Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಜನಾಂದೋಲನ ರೂಪಿಸಿದರೆ ಮಾತ್ರ ಕನ್ನಡ...

ಜನಾಂದೋಲನ ರೂಪಿಸಿದರೆ ಮಾತ್ರ ಕನ್ನಡ ಶಾಲೆಗಳು ಉಳಿಯಲು ಸಾಧ್ಯ : ಡಾ.ಪುರುಷೋತ್ತಮ ಬಿಳಿಮಲೆ

"ಸರಕಾರಿ ಶಾಲೆಗಳ ಸಬಲೀಕರಣದ ವರದಿ ಮತ್ತೊಮ್ಮೆ ಸರಕಾರಕ್ಕೆ ಸಲ್ಲಿಕೆ"

ವಾರ್ತಾಭಾರತಿವಾರ್ತಾಭಾರತಿ22 Dec 2024 7:14 PM IST
share
ಜನಾಂದೋಲನ ರೂಪಿಸಿದರೆ ಮಾತ್ರ ಕನ್ನಡ ಶಾಲೆಗಳು ಉಳಿಯಲು ಸಾಧ್ಯ : ಡಾ.ಪುರುಷೋತ್ತಮ ಬಿಳಿಮಲೆ

ಮಂಡ್ಯ : ಸಂಘ-ಸಂಸ್ಥೆಗಳು, ಸಾರ್ವಜನಿಕರು ಗೋಕಾಕ್ ಮಾದರಿಯಲ್ಲಿ ಜನಾಂದೋಲನ ರೂಪಿಸಿದರೆ ಮಾತ್ರ ಕನ್ನಡ ಮಾಧ್ಯಮ ಶಾಲೆಗಳು ಉಳಿಯಲು ಸಾಧ್ಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲ ಅಭಿಮತ ವ್ಯಕ್ತಪಡಿಸಿದ್ದಾರೆ.

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ರಾಜಮಾತೆ ಕೆಂಪನಂಜಮಣ್ಣಿ ಮತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಧಾನ ವೇದಿಕೆಯಲ್ಲಿ ರವಿವಾರ ಆಯೋಜಿಸಿದ್ದ "ಸರಕಾರಿ ಕನ್ನಡ ಶಾಲೆಗಳ ಸಬಲೀಕರಣ: ಸಾಧ್ಯತೆ ಮತ್ತು ಸವಾಲುಗಳು" ಗೋಷ್ಠಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರಕಾರಿ ಕನ್ನಡ ಶಾಲೆಗಳನ್ನು ಉಳಿಸಿಕೊಳ್ಳಲು ಜನಾಂದೋಲನ ಆಗಬೇಕು. ಇದರ ಜೊತೆಗೆ ಸರಕಾರಿ ಶಾಲೆಗಳ ಜಮೀನು ಅತಿಕ್ರಮಣದ ವಿರುದ್ಧ ಧ್ವನಿ ಎತ್ತಬೇಕು. ಸರಕಾರಿ ಶಾಲೆಗಳ ಆಟದ ಮೈದಾನ, ಶಾಲೆಗಳ ಜಮೀನು ಒತ್ತುವರಿ ಆಗುತ್ತಿದ್ದು ಶಾಲೆಗಳ ಜಾಗದ ಸಂರಕ್ಷಣೆ ಮಾಡುವ ಕೆಲಸ ಜನಾಂದೋಲನದ ರೂಪದಲ್ಲಿ ಆಗಬೇಕು ಎಂದು ಬಿಳಿಮಲೆ ಹೇಳಿದರು.

