Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಗ್ಯಾರಂಟಿ ಯೋಜನೆಗಳಲ್ಲಿ ಲೋಪಗಳಿವೆ;...

ಗ್ಯಾರಂಟಿ ಯೋಜನೆಗಳಲ್ಲಿ ಲೋಪಗಳಿವೆ; ಪರಿಷ್ಕರಣೆ ಅಗತ್ಯ: ಶಾಸಕ ಬಸವರಾಜ್ ರಾಯರೆಡ್ಡಿ

ವಾರ್ತಾಭಾರತಿವಾರ್ತಾಭಾರತಿ2 July 2026 7:05 PM IST
share
ಗ್ಯಾರಂಟಿ ಯೋಜನೆಗಳಲ್ಲಿ ಲೋಪಗಳಿವೆ; ಪರಿಷ್ಕರಣೆ ಅಗತ್ಯ: ಶಾಸಕ ಬಸವರಾಜ್ ರಾಯರೆಡ್ಡಿ

ಯಲಬುರ್ಗಾ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಕೆಲವು ಆಡಳಿತಾತ್ಮಕ ಹಾಗೂ ತಾಂತ್ರಿಕ ಲೋಪಗಳಿರುವುದನ್ನು ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಒಪ್ಪಿಕೊಂಡಿದ್ದಾರೆ.

ಗುರುವಾರ ಯಲಬುರ್ಗಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ಅಂದಮೇಲೆ ಕೆಲವು ನ್ಯೂನತೆಗಳು ಇರುವುದು ಸಹಜ. ಅವುಗಳನ್ನು ಸರಿಪಡಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ” ಎಂದು ಹೇಳಿದರು.

ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದಲ್ಲಿ 1.26 ಕೋಟಿ ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ಹಣ ಪಾವತಿಸಬೇಕಿದ್ದು, ದಾಖಲೆಗಳಲ್ಲಿನ ದೋಷಗಳು ಹಾಗೂ ತಾಂತ್ರಿಕ ಕಾರಣಗಳಿಂದಾಗಿ ಪ್ರಸ್ತುತ 1.24 ಕೋಟಿ ಮಹಿಳೆಯರಿಗೆ ಮಾತ್ರ ಹಣ ತಲುಪುತ್ತಿದೆ. ಸುಮಾರು 2 ಲಕ್ಷ ಅರ್ಹ ಫಲಾನುಭವಿಗಳಿಗೆ ಇನ್ನೂ ಹಣ ಜಮೆಯಾಗಿಲ್ಲ ಎಂದು ತಿಳಿಸಿದರು.

ಗೃಹಜ್ಯೋತಿ ಯೋಜನೆಯಡಿ ಸುಮಾರು 1.68 ಕೋಟಿ ಕುಟುಂಬಗಳಿಗೆ ಉಚಿತ ವಿದ್ಯುತ್ ಸೌಲಭ್ಯ ದೊರೆಯುತ್ತಿದ್ದು, ಕೆಲವು ಅನರ್ಹರು ಹಾಗೂ ಸರ್ಕಾರಿ ನೌಕರರ ಮನೆಗಳಿಗೂ ಯೋಜನೆಯ ಲಾಭ ದೊರೆಯುತ್ತಿರುವುದು ಗಮನಕ್ಕೆ ಬಂದಿದೆ. ಆದ್ದರಿಂದ ಅರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪರಿಷ್ಕರಣೆ ಅಗತ್ಯವಾಗಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಮುಂದುವರಿಕೆಗೆ ಕಾಂಗ್ರೆಸ್ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಸ್ಪಷ್ಟಪಡಿಸಿದ ಅವರು, ಈ ಯೋಜನೆಗಳಿಗೆ ಸರ್ಕಾರ ವರ್ಷಕ್ಕೆ ಸುಮಾರು 52 ಸಾವಿರ ಕೋಟಿ ರೂ. ವೆಚ್ಚ ಮಾಡುತ್ತಿದೆ ಎಂದರು.

“ಯಾರೇ ಮುಖ್ಯಮಂತ್ರಿ ಆದರೂ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುವುದಿಲ್ಲ. ಇದು ಯಾವುದೇ ವ್ಯಕ್ತಿಯ ವೈಯಕ್ತಿಕ ಕಾರ್ಯಕ್ರಮವಲ್ಲ, ಕಾಂಗ್ರೆಸ್ ಪಕ್ಷದ ಬದ್ಧತೆಯ ಕಾರ್ಯಕ್ರಮವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೂ ಈ ಯೋಜನೆಗಳನ್ನು ಮುಂದುವರಿಸುವ ಬದ್ಧತೆ ಇದೆ” ಎಂದು ಹೇಳಿದರು.

ಪ್ರತಿ ತಿಂಗಳು ಸುಮಾರು 2,500 ಕೋಟಿ ರೂ. ಹಣವನ್ನು ಭ್ರಷ್ಟಾಚಾರ ರಹಿತವಾಗಿ ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುತ್ತಿದೆ. ಆದರೆ ಕೆಲವು ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗಳಿಗೆ ಹಣ ಜಮೆಯಾಗುತ್ತಿರುವುದು ಹಾಗೂ ಅನರ್ಹರು ಯೋಜನೆಗಳ ಲಾಭ ಪಡೆಯುತ್ತಿರುವುದು ಪರಿಷ್ಕರಣೆ ವೇಳೆ ಪತ್ತೆಯಾಗಿದ್ದು, ಅವುಗಳನ್ನು ಸರಿಪಡಿಸುವ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದರು.

Tags

Basavaraj Rayareddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X