Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸಾಬರಮತಿಯ ಮಹಾನ್ ಸಂತ ಮಹಾತ್ಮಾ ಗಾಂಧಿಯ...

ಸಾಬರಮತಿಯ ಮಹಾನ್ ಸಂತ ಮಹಾತ್ಮಾ ಗಾಂಧಿಯ ವಿಜಯಪುರ ಭೇಟಿ

ಖಾಜಾಮೈನುದ್ದೀನ್ ಪಟೇಲ್ಖಾಜಾಮೈನುದ್ದೀನ್ ಪಟೇಲ್5 Jan 2026 1:55 PM IST
share
ಸಾಬರಮತಿಯ ಮಹಾನ್ ಸಂತ ಮಹಾತ್ಮಾ ಗಾಂಧಿಯ ವಿಜಯಪುರ ಭೇಟಿ

ವಿಜಯಪುರ: ಮಹಾತ್ಮಾ ಗಾಂಧಿ ಹಾಗೂ ಟಿಪ್ಪು ಸುಲ್ತಾನ್ ಬ್ರಿಟಿಷರನ್ನು ಅತ್ಯಂತ ಭಯ ಪಡುವಂತೆ ಮಾಡಿದ ಇಬ್ಬರು ಮಹಾ ನಾಯಕರಾಗಿದ್ದಾರೆ. ಬ್ರಿಟಿಷರು ಮಹಾತ್ಮಾ ಗಾಂಧೀಜಿಯ ಅಹಿಂಸಾತ್ಮಕ ಹೋರಾಟಕ್ಕೆ ಹೆದರಿದರೆ, ಟಿಪ್ಪುಸುಲ್ತಾನರ ಖಡ್ಗಕ್ಕೆ ಹೆದರುತ್ತಿದ್ದರು ಎಂಬ ಮಾತಿದೆ.

ಅಂತಹ ಮಹಾನ್ ನಾಯಕ ಮಹಾತ್ಮಾ ಗಾಂಧೀಜಿ, ಸಾಬರಮತಿಯ ಮಹಾನ್ ಸಂತ ಮಹಾತ್ಮ ಗಾಂಧಿ ಅವರು ವಿಜಯಪುರಕ್ಕೆ ನಾಲ್ಕು ಬಾರಿ ಭೇಟಿ ನೀಡಿ ಇಲ್ಲಿನ ಐತಿಹಾಸಿಕ ಸ್ಮಾರಕ ಗೋಳಗುಮ್ಮಟ ವೀಕ್ಷಿಸಿದ್ದರು.

ಈ ಭಾಗದ ಜನತೆಯಲ್ಲಿ ಸ್ವಾತಂತ್ರ್ಯದ ಕಿಚ್ಚು ಹಚ್ಚಿದ್ದರು. ವಿಜಯಪುರ ಐತಿಹಾಸಿಕ ಗೋಳಗುಮ್ಮಟ ವೀಕ್ಷಣೆ ಮಾಡಿ, ಇಲ್ಲಿನ ಪಿಸುಗುಟ್ಟುವ ಗ್ಯಾಲರಿಯ ಅದ್ಭುತ ತಂತ್ರಜ್ಞಾನ ಕಂಡು ಸಂತೋಷ ವ್ಯಕ್ತಪಡಿಸಿದ್ದರು.

ಪಿತಾಮಹ ಮಹಾತ್ಮಾ ಗಾಂಧಿಯವರು 1918ರ ಮೇ 5, 6ರಂದು ಮೊದಲ ಬಾರಿಗೆ ವಿಜಯಪುರದಲ್ಲಿ ನಡೆದ ಐತಿಹಾಸಿಕ 17ನೆ ಕಾಂಗ್ರೆಸ್ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಎರಡು ದಿನ ಇಲ್ಲೇ ತಂಗಿದ್ದರು. ಹಿರಿಯ ಸ್ವಾತಂತ್ರ್ಯ ಯೋಧ ದಿ. ಕೌಜಲಗಿ ಶ್ರೀನಿವಾಸರಾಯರು ಸ್ವಾಗತ ಸಮಿತಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಉಕ್ಕಿನ ಮನುಷ್ಯ ಸರ್ದಾರ ವಲ್ಲಭಭಾಯಿ ಪಟೇಲರ ಸಹೋದರ ವಿಠಲಬಾಯಿ ಪಟೇಲ ಈ ಸಮಾವೇಶದ ಅಧ್ಯಕ್ಷತೆ ವಹಿಸಿದ್ದರು. ಗಾನಕೋಗಿಲೆ ಎಂದು ಹೆಸರಾಗಿದ್ದ ಸರೋಜಿನಿ ದೇವಿ ನಾಯ್ಡು ಕೂಡ ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದು, ದಿ.ಕೌಜಲಗಿ ಅವರ ಮನೆಯಲ್ಲಿ ತಂಗಿದ್ದರು.

