Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮಂಡ್ಯ
  4. ಮಂಡ್ಯ | ಮುಂದುವರಿದ ಮಳೆ : ಕಾವೇರಿ...

ಮಂಡ್ಯ | ಮುಂದುವರಿದ ಮಳೆ : ಕಾವೇರಿ ಜಲಾನಯನ ಪ್ರದೇಶದಲ್ಲಿರುವ ತೋಟ, ಕೃಷಿ ಭೂಮಿ ಜಲಾವೃತ

ವಾರ್ತಾಭಾರತಿವಾರ್ತಾಭಾರತಿ1 Aug 2024 7:33 PM IST
share
ಮಂಡ್ಯ | ಮುಂದುವರಿದ ಮಳೆ : ಕಾವೇರಿ ಜಲಾನಯನ ಪ್ರದೇಶದಲ್ಲಿರುವ ತೋಟ, ಕೃಷಿ ಭೂಮಿ ಜಲಾವೃತ

ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿರುವುದರಿಂದ ಕೆಆರ್‌ಎಸ್ ಅಣೆಕಟ್ಟೆಯಿಂದ ಕಾವೇರಿ ನದಿಗೆ 1.5 ಲಕ್ಷ ಕ್ಯುಸೆಕ್‍ಗೂ ಹೆಚ್ಚು ನೀರನ್ನು ನದಿಗೆ ಹರಿಸುತ್ತಿದ್ದು, ಜಲಾಶಯದ ತಗ್ಗಿನಲ್ಲಿರುವ ತೋಟಗಳು, ಇತರೆ ಕೃಷಿ ಭೂಮಿ, ಹಲವು ಕಟ್ಟಡಗಳು ಜಲಾವೃತವಾಗಿವೆ. ಶ್ರೀರಂಗಪಟ್ಟಣದ ಐತಿಹಾಸಿಕ ವೆಲ್ಲೆಸ್ಲಿ ಸೇತುವೆ ಮಟ್ಟಕ್ಕೆ ನದಿಯಲ್ಲಿ ನೀರು ಹರಿಯುತ್ತಿದೆ.

ಬುಧವಾರ ಸಂಜೆ ನದಿಗೆ ಅಣೆಕಟ್ಟೆಯಿಂದ 1 ಲಕ್ಷದ 70 ಸಾವಿರ ಕ್ಯೂಸೆಕ್ ನೀರು ನದಿಗೆ ಹರಿದ ಪರಿಣಾಮ ವೆಲ್ಲೆಸ್ಲಿ ಸೇತುವೆ ಮೇಲೆ ನೀರು ಹರಿದು ಪಕ್ಕದ ರಸ್ತೆಯ ತಡೆಗೋಡೆ ಕುಸಿದಿದೆ. ಗುರುವಾರ ನೀರು ಕಡಿಮೆಯಾಗಿರುವುದರಿಂದ ಸೇತುವೆ ಮಟ್ಟಕ್ಕೆ ಹರಿಯುತ್ತಿದೆ. ಪಶ್ಚಿಮವಾಹನಿಯ ರಸ್ತೆ ಜಲಾವೃತಗೊಂಡಿದ್ದು, ಪಾಲಹಳ್ಳಿ ಮಾರ್ಗದ ರಸ್ತೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಚಿಕ್ಕಪಾಳ್ಯ ಬಳಿ ಹಾಗೂ ಗಂಜಾಂನ ಕಾವೇರಿ ನದಿ ತೀರದ ಸ್ಮಶಾನ ಜಲಾವೃತವಾಗಿವೆ. ನಿಮಿಷಾಂಬ ದೇವಾಲಯದ ಮೆಟ್ಟಿಲುಗಳು ಸಂಪೂರ್ಣ ಮುಳುಗಿವೆ. ಹಂಗರಹಳ್ಳಿ ಗ್ರಾಮದ ಅಂಚಿನವರೆಗೂ ನದಿಯ ನೀರು ಚಾಚಿಕೊಂಡಿದೆ. ಶ್ರೀನಿವಾಸ ಅಗ್ರಹಾರ, ಮರಳಾಗಾಲ, ಮಹದೇವಪುರ, ಮೇಳಾಪುರ, ಚಂದಗಾಲು, ನಗುವನಹಳ್ಳಿ ಬಳಿ ನದಿ ಅಂಚಿನಲ್ಲಿರುವ ನೂರಾರು ಎಕರೆ ಕಬ್ಬು, ತೆಂಗು, ಬಾಳೆ ತೋಟಗಳು ಜಲಾವೃತವಾಗಿವೆ.

ಬಿದ್ದೋಟೆ ಗಣಪತಿ ದೇವಾಲಯ ನೀರಿನಲ್ಲಿ ಸಂಪೂರ್ಣ ಮುಳುಗಿದೆ. ಕಿರಂಗೂರು ವೃತ್ತದಿಂದ ವಿಸಿಆರ್ ಲೇಔಟ್‍ಗೆ ಇದ್ದ ಏಕೈಕ ಮಾರ್ಗದಲ್ಲಿ ನಾಲ್ಕು ಅಡಿಗಳಷ್ಟು ನೀರು ಹರಿಯುತ್ತಿದ್ದು, ಸಂಪರ್ಕ ಕಡಿತಗೊಂಡಿದೆ. ಪಟ್ಟಣದ ಸ್ಥಾನಘಟ್ಟ, ಜೀವಿ ಗೇಟ್, ಪಶ್ಚಿಮವಾಹಿನಿ ಬಳಿ ಕೂಡ ನೀರಿನ ಮಟ್ಟ ಹೆಚ್ಚಾಗಿದೆ. ಅತ್ತ ಯಾರೂ ಸುಳಿಯದಂತೆ ಬ್ಯಾರಿಕೇಡ್ ಅಳವಡಿಸಲಾಗಿದೆ.

ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ಸ್ಥಳಗಳಾದ ಕೆಆರ್‌ಎಸ್ ಜಲಾಶಯ, ಬೃಂದಾವನ ಉದ್ಯಾನ, ಪಶ್ಚಿಮವಾಹಿನಿ, ಗೋಸಾಯ್ ಘಾಟ್, ಬಲಮುರಿ ಎಡಮುರಿ, ವೆಲ್ಲೆಸ್ಲಿ ಸೇತುವೆ, ನಿಮಿಷಾಂಬ ದೇವಸ್ಥಾನದ ಪಕ್ಕದಲ್ಲಿರುವ ಸ್ನಾನಘಟ್ಟ, ರಂಗನತಿಟ್ಟು, ಕಾವೇರಿ ನದಿ ವೀಕ್ಷಣೆಗೆ ಸಾರ್ವಜನಿಕರ ಹಾಗೂ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಕುಮಾರ ಆದೇಶ ಹೊರಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X