ನೂರು ವರ್ಷಗಳು ಕಳೆದರೂ ಎಷ್ಟೋ ಶಾಲೆಗಳಿಗೆ ಹಕ್ಕುಪತ್ರ ಸಿಕ್ಕಿಲ್ಲ. ಕನ್ನಡವನ್ನು ಪುನರ್ ಕಟ್ಟುವ ಶಾಲೆ ಉಳಿಸುವ ಭಾಷೆ ರಕ್ಷಿಸುವ ಹೊಣೆಗಾರಿಕೆ ವಹಿಸಿಕೊಳ್ಳಬೇಕು. ಕರ್ನಾಟಕದಲ್ಲಿ ಜನಸಂಖ್ಯೆ ಇಳಿಮುಖವಾಗುತ್ತಾ ಸಾಗುತ್ತಿರುವುದು ಕೂಡ ಸರಕಾರಿ ಶಾಲೆಗಳಲ್ಲಿನ ಮಕ್ಕಳ ದಾಖಲಾತಿ ಇಳಿಕೆಗೆ ಕಾರಣ. ಜನಸಂಖ್ಯೆ ಹೆಚ್ವಿರುವ ರಾಜ್ಯದ ಜನರು ಕರ್ನಾಟಕದತ್ತ ಬರುತ್ತಿದ್ದು ವಲಸೆ ನಿಯಂತ್ರಿಸುವುದು ಕರ್ನಾಟಕದ ಪ್ರಮುಖ ಸವಾಲಾಗಿದೆ ಎಂದು ಬಿಳಿಮಲೆ ತಿಳಿಸಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರ 2017ರಲ್ಲಿ ಸಲ್ಲಿಕೆ ಮಾಡಿದ್ದ ಸರಕಾರಿ ಶಾಲೆಗಳ ಸಬಲೀಕರಣದ ವರದಿಯನ್ನು ರಾಜ್ಯ ಸರಕಾರಕ್ಕೆ ಮತ್ತೊಮ್ಮೆ ಸಲ್ಲಿಸುವುದರ ಜೊತೆಗೆ ವರದಿಯಲ್ಲಿನ 21 ಶಿಫಾರಸುಗಳನ್ನು ಅನುಷ್ಠಾನಕ್ಕೆ ತರುವಂತೆ ಒತ್ತಾಯಿಸುತ್ತೇನೆ ಎಂದು ಬಿಳಿಮಲೆ ಹೇಳಿದರು.

ಆಶಯ ನುಡಿಗಳನ್ನಾಡಿದ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ.ಎಲ್.ಎನ್.ಮುಕುಂದರಾಜ್, ಕನ್ನಡದ ಶಾಲೆ, ಸಂಸ್ಕೃತಿಯನ್ನು ಕನ್ನಡಿಗರೇ ಕೊಲ್ಲುತ್ತಿದ್ದಾರೆ. ಸಾವಿರಾರು ವರ್ಷಗಳಿಂದ ಇರುವ ಕನ್ನಡ, ಅನ್ನದ ಭಾಷೆಯಲ್ಲ ಅನ್ನೋದು ತಪ್ಪು ಗ್ರಹಿಕೆ. ಕನ್ನಡ ಶಾಲೆಯಲ್ಲಿ ಓದಿದವರು ಮೆಟ್ರೋ ರೂಪಿಸಿದರು. ಬುಲೆಟ್ ರೈಲು ತಯಾರಿ ಮಾಡುತ್ತಿದ್ದಾರೆ. ಆಂಗ್ಲ ಮಾಧ್ಯಮದಲ್ಲಿ ಓದಿದರೆ ಮಾತ್ರ ಕೆಲಸ ಸಿಗುತ್ತದೆ ಅನ್ನೋದು ತಪ್ಪು ಗ್ರಹಿಕೆ. ನಾವು ಬದುಕಬೇಕೆಂದರೆ ಕನ್ನಡ ಉಳಿಯಬೇಕು. ಸರಕಾರಿ ಅಧಿಕಾರಿಗಳು, ರಾಜಕಾರಣಿಗಳ ಮಕ್ಕಳನ್ನು ಸರಕಾರಿ ಶಾಲೆಗೆ ಸೇರಿಸಿದಾಗ ವ್ಯವಸ್ಥೆ ಸರಿಹೋಗುತ್ತದೆ ಎಂದರು.

