Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ʼಕರ್ನಾಟಕ ಬಂದ್ʼಗೆ ಮಂಡ್ಯದಲ್ಲಿ ಮಿಶ್ರ...

ʼಕರ್ನಾಟಕ ಬಂದ್ʼಗೆ ಮಂಡ್ಯದಲ್ಲಿ ಮಿಶ್ರ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ13 Aug 2026 6:14 PM IST
share
ʼಕರ್ನಾಟಕ ಬಂದ್ʼಗೆ ಮಂಡ್ಯದಲ್ಲಿ ಮಿಶ್ರ ಪ್ರತಿಕ್ರಿಯೆ

ಮಂಡ್ಯ : ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ಜಲ ನಿಯಂತ್ರಣ ಮಂಡಳಿ ಮತ್ತು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ವಿರೋಧಿಸಿ ಗುರುವಾರ ಕರೆ ನೀಡಿದ್ದ ಕರ್ನಾಟಕ ಬಂದ್ ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ತಮಿಳುನಾಡಿಗೆ 15 ದಿವಸಗಳ ಕಾಲ ನಿತ್ಯ 12,000 ಕ್ಯುಸೆಕ್ ನೀರು ಹರಿಸುವಂತೆ ನೀಡಿರುವ ಆದೇಶದ ವಿರುದ್ಧ ಕನ್ನಡ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ವಾಟಾಳ್ ನಾಗರಾಜ್ ಅಖಿಲ ಕರ್ನಾಟಕ ಬಂದ್ ಗೆ ಕರೆ ನೀಡಿದ್ದರು.

ಬಂದ್ ಬೆಂಬಲಿಸಿ ರೈತ, ಪ್ರಗತಿಪರ ಹಾಗೂ ಕನ್ನಡ ಪರ ಸಂಘಟನೆಗಳು ಮಂಡ್ಯ ಜಿಲ್ಲಾ ಬಂದ್ ನಡೆಸಲು ತೀರ್ಮಾನಿಸಿದ್ದು, ಅಂತೆಯೇ ಮಂಡ್ಯ ನಗರ ಸೇರಿದಂತೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಸಾರಿಗೆ ಬಸ್ ಸಂಚಾರ ಸೇರಿದಂತೆ ಆಟೋ, ಗೂಡ್ಸ್ ಟ್ಯಾಕ್ಸಿ, ಇತರೆ ವಾಹನಗಳ ಸಂಚಾರ, ಸರಕಾರಿ ಕಚೇರಿ, ಶಾಲಾ ಕಾಲೇಜು, ಬ್ಯಾಂಕ್, ಗಾರ್ಮೆಂಟ್ಸ್ ಕಂಪನಿಗಳ ಚಟುವಟಿಕೆಗಳು ಯಾವುದೇ ತಡೆಯಿಲ್ಲದೆ ನಡೆದವು.

ಮಂಡ್ಯ ನಗರದಲ್ಲಿ ಬೆಳಗ್ಗೆ 10 ಗಂಟೆಗೆ ಜಮಾವಣೆಗೊಂಡ ವಿವಿಧ ಸಂಘಟನೆಗಳ ಮುಖಂಡರು, ನಗರದ ವಿವಿಧೆಡೆ ಸಂಚರಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಕಾವೇರಿ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಅಂತೆಯೇ ಹೋರಾಟಗಾರರ ಮನವಿಗೆ ಸ್ಪಂದಿಸಿದ ವ್ಯಾಪಾರಸ್ಥರು ಕೆಲವು ಗಂಟೆಗಳ ಕಾಲ ಅಂಗಡಿಗಳನ್ನು ಬಂದ್ ಮಾಡಿ ಸಾಂಕೇತಿಕವಾಗಿ ಹೋರಾಟಕ್ಕೆ ಬೆಂಬಲ ಸೂಚಿಸಿ, ನಂತರ ತಮ್ಮ ವ್ಯಾಪಾರ ಚಟುವಟಿಕೆಗಳನ್ನು ಮುಂದುವರೆಸಿದರು.

ಮದ್ದೂರು, ಶ್ರೀರಂಗಪಟ್ಟಣ, ಪಾಂಡವಪುರ, ಕೆ.ಆರ್‌.ಪೇಟೆ ತಾಲೂಕು ಕೇಂದ್ರಗಳಲ್ಲಿ ಭಾಗಶಃ, ಬೆಸಗರಹಳ್ಳಿ, ಕೊಪ್ಪ, ಕೆ.ಎಂ.ದೊಡ್ಡಿ, ಇತರೆ ವಾಣಿಜ್ಯ ಕೇಂದ್ರ ಗ್ರಾಮಗಳಲ್ಲಿ ಬಂದ್ ಯಶಸ್ವಿಯಾಯಿತು. ಬಂದ್ ಹಿನ್ನೆಲೆಯಲ್ಲಿ ರೈತ ಮತ್ತು ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಕಾವೇರಿ ಜಲ ನಿಯಂತ್ರಣ ಸಮಿತಿ ವಿರುದ್ಧ ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದಲ್ಲಿ ಎಂದಿನಂತೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ರಾಜ್ಯ ಸರಕಾರವು ತಮಿಳುನಾಡಿಗೆ ನೀರು ಹರಿಸಬಾರದು ಎಂದು ಆಗ್ರಹಿಸಿದರು.

ಮುನ್ನೆಚ್ಚರಿಕೆಯ ಕ್ರಮವಾಗಿ ಆಯಕಟ್ಟಿನ ಸ್ಥಳದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಪ್ರತಿಭಟನಕಾರರ ಬಳಿಗೆ ತೆರಳಿದ ಜಿಲ್ಲಾಧಿಕಾರಿ ಡಾ.ಕುಮಾರ, ಶಾಂತಿಯುತವಾಗಿ ಹೋರಾಟ ನಡೆಸುವಂತೆ ಮನವಿ ಮಾಡಿದರು.

Tags

Karnataka Bandh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X