Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ದೇವೇಗೌಡ, ಕುಮಾರಸ್ವಾಮಿ, ಮಾದೇಗೌಡ,...

ದೇವೇಗೌಡ, ಕುಮಾರಸ್ವಾಮಿ, ಮಾದೇಗೌಡ, ಅಂಬರೀಶ್ ಬಗ್ಗೆ ಲಘು ಮಾತು: ಮಾಜಿ ಸಂಸದ ಶಿವರಾಮೇಗೌಡರದ್ದು ಎನ್ನಲಾದ ಆಡಿಯೋ ವೈರಲ್

ವಾರ್ತಾಭಾರತಿವಾರ್ತಾಭಾರತಿ28 Jan 2026 7:24 PM IST
share
ದೇವೇಗೌಡ, ಕುಮಾರಸ್ವಾಮಿ, ಮಾದೇಗೌಡ, ಅಂಬರೀಶ್ ಬಗ್ಗೆ ಲಘು ಮಾತು: ಮಾಜಿ ಸಂಸದ ಶಿವರಾಮೇಗೌಡರದ್ದು ಎನ್ನಲಾದ ಆಡಿಯೋ ವೈರಲ್

ಮಂಡ್ಯ: ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಮತ್ತು ಜೆಡಿಎಸ್ ಕಾರ್ಯಕರ್ತನೊಬ್ಬನ ನಡುವೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ. ಅದರಲ್ಲಿ ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ, ಸುರೇಶ್‌ಗೌಡ, ಜಿ.ಮಾದೇಗೌಡ, ಅಂಬರೀಷ್ ಅವರ ಬಗ್ಗೆ ಶಿವರಾಮೇಗೌಡ ಲಘುವಾಗಿ ಮಾತನಾಡಿರುವುದು ಚರ್ಚೆಗೆ ಕಾರಣವಾಗಿದೆ.

ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ದಿವಂಗತ ಮಾಜಿ ಸಂಸದ ಜಿ.ಮಾದೇಗೌಡ ಅವರು ತನಗೆ ರಾಜಕೀಯವಾಗಿ ಯಾವ ರೀತಿಯಲ್ಲಿ ಮೋಸ ಮಾಡಿದರು, ವಂಚಿಸಿದರು ಎಂಬುದರ ಬಗ್ಗೆ ಯುವಕನ ಜತೆ ಮಾತನಾಡುವ ವೇಳೆ ಶಿವರಾಮೇಗೌಡ ಒಮ್ಮೆ ಬಹುವಚನದಲ್ಲಿ, ಮತ್ತೊಮ್ಮೆ ಏಕವಚನದಲ್ಲಿ ಅವಾಚ್ಯ ಪದ ಬಳಸಿದ್ದಾರೆ.

ವೈರಲ್‌ ಆಡಿಯೋದಲ್ಲಿ ಏನಿದೆ?

‘ನಾನು ಈಗ ಕಾಂಗ್ರೆಸ್‌ನಲ್ಲಿದ್ದೇನೆ. ನಾನು ಹುಟ್ಟು ಕಾಂಗ್ರೆಸ್ಸಿಗ, ಇನ್ನು ಮುಂದೆ ಕಾಂಗ್ರೆಸ್ ಬಿಟ್ಟು ಹೋಗುವುದಿಲ್ಲ. ವಿಧಿ ಇಲ್ಲದೆ ಜೆಡಿಎಸ್‌ಗೆ ಹೋಗಿದ್ದೆ, ಬಿಜೆಪಿಗೂ ಹೋಗಬೇಕಾಯಿತು. ಕಾಂಗ್ರೆಸ್‌ನಲ್ಲಿ ಮಾದೇಗೌಡ ಟಿಕೆಟ್ ತಪ್ಪಿಸಿದ, ಅದಕ್ಕೆ ನನಗೂ ಅವನಿಗೂ ಎಕ್ಕಡದಲ್ಲಿ ಹೊಡೆದಾಟವಾಯ್ತು. ಆ ಅಂಬರೀಷ್‌ನನ್ನು ಪಾರ್ಟಿಗೆ ಕರೆದುಕೊಂಡು ಬಂದೆ. ಅವನು ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ಸನ್ನೇ ತೊಳೆದು ಹೊರಟೋದಾ’ ಎಂಬುದಾಗಿ ಶಿವರಾಮೇಗೌಡ ಕಿಡಿಕಾರಿದ್ದಾರೆ.

‘ಸುರೇಶ್‌ಗೌಡನ ಗೆಲ್ಲಿಸಿದೆ, ಅವನು ಒಂದಿನಾನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಮುಂದಿನ ಚುನಾವಣೆಯಲ್ಲಿ ಟಿಕೆಟ್ ಕೊಡ್ತೀನೆಂದು ಹೇಳಿ ಲೋಕಸಭಾ ಉಪಚುನಾವಣೆಯಲ್ಲಿ ನನ್ನನ್ನು ನಿಲ್ಲಿಸಿ 36 ಕೋಟಿ ಖರ್ಚು ಮಾಡಿಸಿದ ಕುಮಾರಸ್ವಾಮಿ, ಗೌಡರ ಮನೆಯಲ್ಲಿ ನಾಯಿ ಇದ್ದಂತೆ ಇದ್ದೆ. ಆದರೆ, ಟಿಕೆಟ್ ತಪ್ಪಿಸಿ ನಿಖಿಲ್ ಕುಮಾರಸ್ವಾಮಿಗೆ ಕೊಟ್ಟರು. ತೊಂದರೆ ಕೊಡ್ತಾನೆ ಎಂದು ಪಕ್ಷದಿಂದಲೇ ಹೊರಹಾಕಿದರು’ ಎಂದು ಅವರು ದೇವೇಗೌಡರ ಕುಟುಂಬದ ಬಗ್ಗೆ ಅವರು ಆಕ್ರೋಶ ಹೊರಹಾಕಿದ್ದಾರೆ.

‘ಇದುವರೆಗೂ ಯಾರ ಹತ್ತಿರಾನೂ ಐದು ರೂಪಾಯಿಗೆ ಕೈಹೊಡ್ಡಿಲ್ಲ. ನಾಗಮಂಗಲದಲ್ಲಿ ಸುರೇಶ್‌ಗೌಡ ಎಷ್ಟು ಲಂಚ ತೆಗೆದುಕೊಳ್ಳುತ್ತಿದ್ದಾನೆ? ಚೆಲುವರಾಯಸ್ವಾಮಿ ಎಷ್ಟು ಲಂಚ ತೆಗೆದುಕೊಳ್ಳುತ್ತಿದ್ದಾನೆ? ಮೊದಲು ತಿಳ್ಕೋ. ಜಮೀನು ಮಂಜೂರು ಮಾಡುವುದಕ್ಕೆ ಸುರೇಶ್‌ಗೌಡ ಒಂದು ಎಕರೆಗೆ 1 ಲಕ್ಷ ಲಂಚ ತೆಗೆದುಕೊಂಡಿದ್ದ’ ಎಂದೂ ಶಿವರಾಮೇಗೌಡ ಆರೋಪಿಸಿದ್ದಾರೆ.

Tags

Deve GowdaKumaraswamyMade GowdaAmbareeshShivaramegowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X