ಈ ಸಮಾವೇಶದಲ್ಲಿ ಗಾಂಧಿ ನೇತೃತ್ವದಲ್ಲಿ ಹಲವು ನಿರ್ಣಯ ಮಂಡನೆಯಾಗಿದ್ದವು. ಭಾರತೀಯ ಸೈನಿಕರ ತರಬೇತಿಗಾಗಿ ಪ್ರತ್ಯೇಕ ಸೈನಿಕ ಶಾಲೆ ಆರಂಭಿಸಬೇಕು, ಬ್ರಿಟಿಷರ ಸರಕಾರದ ಉನ್ನತ ಹುದ್ದೆಗಳು ಭರ್ತಿಗೊಳಿಸುವಾಗ ವರ್ಣಭೇದವಿಲ್ಲದೆ ಭಾರತೀಯರಿಗೂ ಸಮಾನ ಅವಕಾಶ ನೀಡುವ ಮಹತ್ತರ ನಿರ್ಣಯ ಇದೇ ಸಂದರ್ಭದಲ್ಲಿ ಮಂಡಿಸಿದ್ದರು.

ನಂತರ 1921ರ ಮೇ 28ರಂದು ಸ್ವಾತಂತ್ರ್ಯ ಚಳವಳಿ ಹಾಗೂ ಬಾಲ ಗಂಗಾಧರ ತಿಲಕ್ ಎಂಬ ಹೆಸರಿನಲ್ಲಿ ನಿಧಿ ಸಂಗ್ರಹಿಸುವ ಸಮಯದಲ್ಲಿ ವಿಜಯಪುರಕ್ಕೆ ಗಾಂಧೀಜಿ ಎರಡನೇ ಬಾರಿಗೆ ಭೇಟಿ ನೀಡಿದ್ದರು. ಆಗ ನಗರದ ಐತಿಹಾಸಿಕ ತಾಜ್ ಬಾವಡಿಯ ಬಳಿ ಸುಮಾರು 10,000 ಜನರು ಸೇರಿದ್ದರು. ಈ ಸಮಯದಲ್ಲಿ ಕೆ.ಹನುಮಂತರಾಯ, ಕಾರ್ನಾಡ್ ಸದಾಶಿವ ರಾವ್, ಆರ್.ಆರ್ ದಿವಾಕರ, ಸಂಸದ ನಕ್ಕರ್ಣಿ ಮತ್ತು ಕರ್ನಾಟಕದ ಹಲವಾರು ಸ್ವಾತಂತ್ರ್ಯ ಹೋರಾಟಗಾರರು ಪಾಲ್ಗೊಂಡಿದ್ದರು.

ಗಾಂಧೀಜಿ 1927 ಫೆ. 19ರಂದು ಖಾದಿ ಪ್ರಚಾರ ಸಮಯದಲ್ಲಿ ವಿಜಯಪುರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಹುಬ್ಬಳ್ಳಿಯಿಂದ ಸೋಲಾಪುರಕ್ಕೆ ತೆರೆದ ವಾಹನದ ಮೂಲಕ ಸಂಚಾರ ನಡೆಸಿದ್ದರು. ಬಾಗಲಕೋಟೆಯಿಂದ ವಿಜಯಪುರಕ್ಕೆ ಬರುವ ಸಮಯದಲ್ಲಿ ಕೊಲಾರದಲ್ಲಿ ಒಂದು ಘಟನೆ ನಡೆಯಿತು. ಕಲ್ಲಿನ ಗಣಿಗಾರಿಕೆ ಕೇಂದ್ರದಲ್ಲಿ ಮಹಿಳೆಯೊಬ್ಬಳು ಬಿಸಿಲಿನಲ್ಲಿ ಜಲ್ಲಿ ಕೆಲಸ ಮಾಡುವುದನ್ನು ಕಂಡು ಗಾಂಧೀಜಿ ವಾಹನ ನಿಲ್ಲಿಸಿ, ಆ ಮಹಿಳೆಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಆಕೆಯ ಕಠಿಣ ಕೆಲಸ ಕಂಡು ತುಂಬಾ ದುಃಖಿತರಾದರು. ಮಹಿಳೆಯರು ಸ್ವತಂತ್ರ ಜೀವನ ನಡೆಸಲು ಅವರಿಗೆ ಚರಕ ನೀಡಬೇಕೆಂಬ ಕಲ್ಪನೆಯನ್ನು ಗಾಂಧೀಜಿ ವ್ಯಕ್ತಪಡಿಸಿದರು. ಇದೇ ಮುಂದೆ ಖಾದಿ ಗ್ರಾಮೋದ್ಯೋಗ ಕೈಗೊಳ್ಳಲು ಪ್ರೇರಣೆಯಾಗುತ್ತದೆ. 1934 ಮಾರ್ಚ್ 8ರಂದು ಗಾಂಧೀಜಿಯವರು ಅಸ್ಪಶ್ಯತೆ ನಿರ್ಮೂಲನೆ ಚಳವಳಿ ಸಂದರ್ಭದಲ್ಲಿ ವಿಜಯಪುರಕ್ಕೆ ಮತ್ತೊಮ್ಮೆ ಭೇಟಿ ನೀಡಿದ್ದರು. ಅದು ಅವರ ಕೊನೆಯ ಭೇಟಿಯಾಗಿತ್ತು.

share
ಖಾಜಾಮೈನುದ್ದೀನ್ ಪಟೇಲ್
ಖಾಜಾಮೈನುದ್ದೀನ್ ಪಟೇಲ್
Next Story
X