Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕೊಪ್ಪಳ
  4. ಕಕ್ಕಿಹಳ್ಳಿಯಲ್ಲಿ ಜೂ.21ರಂದು...

ಕಕ್ಕಿಹಳ್ಳಿಯಲ್ಲಿ ಜೂ.21ರಂದು ಸಾಂವಿಧಾನಿಕ ಮೌಲ್ಯಗಳು, ಭ್ರಾತೃತ್ವ ಕುರಿತು ಯುವಜನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ17 Jun 2026 6:10 PM IST
share
ಕಕ್ಕಿಹಳ್ಳಿಯಲ್ಲಿ ಜೂ.21ರಂದು ಸಾಂವಿಧಾನಿಕ ಮೌಲ್ಯಗಳು, ಭ್ರಾತೃತ್ವ ಕುರಿತು ಯುವಜನ ಶಿಬಿರ

ಕುಕನೂರ : ವಿದ್ಯಾರ್ಥಿಗಳು ಹಾಗೂ ಯುವಜನರಲ್ಲಿ ಭಾರತದ ಸಂವಿಧಾನದ ಆಶಯಗಳು, ಸಾಂವಿಧಾನಿಕ ಮೌಲ್ಯಗಳು, ಭ್ರಾತೃತ್ವ, ಸಾಮಾಜಿಕ ನ್ಯಾಯ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ “ಸಾಂವಿಧಾನಿಕ ಮೌಲ್ಯಗಳ ಅನುಷ್ಠಾನ ಮತ್ತು ಭ್ರಾತೃತ್ವ ಕುರಿತು ಯುವಕ-ಯುವತಿಯರಿಗಾಗಿ ಯುವಜನ ಶಿಬಿರ”ವನ್ನು ಜೂ.21ರಂದು ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಕಕ್ಕಿಹಳ್ಳಿ ಗ್ರಾಮದ ಸಾರ್ವಜನಿಕ ಗ್ರಂಥಾಲಯದಲ್ಲಿ ಆಯೋಜಿಸಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ವೇದಿಕೆಯ ಸಂಚಾಲಕ ಭೀಮಾಶಂಕರ ಪಾಣೇಗಾಂವ ತಿಳಿಸಿದ್ದಾರೆ.

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಐಡಿವೈಒ (ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ) ಆಶ್ರಯದಲ್ಲಿ ಹಾಗೂ ಸಂವಿಧಾನ ಸಂರಕ್ಷಣಾ ವೇದಿಕೆ ವತಿಯಿಂದ, ಬಳಗೇರಿ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಶಿಬಿರ ನಡೆಯಲಿದೆ ಎಂದು ಹೇಳಿದರು.

ಯುವಜನರಲ್ಲಿ ಸಂವಿಧಾನಿಕ ಮೌಲ್ಯಗಳು, ಪ್ರಜಾಸತ್ತಾತ್ಮಕ ಚಿಂತನೆ, ಭ್ರಾತೃತ್ವ ಮತ್ತು ವೈಜ್ಞಾನಿಕ ಮನೋಭಾವ ಬೆಳೆಸುವ ಉದ್ದೇಶದಿಂದ ವಿವಿಧ ಉಪನ್ಯಾಸಗಳು, ಸಂವಾದಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಿರುಪತಿ ತಲ್ಲೂರ ಸ್ವಾಗತ ಭಾಷಣ ಮಾಡಲಿದ್ದು, ಬಳಗೇರಿ ಗ್ರಾಮ ಆಡಳಿತ ಅಧಿಕಾರಿ ರಾಣಿ ಹಳ್ಳಿ ನಿರೂಪಣೆ ಮಾಡಲಿದ್ದಾರೆ. ಭೀಮಾಶಂಕರ ಪಾಣೇಗಾಂವ ಪ್ರಾಸ್ತಾವಿಕ ನುಡಿ ಆಡಲಿದ್ದು, ಪತ್ರಕರ್ತ ಚಂದ್ರು ಆರ್. ಭಾನಾಪುರ ಅವರು ಭಾರತದ ಸಂವಿಧಾನದ ಪೀಠಿಕೆಯ ಸಾಮೂಹಿಕ ವಾಚನಕ್ಕೆ ನೇತೃತ್ವ ವಹಿಸಲಿದ್ದಾರೆ.

ಜಾನಪದ ಗಾಯಕಿ ಗೌರಿ ಗೋನಾಳ ಹಾಗೂ ಕೊಪ್ಪಳ ತಂಡದಿಂದ ಸಂವಿಧಾನ ಜಾಗೃತಿ ಗೀತೆಗಳ ಗಾಯನ ನಡೆಯಲಿದೆ. ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಡಾ.ಜೀವನ್ ಸಾಬ್ ವಾಲಿಕಾರ ಅವರು ಭ್ರಾತೃತ್ವ ಕುರಿತು ಸಂವಾದ ಮತ್ತು ಗುಂಪು ಚಟುವಟಿಕೆಗಳನ್ನು ನಡೆಸಿಕೊಡಲಿದ್ದಾರೆ.

ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಯುವಜನರ ಸಮಸ್ಯೆಗಳು, ಸವಾಲುಗಳು ಮತ್ತು ಪರಿಹಾರಗಳ ಕುರಿತು ಮುಕ್ತ ಚರ್ಚೆ ನಡೆಸಲಿದ್ದಾರೆ. ವೈಜ್ಞಾನಿಕ ಚಿಂತಕ ಆರ್.ವಿ.ಕಾಮನೂರ ಅವರು “ಪವಾಡ ಬಯಲು–ರಹಸ್ಯ” ಕಾರ್ಯಕ್ರಮದ ಮೂಲಕ ವೈಜ್ಞಾನಿಕ ಮನೋಭಾವದ ಕುರಿತು ಜಾಗೃತಿ ಮೂಡಿಸಲಿದ್ದಾರೆ.

ಬಳಿಕ “ಮಾರ್ಚ್ 22” ಚಲನಚಿತ್ರ ಪ್ರದರ್ಶನ ಹಾಗೂ ಕೋಮು ಸೌಹಾರ್ದತೆ ಕುರಿತು ಸಂವಾದವೂ ನಡೆಯಲಿದೆ. ಈಗಾಗಲೇ 40 ರಿಂದ 50 ಯುವಕ-ಯುವತಿಯರು ಶಿಬಿರಕ್ಕೆ ನೋಂದಣಿ ಮಾಡಿಕೊಂಡಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ನಡೆಯುತ್ತಿದೆ ಎಂದು ತಿಳಿಸಿದರು.

ಶಿಬಿರದಲ್ಲಿ ಭಾಗವಹಿಸುವ ಎಲ್ಲರಿಗೂ ಭಾಗವಹಿಸುವಿಕೆಯ ಪ್ರಮಾಣ ಪತ್ರ ವಿತರಿಸಲಾಗುವುದು. ಬಳಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಕ್ಕಿಹಳ್ಳಿ, ಬಳಗೇರಿ, ಕೋನಾಪುರ, ಹರಿಶಂಕರ ಬಂಡಿ ಹಾಗೂ ಚನ್ನಪ್ಪನಹಳ್ಳಿ ಗ್ರಾಮಗಳ ವಿದ್ಯಾರ್ಥಿಗಳು, ಯುವಕರು, ಯುವತಿಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಭೀಮಾಶಂಕರ ಪಾಣೇಗಾಂವ ಮನವಿ ಮಾಡಿದ್ದಾರೆ.

Tags

Kakkihalli
share
ವಾರ್ತಾಭಾರತಿ
ವಾರ್ತಾಭಾರತಿ
Next Story
X