ ಗಾಂಧಿ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘವು ಮಾನ್ಯ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಶಾಸಕರಾದ ಬಸವರಾಜ ರಾಯರೆಡ್ಡಿ ಅವರಿಗೆ ಮನವಿ ಸಲ್ಲಿಸಿದೆ.

ಯಲಬುರ್ಗಾ ತಾಲೂಕಿನ ಕಲ್ಲೂರ ಗ್ರಾಮದಲ್ಲಿ ನರೇಗಾ ನೌಕರರು ಶಾಸಕರನ್ನು ಭೇಟಿ ಮಾಡಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು. ಮನವಿಯಲ್ಲಿ ರಾಜ್ಯದಾದ್ಯಂತ ಸುಮಾರು 5 ಸಾವಿರಕ್ಕೂ ಅಧಿಕ ನರೇಗಾ ಸಿಬ್ಬಂದಿ ವಿವಿಧ ಹಂತಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಸೇವಾ ಭದ್ರತೆ ಇಲ್ಲದ ಕಾರಣ ಅವರ ಕುಟುಂಬಗಳು ತೀವ್ರ ಅಸುರಕ್ಷಿತ ಸ್ಥಿತಿಯನ್ನು ಎದುರಿಸುತ್ತಿವೆ ಎಂದು ಉಲ್ಲೇಖಿಸಲಾಗಿದೆ.

ಕಳೆದ ಹಲವಾರು ವರ್ಷಗಳಿಂದ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಶ್ರಮಿಸುತ್ತಿದ್ದರೂ, ಸಮಯಕ್ಕೆ ಸರಿಯಾಗಿ ವೇತನ ಪಾವತಿ ಆಗದಿರುವುದು ಸಿಬ್ಬಂದಿಗೆ ದೊಡ್ಡ ಸಮಸ್ಯೆಯಾಗಿದ್ದು, ಕುಟುಂಬ ನಿರ್ವಹಣೆ, ವೈದ್ಯಕೀಯ ವೆಚ್ಚ, ಸಾಲಗಳ ಇಎಂಐ ಮರುಪಾವತಿ, ಮಕ್ಕಳ ಶಾಲಾ–ಕಾಲೇಜು ಶುಲ್ಕ ಸೇರಿದಂತೆ ಮೂಲಭೂತ ಅಗತ್ಯಗಳನ್ನು ಪೂರೈಸಲು ತೀವ್ರ ಸಂಕಷ್ಟ ಎದುರಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಬಸವರಾಜ ರಾಯರಡ್ಡಿ, ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿ ಆಗಿರುವ ಬದಲಾವಣೆಗಳ ಕುರಿತು ಸಮಗ್ರ ಚರ್ಚೆ ನಡೆಸಲು ಮುಖ್ಯಮಂತ್ರಿಗಳು ಅಧಿವೇಶನ ಕರೆದಿದ್ದಾರೆ ಎಂದು ತಿಳಿಸಿದರು. ಜನವರಿ 22 ರಿಂದ 31ರವರೆಗೆ ನಡೆಯಲಿರುವ ಅಧಿವೇಶನದಲ್ಲಿ ನೌಕರರು ಹಾಗೂ ಕೂಲಿಕಾರರ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ ನಡೆಯಲಿದ್ದು, ನರೇಗಾ ನೌಕರರ ಬೇಡಿಕೆಗಳನ್ನೂ ಸದನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ನರೇಗಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷ ವಿಜಯಕುಮಾರ್‌ ಬಳಿಗಾರ, ಯಲಬುರ್ಗಾ–ಕುಕನೂರ ತಾಲೂಕಿನ ತಾಂತ್ರಿಕ ಸಂಯೋಜಕರಾದ ಸಂತೋಷ ನಂದಾಪುರ, ಸುರೇಶ್‌ ದೇಸಾಯಿ, ಎಂಐಎಸ್ ಸಂಯೋಜಕ ಗಿರೀಶ್, ಐಇಸಿ ಸಂಯೋಜಕರಾದ ಲಕ್ಷ್ಮಣ ಕೆರಳ್ಳಿ, ಶರಣಪ್ಪ ಹಾಳಕೇರಿ, ತಾಂತ್ರಿಕ ಸಹಾಯಕರಾದ ರಮೇಶ ಹಿರೇಮನಿ, ಕಿರಣಕುಮಾರ್‌, ನಾಗರಾಜ ಹಳ್ಳಿ, ಹುಸೇನ್ ಪಾಷಾ, ಸಂಗಮೇಶ, ಚೇತನ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

NREGAMLABasavaraj Rayareddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X