'ಸರಕಾರಿ ಕನ್ನಡ ಶಾಲೆಗಳ ಇಂದಿನ ಸ್ಥಿತಿಗತಿಯ ಅವಲೋಕನ' ವಿಷಯದ ಬಗ್ಗೆ ವಿಷಯ ಮಂಡನೆ ಮಾಡಿದ ಡಾ.ನಿರಂಜನಾರಾಧ್ಯಾ, ಕನ್ನಡ ಶಾಲೆಗಳ ಸಬಲೀಕರಣದ ಕೂಗು ಹೆಚ್ಚಾದಂತೆಲ್ಲಾ ಕನ್ನಡ ಶಾಲೆಗಳು ದುರ್ಬಲವಾಗುತ್ತಿವೆ. ಎಲ್ಲಾ ಸಮ್ಮೇಳನದಲ್ಲೂ ಶಾಲೆಗಳ ಸಬಲೀಕರಣದ ಬಗ್ಗೆ ನಿರ್ಣಯ ತೆಗೆದುಕೊಳ್ಳುತ್ತಾ ಬರಲಾಗಿದೆ ಎಂದರು.

ಸರಕಾರಿ ಶಾಲೆಗಳು ಮೂಲ ಸೌಕರ್ಯದಿಂದ ವಂಚಿತವಾಗುತ್ತಿವೆ. ಸರಕಾರ ಕೂಡಲೇ ಖಾಲಿಯಿರುವ 43 ಸಾವಿರ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ಶಿಕ್ಷಣ ಹಕ್ಕು ಕಾಯ್ದೆ ಪರಿಣಾಮಕಾರಿಯಾಗಿ ಜಾರಿಯಾಗಬೇಕು. ಶಿಕ್ಷಕರ ಮೇಲಿನ ಹೊರೆ ತಗ್ಗಿಸಬೇಕು ಎಂದು ಹೇಳಿದರು.

'ಸರಕಾರಿ ಕನ್ನಡ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಸವಾಲುಗಳು' ಕುರಿತು ಮಾತನಾಡಿದ ಎಫ್.ಸಿ.ಚೇಗರಡ್ಡಿ, ಗುಣಮಟ್ಟ ಸುಧಾರಣೆ ಬಗ್ಗೆ ಸರಕಾರ ಶಿಕ್ಷಕರನ್ನು ಕೇಳದಿರುವುದು ವಿಷಾದ. ಶಿಕ್ಷಕರಿಗೆ ಬೋದನೇತರ ಕೆಲಸಗಳನ್ನು ವಹಿಸುತ್ತಿರುವುದರಿಂದ ಮಕ್ಕಳಲ್ಲಿ ಸಂವಿಧಾನದ ಮೌಲ್ಯ ತುಂಬುವ ಕೆಲಸ ಆಗುತ್ತಿಲ್ಲ. ಎಸೆಸ್ಸೆಲ್ಸಿ ಫಲಿತಾಂಶದಿಂದ ಶಿಕ್ಷಣದ ಗುಣಮಟ್ಟ ಅಳೆಯಲಾಗುತ್ತಿದೆ ಎಂದರು.

ʼಸರಕಾರಿ ಶಾಲೆಗಳಲ್ಲಿ ಕಲಿತ ಮಕ್ಕಳಿಗೆ ವೃತ್ತಿ ಶಿಕ್ಷಣ ಮತ್ತು ಉದ್ಯೋಗದ ಅವಕಾಶಗಳ' ಬಗ್ಗೆ ಮಾತನಾಡಿದ ಆನಂದ್ ಜಿ. ಅವರು, ನೀಟ್ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಎದುರಿಸುವುದು ಸವಾಲಾಗಿದೆ. ರಾಷ್ಟ್ರ ಮಟ್ಟದ ಪೈಪೋಟಿ ಎದುರಿಸಬೇಕಿದೆ. ಕೇಂದ್ರ ಸರಕಾರದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಅವಕಾಶ ಕಡಿಮೆ ಎಂದು ಹೇಳಿದರು.

ʼಗಡಿ ಭಾಗದ ಸರಕಾರಿ ಕನ್ನಡ ಶಾಲೆಗಳ ಸ್ಥಿತಿಗತಿ' ವಿಷಯದ ಬಗ್ಗೆ ವಿಷಯ ಮಂಡನೆ ಮಾಡಿದ ಸೋಮಣ್ಣ ಬೇವಿನ ಮರದ ಅವರು, ಗಡಿ ಶಾಲೆಗಳನ್ನು ಉಳಿಸುವ ಕೆಲಸವಾಗಬೇಕು. ಗಡಿ ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಬೇಕು. ಉದ್ಯೋಗ ಭದ್ರತೆ ನೀಡಬೇಕು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X